ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಾಲುಮರದ ತಿಮ್ಮಕ್ಕ ಗುಣಮುಖ

Last Updated 28 ಮೇ 2020, 20:00 IST
ಅಕ್ಷರ ಗಾತ್ರ

ಹಾಸನ: ಆರೋಗ್ಯದ ಚೇತರಿಕೆ ಕಂಡು ಬಂದ ಹಿನ್ನೆಲೆಯಲ್ಲಿನಗರದ ಮಣಿ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆಯಿಂದ ಪರಿಸರ ಕಾರ್ಯಕರ್ತೆ ಸಾಲು ಮರದ ತಿಮ್ಮಕ್ಕ ಅವರನ್ನು ಮಂಗಳವಾರ ಬಿಡುಗಡೆ ಮಾಡಲಾಗಿದೆ.

‘ತೀವ್ರ ಹೊಟ್ಟೆನೋವು, ವಾಂತಿ– ಭೇದಿಯಿಂದ ಅಸ್ಪಸ್ಥಗೊಂಡಿದ್ದ ಅವರಿಗೆ 5 ದಿನ ಚಿಕಿತ್ಸೆ ನೀಡಲಾಯಿತು. ಸಂಪೂರ್ಣ ಗುಣಮುಖರಾಗಿದ್ದರಿಂದ ಬಿಡುಗಡೆ ಮಾಡಲಾಯಿತು. ವಾರದ ಬಳಿಕೆ ಮತ್ತೊಮ್ಮೆ ತಪಾಸಣೆಗೆ ಬರುವಂತೆ ಸೂಚಿಸಲಾಗಿದೆ’ ಎಂದು ಚಿಕಿತ್ಸೆ ನೀಡಿದ ವೈದ್ಯೆ ಸೌಮ್ಯ ಮಣಿ ತಿಳಿಸಿದರು.

‘ಆಸ್ಪತ್ರೆಯಲ್ಲಿ ಉಚಿತ ಚಿಕಿತ್ಸೆ ನೀಡಲಾಯಿತು. ಲಾಕ್‌ಡೌನ್‌ ಇದ್ದ ಕಾರಣ ಹೋಟೆಲ್‌ಗಳು ಬಂದ್ ಆಗಿದ್ದವು. ಆರೋಗ್ಯದಲ್ಲಿ ವ್ಯತ್ಯಾಸವಾಗದಂತೆ ಡಾ.ಸೌಮ್ಯಾಮಣಿ ತಮ್ಮ ಮನೆಯಿಂದಲೇ ಊಟದ ವ್ಯವಸ್ಥೆ ಮಾಡಿದರು. ಬೆಂಗಳೂರಿನ ಅಪೊಲೊ ಆಸ್ಪತ್ರೆಯಲ್ಲಿ ಆರೋಗ್ಯ ತಪಾಸಣೆಮಾಡಿಸುತ್ತಿದ್ದೇವು. ಹಾಗಾಗಿ ಅಲ್ಲಿನ ವೈದ್ಯರ ಸಲಹೆ ಪಡೆಯುವಂತೆ ಹೇಳಿದ್ದಾರೆ. ಆಗಾಗ್ಗೆ ಕರೆ ಮಾಡಿ ಆರೋಗ್ಯ ವಿಚಾರಿಸುತ್ತಾರೆ. ಪ್ರಸ್ತುತ ಬೇಲೂರು ತಾಲ್ಲೂಕಿನ ಬಳ್ಳೂರಿನಲ್ಲಿ ವಾಸ್ತವ್ಯ ಇದ್ದು, ಆರಾಮವಾಗಿ ಇದ್ದಾರೆ’ ಎಂದು ತಿಮ್ಮಕ್ಕ ಅವರ ದತ್ತು ಪುತ್ರ ಬಳ್ಳೂರು ಉಮೇಶ್‌ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT