ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ಮಾತನಾಡಿ, ‘ಹಾಸನಾಂಬೆ, ಸಿದ್ದೇಶ್ವರ ಸ್ವಾಮಿ ಉತ್ಸವ ಆರಂಭವಾಗಿದೆ. ಪ್ರತಿ ವರ್ಷದಂತೆ ಈ ವರ್ಷವೂ ಶಾಸ್ತ್ರೋಕ್ತವಾಗಿ ಉತ್ಸವ ನಡೆಯಲಿದೆ. ದೇವಾಲಯ ಬಾಗಿಲು ತೆರೆದಾಗ ದೀಪ ಉರಿಯುತ್ತಿತ್ತು. ಕೊರೊನಾ ಹಿನ್ನೆಲೆಯಲ್ಲಿ ಸಾರ್ವಜನಿಕ ದರ್ಶನ ಇಲ್ಲ. ಯಾರೂ ದೇವಾಲಯ ಬಳಿ ಬರುವುದು ಬೇಡ. ತಾಯಿ ಆಶೀರ್ವಾದದಿಂದ ಹಾಸನ, ನಾಡು, ದೇಶದಲ್ಲಿ ಕೊರೊನಾ ತೊಲಗಲಿ ಎಂದು ಪ್ರಾರ್ಥನೆ ಮಾಡಿದ್ದೇನೆ’ ಎಂದು ಹೇಳಿದರು.