<p><strong>ಹಾಸನ</strong>: ಆಲೂರು ತಾಲ್ಲೂಕಿನ ಚೌಲಗೆರೆ ಬಳಿಯ ಬೆಂಗಳೂರು – ಮಂಗಳೂರು ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಸೋಮವಾರದಿಂದ ಆರಂಭವಾದ ಟೋಲ್ ಸಂಗ್ರಹವನ್ನು ಜನರ ಪ್ರತಿಭಟನೆ ಕಾರಣ ಸ್ಥಗಿತಗೊಳಿಸಲಾಗಿದ್ದು, ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.</p>.<p>ಏಕಾಏಕಿ ಟೋಲ್ ಸಂಗ್ರಹ ಆರಂಭಿಸಿದ್ದರಿಂದ ರೊಚ್ಚಿಗೆದ್ದ ಸ್ಥಳೀಯರು ಹಾಗೂ ವಿವಿಧ ಕನ್ನಡಪರ ಸಂಘಟನೆಗಳ ಸದಸ್ಯರು, ಹೆದ್ದಾರಿ ಪ್ರಾಧಿಕಾರದ ವಿರುದ್ಧ ಪ್ರತಿಭಟನೆ ನಡೆಸಿದರು. ‘ರಸ್ತೆ ಕಾಮಗಾರಿ ಕಳಪೆಯಾಗಿದೆ. ಸಕಲೇಶಪುರದಿಂದ ಮಾರನಹಳ್ಳಿವರೆಗೂ ರಸ್ತೆ ಪೂರ್ಣಗೊಂಡಿಲ್ಲ. ಆದರೂ ಟೋಲ್ ಸಂಗ್ರಹಿಸಲಾಗುತ್ತಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>‘ಕಾರಿಗೆ ಒಮ್ಮೆಗೆ ₹50, ಎರಡು ಬಾರಿಗೆ ₹75, ಮಿನಿ ಲಾರಿ, ಮಿನಿ ಬಸ್ಗೆ ಒಂದು ಸಲಕ್ಕೆ ₹80, ಎರಡು ಬಾರಿಗೆ ₹120, ಬಸ್ಗಳಿಗೆ ಒಮ್ಮೆಗೆ ₹165, ಎರಡು ಬಾರಿಗೆ ₹245, ಟ್ರಕ್, ಟ್ಯಾಂಕರ್ಗಳಿಗೆ ಒಮ್ಮೆಗೆ ₹180, ಎರಡು ಬಾರಿಗೆ ₹270, ಕಂಟೇನರ್ಗಳಿಗೆ ಒಮ್ಮೆಗೆ ₹260 ಹಾಗೂ ಎರಡು ಬಾರಿಗೆ ₹385 ನಿಗದಿ ಮಾಡಲಾಗಿದ್ದು, ವಾಹನಗಳ ಮಾಲೀಕರಿಗೆ ಹೊರೆಯಾಗಲಿದೆ’ ಎಂದು ಹೇಳಿದರು.</p>.<p>‘ನಿಯಮದ ಪ್ರಕಾರ ಪ್ರತಿ 60 ಕಿ.ಮೀ. ಅಂತರದಲ್ಲಿ ಟೋಲ್ ಕೇಂದ್ರವಿರಬೇಕು. ಆದರೆ, ಈಗಾಗಲೇ ಶಾಂತಿಗ್ರಾಮದಲ್ಲಿ ಟೋಲ್ ಇದ್ದು, ಅಲ್ಲಿಂದ ಆಲೂರು ತಾಲ್ಲೂಕಿನ ಚೌಲಗೆರೆ ಬಳಿಯ ಟೋಲ್ಗೆ ಕೇವಲ 30 ಕಿ.ಮೀ. ದೂರವಿದೆ. ನಿಯಮ ಮೀರಿ ಟೋಲ್ ಸಂಗ್ರಹಿಸಲಾಗುತ್ತಿದೆ’ ಎಂದು ಆರೋಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾಸನ</strong>: ಆಲೂರು ತಾಲ್ಲೂಕಿನ ಚೌಲಗೆರೆ ಬಳಿಯ ಬೆಂಗಳೂರು – ಮಂಗಳೂರು ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಸೋಮವಾರದಿಂದ ಆರಂಭವಾದ ಟೋಲ್ ಸಂಗ್ರಹವನ್ನು ಜನರ ಪ್ರತಿಭಟನೆ ಕಾರಣ ಸ್ಥಗಿತಗೊಳಿಸಲಾಗಿದ್ದು, ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.</p>.<p>ಏಕಾಏಕಿ ಟೋಲ್ ಸಂಗ್ರಹ ಆರಂಭಿಸಿದ್ದರಿಂದ ರೊಚ್ಚಿಗೆದ್ದ ಸ್ಥಳೀಯರು ಹಾಗೂ ವಿವಿಧ ಕನ್ನಡಪರ ಸಂಘಟನೆಗಳ ಸದಸ್ಯರು, ಹೆದ್ದಾರಿ ಪ್ರಾಧಿಕಾರದ ವಿರುದ್ಧ ಪ್ರತಿಭಟನೆ ನಡೆಸಿದರು. ‘ರಸ್ತೆ ಕಾಮಗಾರಿ ಕಳಪೆಯಾಗಿದೆ. ಸಕಲೇಶಪುರದಿಂದ ಮಾರನಹಳ್ಳಿವರೆಗೂ ರಸ್ತೆ ಪೂರ್ಣಗೊಂಡಿಲ್ಲ. ಆದರೂ ಟೋಲ್ ಸಂಗ್ರಹಿಸಲಾಗುತ್ತಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>‘ಕಾರಿಗೆ ಒಮ್ಮೆಗೆ ₹50, ಎರಡು ಬಾರಿಗೆ ₹75, ಮಿನಿ ಲಾರಿ, ಮಿನಿ ಬಸ್ಗೆ ಒಂದು ಸಲಕ್ಕೆ ₹80, ಎರಡು ಬಾರಿಗೆ ₹120, ಬಸ್ಗಳಿಗೆ ಒಮ್ಮೆಗೆ ₹165, ಎರಡು ಬಾರಿಗೆ ₹245, ಟ್ರಕ್, ಟ್ಯಾಂಕರ್ಗಳಿಗೆ ಒಮ್ಮೆಗೆ ₹180, ಎರಡು ಬಾರಿಗೆ ₹270, ಕಂಟೇನರ್ಗಳಿಗೆ ಒಮ್ಮೆಗೆ ₹260 ಹಾಗೂ ಎರಡು ಬಾರಿಗೆ ₹385 ನಿಗದಿ ಮಾಡಲಾಗಿದ್ದು, ವಾಹನಗಳ ಮಾಲೀಕರಿಗೆ ಹೊರೆಯಾಗಲಿದೆ’ ಎಂದು ಹೇಳಿದರು.</p>.<p>‘ನಿಯಮದ ಪ್ರಕಾರ ಪ್ರತಿ 60 ಕಿ.ಮೀ. ಅಂತರದಲ್ಲಿ ಟೋಲ್ ಕೇಂದ್ರವಿರಬೇಕು. ಆದರೆ, ಈಗಾಗಲೇ ಶಾಂತಿಗ್ರಾಮದಲ್ಲಿ ಟೋಲ್ ಇದ್ದು, ಅಲ್ಲಿಂದ ಆಲೂರು ತಾಲ್ಲೂಕಿನ ಚೌಲಗೆರೆ ಬಳಿಯ ಟೋಲ್ಗೆ ಕೇವಲ 30 ಕಿ.ಮೀ. ದೂರವಿದೆ. ನಿಯಮ ಮೀರಿ ಟೋಲ್ ಸಂಗ್ರಹಿಸಲಾಗುತ್ತಿದೆ’ ಎಂದು ಆರೋಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>