ರಾಜಧಾನಿ ಬೆಂಗಳೂರಿನಲ್ಲಿ ಗುರುವಾರ ಮಧ್ಯಾಹ್ನದಿಂದ ಶುಕ್ರವಾರ ಬೆಳಗ್ಗೆ 6ರ ವರೆಗೆ ನಿಷೇಧಾಜ್ಞೆ ಜಾರಿಯಲ್ಲಿರುವ ಕಾರಣ ಸಾವಿರಾರು ಜನರು ಜಿಲ್ಲೆಯ ಮಲೆನಾಡಿನತ್ತ ಮುಖ ಮಾಡಿದ್ದಾರೆ. ಸಕಲೇಶಪುರ, ಆಲೂರು, ಬೇಲೂರು ತಾಲ್ಲೂಕುಗಳ ಹೋಂ ಸ್ಟೇಗಳು, ಹೋಟೆಲ್, ರೆಸಾರ್ಟ್ಗಳು ಭರ್ತಿಯಾಗಿದೆ. ಹೋಂ ಸ್ಟೇಗಳ ಮಾಲೀಕರು ಅತಿಥಿಗಳಿಗೆ ಹಾಡು, ನೃತ್ಯ, ಡಿಜೆ ಗೆ ಅವಕಾಶ ಕಲ್ಪಿಸಿದ್ದಾರೆ.
ಸಕಲೇಶಪುರ ತಾಲ್ಲೂಕಿನ ಪ್ರೇಕ್ಷಣೀಯ ಸ್ಥಳಗಳಾದ ಮಂಜ್ರಾಬಾದ್ ಕೋಟೆ, ಬಿಸಿಲೆ ಘಾಟ್, ಮೂಕನ ಮನೆ ಜಲಪಾತ, ಕಾಡುಮನೆ ಎಸ್ಟೇಟ್ ಸೇರಿ ವಿವಿಧ ಬೆಟ್ಟ ಗುಡ್ಡಗಳಿಗೆ ಪ್ರವಾಸಿಗರು ಭೇಟಿ ನೀಡುತ್ತಿದ್ದಾರೆ.