ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಶಿರಾಡಿ ಘಾಟ್‌ನಲ್ಲಿ ರಸ್ತೆಗೆ ಬಿದ್ದ ಮರ: ಮಂಗಳೂರು-ಬೆಂಗಳೂರು ನಡುವೆ ಸಂಚಾರ ಬಂದ್

Published 13 ಮೇ 2024, 5:51 IST
Last Updated 13 ಮೇ 2024, 5:51 IST
ಅಕ್ಷರ ಗಾತ್ರ

ಹಾಸನ: ಕಳೆದ ರಾತ್ರಿಯಿಂದ ಬಿರುಗಾಳಿ ಸಹಿತ ಸುರಿದ ಭಾರಿ ಮಳೆಗೆ ಮಂಗಳೂರು-ಬೆಂಗಳೂರು ನಡುವೆ ಸಂಪರ್ಕ ಕಲ್ಪಿಸುವ ಪ್ರಮುಖ ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಘಾಟ್ ಮಾರ್ಗದಲ್ಲಿ ರಸ್ತೆಗೆ ಅಡ್ಡವಾಗಿ ಮರ ಉರುಳಿಬಿದ್ದು ವಾಹನ ಸಂಚಾರ ಬಂದ್ ಆಗಿದೆ.

ಭಾರಿ ಗಾಳಿ ಸಹಿತ ತಿಂಗಳುಗಳ ನಂತರ ಬಿರುಸಿನ‌ ಮಳೆ ಸುರಿದಿದೆ. ಪರಿಣಾಮ ಮರ ಉರುಳಿದ್ದು ವಾಹನಗಳು ಸಂಚಾರ ಮಾಡಲು ಆಗದ ಸ್ಥಿತಿ ಬಂದಿದೆ.

ಅರಣ್ಯ, ಹೆದ್ದಾರಿ ಇಲಾಖೆ ಸಿಬ್ಬಂದಿ ಹಾಗೂ ಪೊಲೀಸರು ಸ್ಥಳಕ್ಕೆ ತೆರಳಿ ಮರ ತೆರವಿಗೆ ಯತ್ನ ಆರಂಭಿಸಿದ್ದಾರೆ. ಎರಡು ಗಂಟೆಗೂ ಹೆಚ್ಚುಕಾಲ ವಾಹನಗಳಲ್ಲೆ ಸಿಲುಕಿರುವ ಪ್ರಯಾಣಿಕರು ಪರದಾಡುವಂತಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT