‘ತೃತೀಯ ಲಿಂಗಿಗಳಿಗೆ ಮೊದಲು ಶಿಕ್ಷಣದಲ್ಲಿಮೀಸಲಾತಿ ನೀಡಬೇಕು. ಉತ್ತಮ ಶಿಕ್ಷಣದ ಜತೆಗೆ ಉದ್ಯೋಗ ಮೀಸಲಾತಿ ಹಾಗೂ ಆರೋಗ್ಯ ಸೇವೆ ಒದಗಿಸಬೇಕು. ಈ ಮಸೂದೆ ಲೈಂಗಿಕ ಅಲ್ಪಸಂಖ್ಯಾತರ ಜೀವನದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ. ಹಾಗಾಗಿ ಇದನ್ನು ವಾಪಸ್ ಪಡೆಯದಿದ್ದರೆ ರಾಷ್ಟ್ರ ವ್ಯಾಪಿ ಹೋರಾಟ ನಡೆಸಲಾಗುವುದು’ ಎಂದು ಎಚ್ಚರಿಕೆ ನೀಡಿದರು.
ಪ್ರಕೃತಿ ಸಮುದಾಯ ಸೇವಾ ಸಂಸ್ಥೆಯ ಅಧ್ಯಕ್ಷೆ ವರ್ಷಾ, ಅಶ್ವಥ್, ಜಾಹ್ನವಿ, ಶೋಭಾ, ರಾಜೀವ್, ದಲಿತ ಮುಖಂಡರಾದ ನಾಗರಾಜ್ ಹೆತ್ತೂರು, ಮರಿಜೋಸೆಫ್ ಇದ್ದರು.