ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್ ಮಾತನಾಡಿ, ಕ್ಷಯ ರೋಗಿಗಳು ನಿರಂತರ 6 ತಿಂಗಳು ಸೂಕ್ತ ಚಿಕತ್ಸೆ ಪಡೆದರೆ ರೋಗದಿಂದ ಮುಕ್ತಿ ಹೊಂದಬಹುದು. ನಿಯಮಿತವಾಗಿ ಔಷಧ ತೆಗೆದುಕೊಳ್ಳದಿದ್ದರೆ ಅಡ್ಡ ಪರಿಣಾಮಗಳು ಉಂಟಾಗಬಹುದು. ಎರಡು ವಾರಕ್ಕೂ ಹೆಚ್ಚು ಕೆಮ್ಮು, ಜ್ವರ, ಶೀತ ಕಂಡು ಬಂದಲ್ಲಿ ಹತ್ತಿರದ ಆಸ್ಪತ್ರೆ ಗಳಿಗೆ ಭೇಟಿ ನೀಡಿ ಕ್ಷಯ ರೋಗ ಪರೀಕ್ಷೆ ಮಾಡಿಸಬೇಕು. ರೋಗವು ಯಾರಿಗೆ ಬೇಕಾದರೂ ಬರಬಹುದು. ಅದರಲ್ಲೂ ಎಚ್ಐವಿ ಸೋಂಕಿತರು, ಮಧುಮೇಹ ಪೀಡಿತರು ಹಾಗೂ ಧೂಮಪಾನ ಮಾಡುವವರು ಬಹುಬೇಗ ಸೋಂಕಿಗೆ ಒಳಗಾಗುತ್ತಾರೆ ಎಂದು ಎಚ್ಚರಿಸಿದರು.