ವಿಧಾನ ಪರಿಷತ್ ಪ್ರತಿಪಕ್ಷದ ನಾಯಕ ಬಿ.ಕೆ. ಹರಿಪ್ರಸಾದ ಮಾತನಾಡಿ, ’ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಪದೇ ಪದೇ ರಾಜ್ಯಕ್ಕೆ ಬರುತ್ತಿದ್ದಾರೆ. ಇಲ್ಲಿಗೆ ಬರುವುದಕ್ಕೆ ಯಾವುದೇ ತೊಂದರೆ ಇಲ್ಲ. ಬಂದಾಗ ರಾಜ್ಯಕ್ಕೆ ಕೊಡುಗೆ ಕೊಟ್ಟು ಹೋಗಿ. ಅದನ್ನು ಬಿಟ್ಟು ಇಲ್ಲಿನ ಅಮುಲ್, ಕಾರ್ಖಾನೆ, ಶಿಕ್ಷಣ ಸಂಸ್ಥೆಗಳನ್ನು ತೆಗೆದುಕೊಂಡು ಹೋಗುವ ಕೆಲಸ ಮಾಡಬೇಡಿ‘ ಎಂದು ತಾಕೀತು ಮಾಡಿದರು.