<p><strong>ಚನ್ನರಾಯಪಟ್ಟಣ:</strong> ಪಟ್ಟಣದ ಹೊರವಲಯದಲ್ಲಿರುವ ಕಗ್ಗಲಿಕಾವಲು ಬಳಿ ಇನ್ನೋವ ಕಾರು ಡಿಕ್ಕಿ ಹೊಡೆದ ಪರಿಣಾಮ ಬೈಕಿನಲ್ಲಿದ್ದ ಇಬ್ಬರು ಸ್ಥಳದಲ್ಲಿ ಮೃತಪಟ್ಟಿರುವ ಘಟನೆ ಭಾನುವಾರ ನಡೆದಿದೆ.</p>.<p>ಬೈಕಿನಲ್ಲಿ ಪ್ರಯಾಣಿಸುತ್ತಿದ್ದ ಬೆಂಗಳೂರು ನಗರದ ಬಸವರಾಜು (20), ಅನುಶ್ರೀ (20) ಮೃತಪಟ್ಟವರು. ಅನುಶ್ರೀ ಸೋದರ ಸಂಬಂಧಿ ಛಾಯಾ ಗಾಯಗೊಂಡಿದ್ದಾರೆ. ಮತ್ತೊಂದು ಬೈಕಿನಲ್ಲಿದ್ದ ಚನ್ನರಾಯಪಟ್ಟಣದ ಮಹಮದ್ ಶಾಹಿದ್ ಸಹ ಗಾಯಗೊಂಡಿದ್ದಾರೆ.</p>.<p>ಬಸವರಾಜು, ಅನುಶ್ರೀ ಮತ್ತು ಛಾಯಾ ಅವರು ಕುಶಾಲನಗರದಲ್ಲಿರುವ ಗೋಲ್ಡನ್ ಟೆಂಪಲ್ ವೀಕ್ಷಿಸಿ ಬೆಂಗಳೂರಿಗೆ ಬೈಕಿನಲ್ಲಿ ಹಿಂದಿರುಗುತ್ತಿದ್ದರು. ಅದೇ ಸಂದರ್ಭದಲ್ಲಿ ಬೆಂಗಳೂರು ಕಡೆಯಿಂದ ಮಡಿಕೇರಿ ನಗರಕ್ಕೆ ತೆರಳುತ್ತಿದ್ದ ಇನ್ನೋವ ಕಾರು ಬೈಕಿಗೆ ಹೊಡೆದಿದೆ. ನಿಯಂತ್ರಣ ಕಳೆದುಕೊಂಡ ಕಾರು ಮತ್ತೊಂದು ಬೈಕಿಗೆ ಡಿಕ್ಕಿ ಹೊಡೆದಾಗ ಈ ಬೈಕಿನಲ್ಲಿದ್ದ ಮಹಮದ್ ಶಾಹೀದ್ ಅವರಿಗೆ ಗಾಯವಾಗಿದೆ.</p>.<p>ಛಾಯಾ ಅವರಿಗೆ ಚನ್ನರಾಯಪಟ್ಟಣದ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚನ್ನರಾಯಪಟ್ಟಣ:</strong> ಪಟ್ಟಣದ ಹೊರವಲಯದಲ್ಲಿರುವ ಕಗ್ಗಲಿಕಾವಲು ಬಳಿ ಇನ್ನೋವ ಕಾರು ಡಿಕ್ಕಿ ಹೊಡೆದ ಪರಿಣಾಮ ಬೈಕಿನಲ್ಲಿದ್ದ ಇಬ್ಬರು ಸ್ಥಳದಲ್ಲಿ ಮೃತಪಟ್ಟಿರುವ ಘಟನೆ ಭಾನುವಾರ ನಡೆದಿದೆ.</p>.<p>ಬೈಕಿನಲ್ಲಿ ಪ್ರಯಾಣಿಸುತ್ತಿದ್ದ ಬೆಂಗಳೂರು ನಗರದ ಬಸವರಾಜು (20), ಅನುಶ್ರೀ (20) ಮೃತಪಟ್ಟವರು. ಅನುಶ್ರೀ ಸೋದರ ಸಂಬಂಧಿ ಛಾಯಾ ಗಾಯಗೊಂಡಿದ್ದಾರೆ. ಮತ್ತೊಂದು ಬೈಕಿನಲ್ಲಿದ್ದ ಚನ್ನರಾಯಪಟ್ಟಣದ ಮಹಮದ್ ಶಾಹಿದ್ ಸಹ ಗಾಯಗೊಂಡಿದ್ದಾರೆ.</p>.<p>ಬಸವರಾಜು, ಅನುಶ್ರೀ ಮತ್ತು ಛಾಯಾ ಅವರು ಕುಶಾಲನಗರದಲ್ಲಿರುವ ಗೋಲ್ಡನ್ ಟೆಂಪಲ್ ವೀಕ್ಷಿಸಿ ಬೆಂಗಳೂರಿಗೆ ಬೈಕಿನಲ್ಲಿ ಹಿಂದಿರುಗುತ್ತಿದ್ದರು. ಅದೇ ಸಂದರ್ಭದಲ್ಲಿ ಬೆಂಗಳೂರು ಕಡೆಯಿಂದ ಮಡಿಕೇರಿ ನಗರಕ್ಕೆ ತೆರಳುತ್ತಿದ್ದ ಇನ್ನೋವ ಕಾರು ಬೈಕಿಗೆ ಹೊಡೆದಿದೆ. ನಿಯಂತ್ರಣ ಕಳೆದುಕೊಂಡ ಕಾರು ಮತ್ತೊಂದು ಬೈಕಿಗೆ ಡಿಕ್ಕಿ ಹೊಡೆದಾಗ ಈ ಬೈಕಿನಲ್ಲಿದ್ದ ಮಹಮದ್ ಶಾಹೀದ್ ಅವರಿಗೆ ಗಾಯವಾಗಿದೆ.</p>.<p>ಛಾಯಾ ಅವರಿಗೆ ಚನ್ನರಾಯಪಟ್ಟಣದ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>