<p><strong>ಹಾಸನ</strong>: ನಗರ ಸಮೀಪದ ಹನುಮಂತಪುರದಲ್ಲಿ ಬಾಡಿಗೆ ಮನೆಯಲ್ಲಿ ಇಬ್ಬರು ವ್ಯಕ್ತಿಗಳು ಶವ ದೊರೆತಿದ್ದು, ಕುಡಿತ ಮತ್ತು ನಿದ್ದೆ ಮಾತ್ರೆ ಸೇವನೆಯಿಂದ ಮೃತಪಟ್ಟಿದ್ದಾರೆ ಎಂದು ಎಸ್ಪಿ ಹರಿರಾಂ ಶಂಕರ್ ತಿಳಿಸಿದರು .</p>.<p>ಉತ್ತರ ಪ್ರದೇಶದ ಕಾನ್ಪುರದ ನಬಾಬ್ (24 ), ರಾಮ್ ಸಜೀವನ್ (26) ಮೃತಪಟ್ಟ ವ್ಯಕ್ತಿಗಳು. ಇವರು ಸ್ಥಳೀಯ ಕಾರ್ಖಾನೆಯಲ್ಲಿ ಕೆಲಸಕ್ಕೆ ಸೇರಿದ್ದು, ಜುಲೈ 3 ರಂದು ನಗರಕ್ಕೆ ಬಂದು ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು.</p>.<p>ಜುಲೈ 14ರ ರಾತ್ರಿ ಅಲ್ಲಿನ ನಿವಾಸಿಗಳು ಪೊಲೀಸರಿಗೆ ಮಾಹಿತಿ ನೀಡಿದ್ದು, ಬಾಗಿಲು ಒಡೆದು ಪರಿಶೀಲಿಸಿದಾಗ ಇಬ್ಬರು ಸಾವಿಗೀಡಾಗಿರುವುದು ತಿಳಿದುಬಂದಿದೆ.</p>.<p>ನಬೀಬ್ ಎಂಬುವವರು ಹಲವು ದಿನಗಳಿಂದ ಕಡಿಮೆ ರಕ್ತದೊತ್ತಡದಿಂದ ಬಳಲುತ್ತಿದ್ದರು. ಕುಡಿತದ ಚಟ ಹೊಂದಿದ್ದರು ಎಂದು ಮಾಹಿತಿ ಲಭ್ಯವಾಗಿದ್ದು, ರಾಮ್ ಸಜೀವನ್ ನಿತ್ಯ ನಿದ್ದೆ ಮಾತ್ರೆ ತೆಗೆದುಕೊಳ್ಳುತ್ತಿದ್ದರು ಎಂದು ತಿಳಿದು ಬಂದಿದೆ.</p>.<p>ಅತಿಯಾದ ಕುಡಿತ ಹಾಗೂ ನಿದ್ದೆ ಮಾತ್ರೆಯಿಂದ ಇಬ್ಬರೂ ಮೃತಪಟ್ಟಿರುವುದು ವೈದ್ಯರು ಪ್ರಾಥಮಿಕ ಹಂತದ ತನಿಖೆಯಿಂದ ತಿಳಿದಿದೆ. ಮರಣೋತ್ತರ ಪರೀಕ್ಷೆ ನಂತರ ನಿಖರವಾದ ಕಾರಣ ತಿಳಿಯಲಿದೆ ಎಂದು ಹರಿರಾಂ ಶಂಕರ್ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾಸನ</strong>: ನಗರ ಸಮೀಪದ ಹನುಮಂತಪುರದಲ್ಲಿ ಬಾಡಿಗೆ ಮನೆಯಲ್ಲಿ ಇಬ್ಬರು ವ್ಯಕ್ತಿಗಳು ಶವ ದೊರೆತಿದ್ದು, ಕುಡಿತ ಮತ್ತು ನಿದ್ದೆ ಮಾತ್ರೆ ಸೇವನೆಯಿಂದ ಮೃತಪಟ್ಟಿದ್ದಾರೆ ಎಂದು ಎಸ್ಪಿ ಹರಿರಾಂ ಶಂಕರ್ ತಿಳಿಸಿದರು .</p>.<p>ಉತ್ತರ ಪ್ರದೇಶದ ಕಾನ್ಪುರದ ನಬಾಬ್ (24 ), ರಾಮ್ ಸಜೀವನ್ (26) ಮೃತಪಟ್ಟ ವ್ಯಕ್ತಿಗಳು. ಇವರು ಸ್ಥಳೀಯ ಕಾರ್ಖಾನೆಯಲ್ಲಿ ಕೆಲಸಕ್ಕೆ ಸೇರಿದ್ದು, ಜುಲೈ 3 ರಂದು ನಗರಕ್ಕೆ ಬಂದು ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು.</p>.<p>ಜುಲೈ 14ರ ರಾತ್ರಿ ಅಲ್ಲಿನ ನಿವಾಸಿಗಳು ಪೊಲೀಸರಿಗೆ ಮಾಹಿತಿ ನೀಡಿದ್ದು, ಬಾಗಿಲು ಒಡೆದು ಪರಿಶೀಲಿಸಿದಾಗ ಇಬ್ಬರು ಸಾವಿಗೀಡಾಗಿರುವುದು ತಿಳಿದುಬಂದಿದೆ.</p>.<p>ನಬೀಬ್ ಎಂಬುವವರು ಹಲವು ದಿನಗಳಿಂದ ಕಡಿಮೆ ರಕ್ತದೊತ್ತಡದಿಂದ ಬಳಲುತ್ತಿದ್ದರು. ಕುಡಿತದ ಚಟ ಹೊಂದಿದ್ದರು ಎಂದು ಮಾಹಿತಿ ಲಭ್ಯವಾಗಿದ್ದು, ರಾಮ್ ಸಜೀವನ್ ನಿತ್ಯ ನಿದ್ದೆ ಮಾತ್ರೆ ತೆಗೆದುಕೊಳ್ಳುತ್ತಿದ್ದರು ಎಂದು ತಿಳಿದು ಬಂದಿದೆ.</p>.<p>ಅತಿಯಾದ ಕುಡಿತ ಹಾಗೂ ನಿದ್ದೆ ಮಾತ್ರೆಯಿಂದ ಇಬ್ಬರೂ ಮೃತಪಟ್ಟಿರುವುದು ವೈದ್ಯರು ಪ್ರಾಥಮಿಕ ಹಂತದ ತನಿಖೆಯಿಂದ ತಿಳಿದಿದೆ. ಮರಣೋತ್ತರ ಪರೀಕ್ಷೆ ನಂತರ ನಿಖರವಾದ ಕಾರಣ ತಿಳಿಯಲಿದೆ ಎಂದು ಹರಿರಾಂ ಶಂಕರ್ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>