ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೇಲೂರು ದೇಗುಲ ಇಒ ಆಗಿ ಉಮಾ ಅಧಿಕಾರ ಸ್ವೀಕಾರ

Last Updated 15 ಸೆಪ್ಟೆಂಬರ್ 2020, 14:44 IST
ಅಕ್ಷರ ಗಾತ್ರ

ಬೇಲೂರು: ಇಲ್ಲಿನ ಚನ್ನಕೇಶವ ಸ್ವಾಮಿದೇವಸ್ಥಾನದ ಕಾರ್ಯ ನಿರ್ವಹಣಾಧಿಕಾರಿಯಾಗಿ ಉಮಾ ಅವರು ಅಧಿಕಾರ ವಹಿಸಿಕೊಂಡರು.

ಈವರೆಗೆ ಕಾರ್ಯನಿರ್ವಹಿಸುತ್ತಿದ್ದ ವಿಧ್ಯುಲ್ಲತಾ ಅವರಿಗೆ ಸರ್ಕಾರ ವರ್ಗಾವಣೆ ಮಾಡಿದ್ದರಿಂದ ಅವರು ಉಮಾ ಅವರಿಗೆ ಅಧಿಕಾರ ಹಸ್ತಾಂತರಿಸಿದರು.

ಅಧಿಕಾರ ಸ್ವೀಕರಿಸಿದ ಉಮಾ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ‘ಮೈಸೂರಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದನನಗೆ ಬಡ್ತಿ ನೀಡಿ ಈ ದೇಗುಲಕ್ಕೆ ವರ್ಗಾವಣೆ ಮಾಡಿದೆ. ಬೇಲೂರು ವಿಶ್ವ ವಿಖ್ಯಾತ ತಾಣವಾಗಿದ್ದು, ಇಲ್ಲಿಗೆ ಪ್ರವಾಸಿಗರು ಹಾಗೂ ಭಕ್ತರು ಹೆಚ್ಚು ಬರುತ್ತಾರೆ. ಭಕ್ತರ ಅನುಕೂಲಕ್ಕೆ ತಕ್ಕಂತೆ ಎಲ್ಲ ರೀತಿಯ ವ್ಯವಸ್ಥೆ ಕಲ್ಪಿಸಿ, ದೇಗುಲದ ಅಭಿವೃದ್ಧಿಗೆ ಶ್ರಮಿಸುತ್ತೇನೆ’ ಎಂದರು.

ಈ ಸಂದರ್ಭದಲ್ಲಿ ವಿಜಯಲಕ್ಷ್ಮಿ, ಸಂಪತ್, ಲಕ್ಷ್ಮಣ್ ಹಾಗೂ ಇತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT