<p><strong>ಅರಸೀಕೆರೆ:</strong> ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಗೆಲುವು ಸಾಧಿಸಿದ ಕಾಂಗ್ರೆಸ್ ಶಾಸಕ ಉಮೇಶ್ ಮೇಟಿ ಮಂಗಳವಾರ ತಾಲ್ಲೂಕಿನ ಹಾರನಹಳ್ಳಿಯಲ್ಲಿರುವ ಕೋಡಿಮಠಕ್ಕೆ ಭೇಟಿ ನೀಡಿ ಕೋಡಿ ಶ್ರೀಗಳ ಆಶೀರ್ವಾದ ಪಡೆದರು.</p>.<p>ಮಠಕ್ಕೆ ಬಂದ ಶಾಸಕರನ್ನು ಮಠದ ಆಡಳಿತ ಮಂಡಳಿ ಪೂರ್ಣಕುಂಭ ಸ್ವಾಗತದೊಂದಿಗೆ ಬರಮಾಡಿಕೊಂಡಿತು. ಬಳಿಕ ಶಾಸಕ ಮೇಟಿ ಅವರು ಮಠದ ಶಿವಲಿಂಗಜ್ಜಯ್ಯ ಹಾಗೂ ನೀಲಮ್ಮಜ್ಜಯ್ಯ ಅವರ ಗದ್ದುಗೆಗಳಿಗೆ ವಿಶೇಷ ಪೂಜೆ ಸಲ್ಲಿಸಿ, ನಮನ ಸಲ್ಲಿಸಿದರು.</p>.<p>ಕೋಡಿಮಠದ ಪೀಠಾಧಿಪತಿ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಅವರಿಗೆ ರಜತ ಕಿರೀಟ ಧಾರಣೆ ಮಾಡಿ, ಆಶೀರ್ವಾದ ಪಡೆದರು. ಈ ವೇಳೆ ಶ್ರೀಗಳು ಶಾಸಕರಿಗೆ ಶಾಲು ಹೊದಿಸಿ, ಫಲ ಮಂತ್ರಾಕ್ಷತೆ ನೀಡಿ ಶುಭ ಹಾರೈಸಿದರು.</p>.<p>ಬಳಿಕ ಮಾತನಾಡಿದ ಶಾಸಕ ಉಮೇಶ್ ಮೇಟಿ, ‘ಕೋಡಿ ಶ್ರೀಗಳ ಆಶೀರ್ವಾದದಿಂದಲೇ ಉಪ ಚುನಾವಣೆಯಲ್ಲಿ ಜಯ ಗಳಿಸಲು ಸಾಧ್ಯವಾಯಿತು. ಕ್ಷೇತ್ರದ ಜನತೆಯ ಸೇವೆಗೆ ಶ್ರೀಗಳ ಮಾರ್ಗದರ್ಶನದಲ್ಲಿ ಸದಾ ಬದ್ಧನಾಗಿರುತ್ತೇನೆ’ ಎಂದು ತಿಳಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260509-36-2076457816</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅರಸೀಕೆರೆ:</strong> ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಗೆಲುವು ಸಾಧಿಸಿದ ಕಾಂಗ್ರೆಸ್ ಶಾಸಕ ಉಮೇಶ್ ಮೇಟಿ ಮಂಗಳವಾರ ತಾಲ್ಲೂಕಿನ ಹಾರನಹಳ್ಳಿಯಲ್ಲಿರುವ ಕೋಡಿಮಠಕ್ಕೆ ಭೇಟಿ ನೀಡಿ ಕೋಡಿ ಶ್ರೀಗಳ ಆಶೀರ್ವಾದ ಪಡೆದರು.</p>.<p>ಮಠಕ್ಕೆ ಬಂದ ಶಾಸಕರನ್ನು ಮಠದ ಆಡಳಿತ ಮಂಡಳಿ ಪೂರ್ಣಕುಂಭ ಸ್ವಾಗತದೊಂದಿಗೆ ಬರಮಾಡಿಕೊಂಡಿತು. ಬಳಿಕ ಶಾಸಕ ಮೇಟಿ ಅವರು ಮಠದ ಶಿವಲಿಂಗಜ್ಜಯ್ಯ ಹಾಗೂ ನೀಲಮ್ಮಜ್ಜಯ್ಯ ಅವರ ಗದ್ದುಗೆಗಳಿಗೆ ವಿಶೇಷ ಪೂಜೆ ಸಲ್ಲಿಸಿ, ನಮನ ಸಲ್ಲಿಸಿದರು.</p>.<p>ಕೋಡಿಮಠದ ಪೀಠಾಧಿಪತಿ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಅವರಿಗೆ ರಜತ ಕಿರೀಟ ಧಾರಣೆ ಮಾಡಿ, ಆಶೀರ್ವಾದ ಪಡೆದರು. ಈ ವೇಳೆ ಶ್ರೀಗಳು ಶಾಸಕರಿಗೆ ಶಾಲು ಹೊದಿಸಿ, ಫಲ ಮಂತ್ರಾಕ್ಷತೆ ನೀಡಿ ಶುಭ ಹಾರೈಸಿದರು.</p>.<p>ಬಳಿಕ ಮಾತನಾಡಿದ ಶಾಸಕ ಉಮೇಶ್ ಮೇಟಿ, ‘ಕೋಡಿ ಶ್ರೀಗಳ ಆಶೀರ್ವಾದದಿಂದಲೇ ಉಪ ಚುನಾವಣೆಯಲ್ಲಿ ಜಯ ಗಳಿಸಲು ಸಾಧ್ಯವಾಯಿತು. ಕ್ಷೇತ್ರದ ಜನತೆಯ ಸೇವೆಗೆ ಶ್ರೀಗಳ ಮಾರ್ಗದರ್ಶನದಲ್ಲಿ ಸದಾ ಬದ್ಧನಾಗಿರುತ್ತೇನೆ’ ಎಂದು ತಿಳಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260509-36-2076457816</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>