‘ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಸಚಿವರಾಗಿದ್ದ ಎಚ್.ಡಿ. ರೇವಣ್ಣ ಮಂಜೂರು ಮಾಡಿಸಿಕೊಂಡು ಬಂದ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸುತ್ತಾ ಕಾಲ ಕಳೆಯುತ್ತಿರುವ ಶಾಸಕರು, ಸಂಸದರ ಬಗ್ಗೆ ಮಾತನಾಡುವುದು ಅಗತ್ಯವಿಲ್ಲ. ಕೇಂದ್ರ ಸರ್ಕಾರ ಹಾಸನ ಮಾತ್ರವಲ್ಲ ರಾಜ್ಯದ ಎಲ್ಲಾ ಜಿಲ್ಲೆಗಳನ್ನು ಕಡೆಗಣಿಸಿದೆ. 25 ಬಿಜೆಪಿ ಸಂಸದರ ಕ್ಷೇತ್ರಗಳಿಗೆ ಯಾವ ಯೋಜನೆ ದೊರೆತಿದೆ’ ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ಪ್ರಶ್ನಿಸಿದರು.