<p>ಸಕಲೇಶಪುರ: ತಾಲ್ಲೂಕಿನ ದೋಣಿಗಾಲ್ ಗ್ರಾಮದಲ್ಲಿ ಬೆಂಗಳೂರು–ಮಂಗಳೂರು ರಾಷ್ಟ್ರೀಯ ಹೆದ್ದಾರಿ ಚತುಷ್ಪಥ ಕಾಮಗಾರಿಯಲ್ಲಿ ತಡೆಗೋಡೆ ನಿರ್ಮಿಸದೆ ಸುರಿದಿರುವ ಭಾರಿ ಮಣ್ಣು ಗದ್ದೆ, ತೋಟಗಳಿಗೆ ಬಿದ್ದು ಹಾನಿ ಆಗಿರುವ ಸ್ಥಳಕ್ಕೆ ಭಾನುವಾರ ಶಾಸಕ ಎಚ್.ಕೆ. ಕುಮಾರಸ್ವಾಮಿ ಭೇಟಿ ನೀಡಿ ಪರಿಶೀಲಿಸಿದರು.</p>.<p>‘ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಹಾಗೂ ಗುತ್ತಿಗೆದಾರರ ದಬ್ಬಾಳಿಕೆ ಅವರ ಅವೈಜ್ಞಾನಿಕ ಕಾಮಗಾರಿಯಲ್ಲಿ ಎದ್ದು ಕಾಣುತ್ತಿದೆ. ‘ಪ್ರಜಾವಾಣಿ’ ಪತ್ರಿಕೆಯಲ್ಲಿ ಪ್ರಕಟವಾದ ವಿಶೇಷ ವರದಿ ಗಮನಿಸಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದೇನೆ’ ಎಂದು ಹೇಳಿದರು.</p>.<p>‘ಹೆದ್ದಾರಿ ವಿಸ್ತರಣೆಗೆ ರೈತರ ಮೂರು ಎಕರೆ ಹಿಡುವಳಿ ಭೂಮಿಯನ್ನು ಸ್ವಾಧೀನಪಡಿಸಿಕೊಂಡಿದ್ದಾರೆ. ಆ ಸ್ಥಳಕ್ಕೆ ಸಾವಿರಾರು ಲಾರಿ ಲೋಡ್ನಷ್ಟು ಮಣ್ಣು ತಂದು ಸುರಿದಿದ್ದಾರೆ. ಮಳೆ ನೀರಿನೊಂದಿಗೆ ಭಾರಿ ಪ್ರಮಾಣದ ಮಣ್ಣು ಕೊಚ್ಚಿಹೋಗಿ ಕೆಳಭಾಗದ ಸುಮಾರು 25 ಎಕರೆ ಪ್ರದೇಶದ ಭತ್ತದ ಗದ್ದೆಯಲ್ಲಿ ನಿಂತಿದೆ. ಪಕ್ಕದ ಅಡಿಕೆ, ಕಾಫಿ ತೋಟಗಳಿಗೂ ಹಾನಿ ಉಂಟಾಗಿದೆ’ ಎಂದರು.</p>.<p>‘ಈ ಅವೈಜ್ಞಾನಿಕ ಕಾಮಗಾರಿ ಮಾಡುತ್ತಿರುವ ಗುತ್ತಿಗೆದಾರರು, ಕಾಮಗಾರಿ ನಿರ್ವಹಣೆ ಮಾಡುತ್ತಿರುವ ಎನ್ಎಚ್ಎಐ ಎಂಜಿನಿಯರ್ಗಳನ್ನು ನೇರ ಹೊಣೆ ಮಾಡಬೇಕು. ಇನ್ನು ಮುಂದೆ ಭತ್ತ ಬೆಳೆಯುವುದಕ್ಕೆ ಸಾಧ್ಯವಾಗದ ಮಟಿಗೆ ಗದ್ದೆಯ ಮೇಲೆ ಮಣ್ಣು ಮುಚ್ಚಿಕೊಂಡಿರುವುದರಿಂದ ಈ ಜಾಗವನ್ನು ಹೆದ್ದಾರಿ ಪ್ರಾಧಿಕಾರ ಅಥವಾ ಗುತ್ತಿಗೆದಾರರೇ ಸ್ವಾಧೀನಪಡಿಸಿಕೊಂಡು ರೈತರಿಗೆ ಪರಿಹಾರದ ಹಣ ನೀಡಬೇಕು’ ಎಂದು ಆಗ್ರಹಿಸಿದರು.</p>.<p>ಪ್ರತಿಭಟನೆ: ‘ಮಳೆ ನೀರಿನಲ್ಲಿ ಮಣ್ಣು ತಗ್ಗು ಪ್ರದೇಶಕ್ಕೆ ಕೊಚ್ಚಿ ಹೋಗುತ್ತದೆ ಎಂಬ ಸಾಮಾನ್ಯ ಜ್ಞಾನ ಬೇಡವೇ? ಬೇಜವಾಬ್ದಾರಿಯಿಂದ ಮಣ್ಣು ಸುರಿದು ರೈತರ ಬದುಕು ನಾಶ ಮಾಡುತ್ತಿರುವುದರ ವಿರುದ್ಧ ಶೀಘ್ರದಲ್ಲಿ ರೈತರೊಂದಿಗೆ ಸೇರಿ ಪ್ರತಿಭಟನೆ ನಡೆಸಲಾಗುವುದು’ ಎಂದು ಕುಮಾರಸ್ವಾಮಿ ಹೇಳಿದರು.</p>.<p>ಆನೇಮಹಲ್ ಗ್ರಾಮ ಪಂಚಾಯಿತಿ ಅಧ್ಯಕ್ಷ ವೀರಭದ್ರ, ಸದಸ್ಯ ಹಸೈನಾರ್ ಆನೇಮಹಲ್, ರೈತ ಚಂದನ್, ಕಿರಣ್ಚಂದನ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಸಕಲೇಶಪುರ: ತಾಲ್ಲೂಕಿನ ದೋಣಿಗಾಲ್ ಗ್ರಾಮದಲ್ಲಿ ಬೆಂಗಳೂರು–ಮಂಗಳೂರು ರಾಷ್ಟ್ರೀಯ ಹೆದ್ದಾರಿ ಚತುಷ್ಪಥ ಕಾಮಗಾರಿಯಲ್ಲಿ ತಡೆಗೋಡೆ ನಿರ್ಮಿಸದೆ ಸುರಿದಿರುವ ಭಾರಿ ಮಣ್ಣು ಗದ್ದೆ, ತೋಟಗಳಿಗೆ ಬಿದ್ದು ಹಾನಿ ಆಗಿರುವ ಸ್ಥಳಕ್ಕೆ ಭಾನುವಾರ ಶಾಸಕ ಎಚ್.ಕೆ. ಕುಮಾರಸ್ವಾಮಿ ಭೇಟಿ ನೀಡಿ ಪರಿಶೀಲಿಸಿದರು.</p>.<p>‘ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಹಾಗೂ ಗುತ್ತಿಗೆದಾರರ ದಬ್ಬಾಳಿಕೆ ಅವರ ಅವೈಜ್ಞಾನಿಕ ಕಾಮಗಾರಿಯಲ್ಲಿ ಎದ್ದು ಕಾಣುತ್ತಿದೆ. ‘ಪ್ರಜಾವಾಣಿ’ ಪತ್ರಿಕೆಯಲ್ಲಿ ಪ್ರಕಟವಾದ ವಿಶೇಷ ವರದಿ ಗಮನಿಸಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದೇನೆ’ ಎಂದು ಹೇಳಿದರು.</p>.<p>‘ಹೆದ್ದಾರಿ ವಿಸ್ತರಣೆಗೆ ರೈತರ ಮೂರು ಎಕರೆ ಹಿಡುವಳಿ ಭೂಮಿಯನ್ನು ಸ್ವಾಧೀನಪಡಿಸಿಕೊಂಡಿದ್ದಾರೆ. ಆ ಸ್ಥಳಕ್ಕೆ ಸಾವಿರಾರು ಲಾರಿ ಲೋಡ್ನಷ್ಟು ಮಣ್ಣು ತಂದು ಸುರಿದಿದ್ದಾರೆ. ಮಳೆ ನೀರಿನೊಂದಿಗೆ ಭಾರಿ ಪ್ರಮಾಣದ ಮಣ್ಣು ಕೊಚ್ಚಿಹೋಗಿ ಕೆಳಭಾಗದ ಸುಮಾರು 25 ಎಕರೆ ಪ್ರದೇಶದ ಭತ್ತದ ಗದ್ದೆಯಲ್ಲಿ ನಿಂತಿದೆ. ಪಕ್ಕದ ಅಡಿಕೆ, ಕಾಫಿ ತೋಟಗಳಿಗೂ ಹಾನಿ ಉಂಟಾಗಿದೆ’ ಎಂದರು.</p>.<p>‘ಈ ಅವೈಜ್ಞಾನಿಕ ಕಾಮಗಾರಿ ಮಾಡುತ್ತಿರುವ ಗುತ್ತಿಗೆದಾರರು, ಕಾಮಗಾರಿ ನಿರ್ವಹಣೆ ಮಾಡುತ್ತಿರುವ ಎನ್ಎಚ್ಎಐ ಎಂಜಿನಿಯರ್ಗಳನ್ನು ನೇರ ಹೊಣೆ ಮಾಡಬೇಕು. ಇನ್ನು ಮುಂದೆ ಭತ್ತ ಬೆಳೆಯುವುದಕ್ಕೆ ಸಾಧ್ಯವಾಗದ ಮಟಿಗೆ ಗದ್ದೆಯ ಮೇಲೆ ಮಣ್ಣು ಮುಚ್ಚಿಕೊಂಡಿರುವುದರಿಂದ ಈ ಜಾಗವನ್ನು ಹೆದ್ದಾರಿ ಪ್ರಾಧಿಕಾರ ಅಥವಾ ಗುತ್ತಿಗೆದಾರರೇ ಸ್ವಾಧೀನಪಡಿಸಿಕೊಂಡು ರೈತರಿಗೆ ಪರಿಹಾರದ ಹಣ ನೀಡಬೇಕು’ ಎಂದು ಆಗ್ರಹಿಸಿದರು.</p>.<p>ಪ್ರತಿಭಟನೆ: ‘ಮಳೆ ನೀರಿನಲ್ಲಿ ಮಣ್ಣು ತಗ್ಗು ಪ್ರದೇಶಕ್ಕೆ ಕೊಚ್ಚಿ ಹೋಗುತ್ತದೆ ಎಂಬ ಸಾಮಾನ್ಯ ಜ್ಞಾನ ಬೇಡವೇ? ಬೇಜವಾಬ್ದಾರಿಯಿಂದ ಮಣ್ಣು ಸುರಿದು ರೈತರ ಬದುಕು ನಾಶ ಮಾಡುತ್ತಿರುವುದರ ವಿರುದ್ಧ ಶೀಘ್ರದಲ್ಲಿ ರೈತರೊಂದಿಗೆ ಸೇರಿ ಪ್ರತಿಭಟನೆ ನಡೆಸಲಾಗುವುದು’ ಎಂದು ಕುಮಾರಸ್ವಾಮಿ ಹೇಳಿದರು.</p>.<p>ಆನೇಮಹಲ್ ಗ್ರಾಮ ಪಂಚಾಯಿತಿ ಅಧ್ಯಕ್ಷ ವೀರಭದ್ರ, ಸದಸ್ಯ ಹಸೈನಾರ್ ಆನೇಮಹಲ್, ರೈತ ಚಂದನ್, ಕಿರಣ್ಚಂದನ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>