<p><strong>ಹಾಸನ:</strong> ಆಲೂರು ತಾಲ್ಲೂಕಿನ ಹೆದ್ದುರ್ಗದ ಎಚ್.ವಿ.ಅಮೃತ್ ಅವರು ಯುಪಿಎಸ್ಸಿ ಪರೀಕ್ಷೆಯಲ್ಲಿ 752ನೇ ರ್ಯಾಂಕ್ ಪಡೆದಿದ್ದಾರೆ.</p>.<p>ಕಾಫಿ ಬೆಳೆಗಾರ ವಿಶ್ವನಾಥ್ ಮತ್ತು ಲೇಖಕಿ ನಂದಿನಿ ಹೆದ್ದುರ್ಗ ಅವರ ಪುತ್ರ ಅಮೃತ್ ಬಿಇ ಪದವೀಧರ. 2017ರಲ್ಲಿ ಖಾಸಗಿ ಕಂಪನಿಯೊಂದರಲ್ಲಿ ಉದ್ಯೋಗಕ್ಕೆ ಸೇರಿದ್ದರು. ಒಂದೂವರೆ ವರ್ಷದನಂತರ ನಾಗರಿಕ ಸೇವಾ ಪರೀಕ್ಷೆ ಬರೆಯಲು ಕೆಲಸಕ್ಕೆ ರಾಜೀನಾಮೆ ನೀಡಿದರು.</p>.<p>‘ಪ್ರಿಲಿಮ್ಸ್ಗಾಗಿ ದಿನಕ್ಕೆ ಎಂಟು ತಾಸು ಓದುತ್ತಿದ್ದೆ. ಮುಖ್ಯ ಪರೀಕ್ಷೆಯಲ್ಲಿ 12–14 ತಾಸುಅಧ್ಯಯನ ಮಾಡುತ್ತಿದ್ದೆ. ಸ್ವಲ್ಪ ಅನಾರೋಗ್ಯ ಸಮಸ್ಯೆಯಾಯಿತು. ಅದರ ನಡುವೆಯೇ ಪರೀಕ್ಷೆಬರೆದೆ. 400 ರೊಳಗೆ ರ್ಯಾಂಕ್ ಬರುವ ನಿರೀಕ್ಷೆಇತ್ತು. ಆದರೆ, ಕೆಲ ತಪ್ಪುಗಳಿಂದ ಅದು ಸಾಧ್ಯವಾಗಿಲ್ಲ’ ಎಂದು ಅಮೃತ್ ‘ಪ್ರಜಾವಾಣಿ’ಗೆತಿಳಿಸಿದರು.</p>.<p>‘ಯುಪಿಎಸ್ಸಿಗಾಗಿ ಯಾವುದೇ ಕೋಚಿಂಗ್ ತೆಗೆದುಕೊಂಡಿಲ್ಲ. ವೆಬ್ಸೈಟ್, ಪುಸ್ತಕ ಓದಿಯೇ ಪರೀಕ್ಷೆಗೆ<br />ಸಿದ್ಧತೆ ನಡೆಸಿದ್ದೆ. ಹಳ್ಳಿಯ ಅಜ್ಜಿ ಮನೆಯಲ್ಲಿ ಪರೀಕ್ಷೆಗೆ ಸಿದ್ಧತೆ ನಡೆಸಿ, ಆಂಥ್ರೋಪಾಲಜಿ ವಿಷಯ ಆಯ್ದುಕೊಂಡು ವ್ಯಾಸಂಗ ಆರಂಭಿಸಿದೆ. ಮೊದಲ ಎರಡು ಪ್ರಯತ್ನದಲ್ಲಿ ಫಲ ದೊರೆಯಲಿಲ್ಲ. ಮೂರನೇಯತ್ನದಲ್ಲಿ ಯಶಸ್ಸು ಸಿಕ್ಕಿದೆ. ಐಆರ್ಎಸ್ ಹುದ್ದೆ ದೊರೆಯುವ ನಿರೀಕ್ಷೆಯಿದೆ’ ಎಂದು ಅಮೃತ್ತಿಳಿಸಿದರು.</p>.<p><a href="https://www.prajavani.net/district/vijayapura/upsc-result-2021-netra-meti-from-alamatti-got-326th-rank-869586.html" itemprop="url">ಯುಪಿಎಸ್ಸಿ: ಆಲಮಟ್ಟಿಯ ನೇತ್ರಾ ಮೇಟಿಗೆ 326ನೇ ರ್ಯಾಂಕ್</a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾಸನ:</strong> ಆಲೂರು ತಾಲ್ಲೂಕಿನ ಹೆದ್ದುರ್ಗದ ಎಚ್.ವಿ.ಅಮೃತ್ ಅವರು ಯುಪಿಎಸ್ಸಿ ಪರೀಕ್ಷೆಯಲ್ಲಿ 752ನೇ ರ್ಯಾಂಕ್ ಪಡೆದಿದ್ದಾರೆ.</p>.<p>ಕಾಫಿ ಬೆಳೆಗಾರ ವಿಶ್ವನಾಥ್ ಮತ್ತು ಲೇಖಕಿ ನಂದಿನಿ ಹೆದ್ದುರ್ಗ ಅವರ ಪುತ್ರ ಅಮೃತ್ ಬಿಇ ಪದವೀಧರ. 2017ರಲ್ಲಿ ಖಾಸಗಿ ಕಂಪನಿಯೊಂದರಲ್ಲಿ ಉದ್ಯೋಗಕ್ಕೆ ಸೇರಿದ್ದರು. ಒಂದೂವರೆ ವರ್ಷದನಂತರ ನಾಗರಿಕ ಸೇವಾ ಪರೀಕ್ಷೆ ಬರೆಯಲು ಕೆಲಸಕ್ಕೆ ರಾಜೀನಾಮೆ ನೀಡಿದರು.</p>.<p>‘ಪ್ರಿಲಿಮ್ಸ್ಗಾಗಿ ದಿನಕ್ಕೆ ಎಂಟು ತಾಸು ಓದುತ್ತಿದ್ದೆ. ಮುಖ್ಯ ಪರೀಕ್ಷೆಯಲ್ಲಿ 12–14 ತಾಸುಅಧ್ಯಯನ ಮಾಡುತ್ತಿದ್ದೆ. ಸ್ವಲ್ಪ ಅನಾರೋಗ್ಯ ಸಮಸ್ಯೆಯಾಯಿತು. ಅದರ ನಡುವೆಯೇ ಪರೀಕ್ಷೆಬರೆದೆ. 400 ರೊಳಗೆ ರ್ಯಾಂಕ್ ಬರುವ ನಿರೀಕ್ಷೆಇತ್ತು. ಆದರೆ, ಕೆಲ ತಪ್ಪುಗಳಿಂದ ಅದು ಸಾಧ್ಯವಾಗಿಲ್ಲ’ ಎಂದು ಅಮೃತ್ ‘ಪ್ರಜಾವಾಣಿ’ಗೆತಿಳಿಸಿದರು.</p>.<p>‘ಯುಪಿಎಸ್ಸಿಗಾಗಿ ಯಾವುದೇ ಕೋಚಿಂಗ್ ತೆಗೆದುಕೊಂಡಿಲ್ಲ. ವೆಬ್ಸೈಟ್, ಪುಸ್ತಕ ಓದಿಯೇ ಪರೀಕ್ಷೆಗೆ<br />ಸಿದ್ಧತೆ ನಡೆಸಿದ್ದೆ. ಹಳ್ಳಿಯ ಅಜ್ಜಿ ಮನೆಯಲ್ಲಿ ಪರೀಕ್ಷೆಗೆ ಸಿದ್ಧತೆ ನಡೆಸಿ, ಆಂಥ್ರೋಪಾಲಜಿ ವಿಷಯ ಆಯ್ದುಕೊಂಡು ವ್ಯಾಸಂಗ ಆರಂಭಿಸಿದೆ. ಮೊದಲ ಎರಡು ಪ್ರಯತ್ನದಲ್ಲಿ ಫಲ ದೊರೆಯಲಿಲ್ಲ. ಮೂರನೇಯತ್ನದಲ್ಲಿ ಯಶಸ್ಸು ಸಿಕ್ಕಿದೆ. ಐಆರ್ಎಸ್ ಹುದ್ದೆ ದೊರೆಯುವ ನಿರೀಕ್ಷೆಯಿದೆ’ ಎಂದು ಅಮೃತ್ತಿಳಿಸಿದರು.</p>.<p><a href="https://www.prajavani.net/district/vijayapura/upsc-result-2021-netra-meti-from-alamatti-got-326th-rank-869586.html" itemprop="url">ಯುಪಿಎಸ್ಸಿ: ಆಲಮಟ್ಟಿಯ ನೇತ್ರಾ ಮೇಟಿಗೆ 326ನೇ ರ್ಯಾಂಕ್</a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>