<p><strong>ಅರಸೀಕೆರೆ:</strong> ರೈತರು ಯೂರಿಯಾ ಖರೀದಿಗಾಗಿ ತಾಲ್ಲೂಕಿನ ಬಾಣಾವಾರದ ಕೃಷಿ ಪತ್ತಿನ ಸಹಕಾರ ಸಂಘದ ಹತ್ತಿರ ರೈತರು ರಾತ್ರಿಯಿಂದ ಜಮಾಯಿಸಿದ್ದು, ನೂಕುನುಗ್ಗಲು ಕಂಡುಬಂದಿತು.</p>.<p>ಸ್ಥಳಕ್ಕೆ ಭೇಟಿ ನೀಡಿದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಸಿ. ಶ್ರೀನಿವಾಸ್ ಮಾತನಾಡಿ, ‘ಬಾಣಾವಾರ ದೊಡ್ಡ ಹೋಬಳಿ ಕೇಂದ್ರ ಆಗಿರುವುದರಿಂದ ಹೆಚ್ಚಾಗಿ ಗೊಬ್ಬರದ ಕೊರತೆ ಕಾಡುತ್ತಿದೆ. ಎಲ್ಲ ರೈತರಿಗೂ ಯೂರಿಯಾ ಸಿಗಲಿದ್ದು, ಇದರಲ್ಲಿ ಗೊಂದಲ ಬೇಡ’ ಎಂದು ಹೇಳಿದರು.</p>.<p>‘ರೈತ ಸಂಪರ್ಕ ಕೇಂದ್ರ ಕೃಷಿ ಇಲಾಖೆ ಅಧಿಕಾರಿ ಶಿವಕುಮಾರ್ ಗಮನಹರಿಸಿ ಹೆಚ್ಚಿನ ನಮ್ಮ ಸೊಸೈಟಿಗೆ ಯೂರಿಯ ಗೊಬ್ಬರವನ್ನು ಪೂರೈಸುತ್ತಿದ್ದಾರೆ. ರೈತರು ತಾಳ್ಮೆಯಿಂದ ಸರದಿ ಸಾಲಿನಲ್ಲಿ ಗೊಬ್ಬರವನ್ನು ಖರೀದಿಸಬೇಕು. ಈ ಸನ್ನಿವೇಶದಲ್ಲಿ ರೈತರಿಗೆ ಯೂರಿಯಾ ಅವಶ್ಯಕತೆ ಎದ್ದು ಕಾಣುತ್ತದೆ. ಸರ್ಕಾರ ಹಾಗೂ ಸಂಬಂಧಪಟ್ಟ ಅಧಿಕಾರಿಗಳು ರೈತರ ಸಂಕಷ್ಟ ಅರಿತು ಗೊಬ್ಬರ ಪೂರೈಕೆ ಮಾಡುವಲ್ಲಿ ಆದ್ಯತೆ ನೀಡಬೇಕು’ ಎಂದು ಹೇಳಿದರು.<br /><br /> ಕೃಷಿ ಪತ್ತಿನ ಸಹಕಾರ ಸಂಘದ ಮಾಜಿ ಅಧ್ಯಕ್ಷ ಚಂದ್ರಪ್ಪ ಮಾತನಾಡಿ, ‘ನಮ್ಮ ಸೊಸೈಟಿಯಲ್ಲಿ ಪಾರದರ್ಶಕವಾಗಿ ಎಲ್ಲಾ ರೈತರಿಗೂ ಸಮರ್ಪಕವಾಗಿ ಯೂರಿಯಾ ಪೂರೈಸುವುದು ನಮ್ಮ ಕರ್ತವ್ಯ. ರೈತರು ತಳ್ಳಾಟ ನೂಕಾಟ ಮಾಡದೇ ಗೊಬ್ಬರ ಪಡೆಯಬೇಕು’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅರಸೀಕೆರೆ:</strong> ರೈತರು ಯೂರಿಯಾ ಖರೀದಿಗಾಗಿ ತಾಲ್ಲೂಕಿನ ಬಾಣಾವಾರದ ಕೃಷಿ ಪತ್ತಿನ ಸಹಕಾರ ಸಂಘದ ಹತ್ತಿರ ರೈತರು ರಾತ್ರಿಯಿಂದ ಜಮಾಯಿಸಿದ್ದು, ನೂಕುನುಗ್ಗಲು ಕಂಡುಬಂದಿತು.</p>.<p>ಸ್ಥಳಕ್ಕೆ ಭೇಟಿ ನೀಡಿದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಸಿ. ಶ್ರೀನಿವಾಸ್ ಮಾತನಾಡಿ, ‘ಬಾಣಾವಾರ ದೊಡ್ಡ ಹೋಬಳಿ ಕೇಂದ್ರ ಆಗಿರುವುದರಿಂದ ಹೆಚ್ಚಾಗಿ ಗೊಬ್ಬರದ ಕೊರತೆ ಕಾಡುತ್ತಿದೆ. ಎಲ್ಲ ರೈತರಿಗೂ ಯೂರಿಯಾ ಸಿಗಲಿದ್ದು, ಇದರಲ್ಲಿ ಗೊಂದಲ ಬೇಡ’ ಎಂದು ಹೇಳಿದರು.</p>.<p>‘ರೈತ ಸಂಪರ್ಕ ಕೇಂದ್ರ ಕೃಷಿ ಇಲಾಖೆ ಅಧಿಕಾರಿ ಶಿವಕುಮಾರ್ ಗಮನಹರಿಸಿ ಹೆಚ್ಚಿನ ನಮ್ಮ ಸೊಸೈಟಿಗೆ ಯೂರಿಯ ಗೊಬ್ಬರವನ್ನು ಪೂರೈಸುತ್ತಿದ್ದಾರೆ. ರೈತರು ತಾಳ್ಮೆಯಿಂದ ಸರದಿ ಸಾಲಿನಲ್ಲಿ ಗೊಬ್ಬರವನ್ನು ಖರೀದಿಸಬೇಕು. ಈ ಸನ್ನಿವೇಶದಲ್ಲಿ ರೈತರಿಗೆ ಯೂರಿಯಾ ಅವಶ್ಯಕತೆ ಎದ್ದು ಕಾಣುತ್ತದೆ. ಸರ್ಕಾರ ಹಾಗೂ ಸಂಬಂಧಪಟ್ಟ ಅಧಿಕಾರಿಗಳು ರೈತರ ಸಂಕಷ್ಟ ಅರಿತು ಗೊಬ್ಬರ ಪೂರೈಕೆ ಮಾಡುವಲ್ಲಿ ಆದ್ಯತೆ ನೀಡಬೇಕು’ ಎಂದು ಹೇಳಿದರು.<br /><br /> ಕೃಷಿ ಪತ್ತಿನ ಸಹಕಾರ ಸಂಘದ ಮಾಜಿ ಅಧ್ಯಕ್ಷ ಚಂದ್ರಪ್ಪ ಮಾತನಾಡಿ, ‘ನಮ್ಮ ಸೊಸೈಟಿಯಲ್ಲಿ ಪಾರದರ್ಶಕವಾಗಿ ಎಲ್ಲಾ ರೈತರಿಗೂ ಸಮರ್ಪಕವಾಗಿ ಯೂರಿಯಾ ಪೂರೈಸುವುದು ನಮ್ಮ ಕರ್ತವ್ಯ. ರೈತರು ತಳ್ಳಾಟ ನೂಕಾಟ ಮಾಡದೇ ಗೊಬ್ಬರ ಪಡೆಯಬೇಕು’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>