ಕಾರ್ಮಿಕರಿಗೆ ಸಮವಸ್ತ್ರ, ರಕ್ಷಣಾ ಪರಿಕರ, ಕೆಲಸದ ಪರಿಕರ ಹಾಗೂ ಗುರುತಿನ ಪತ್ರ ನೀಡಬೇಕು. ಹಾಸನ ನಗರ ದಿನದಿಂದ ದಿನಕ್ಕೆ ಬೆಳೆಯುತ್ತಿದ್ದು, ನಗರದ ಜನಸಂಖ್ಯೆಗೆ ಅನುಗುಣವಾಗಿ ಪೌರಕಾರ್ಮಿಕರ ನೇಮಕ ಮಾಡಿಕೊಳ್ಳಬೇಕು. ಕೇಂದ್ರ ಸರ್ಕಾರ ಜಾರಿ ಮಾಡಿರುವ ಕಾರ್ಮಿಕ ಸಂಹಿತೆ ರದ್ದು ಮಾಡಬೇಕು ಎಂದು ಆಗ್ರಹಿಸಿ ನಗರಸಭೆ ಅಧ್ಯಕ್ಷ ಆರ್.ಮೋಹನ್ಗೆ ಮನವಿ ಸಲ್ಲಿಸಲಾಯಿತು.