<p>ಹಾಸನ: ನಗರದ ಹಿಮ್ಸ್ ಆಸ್ಪತ್ರೆಯಲ್ಲಿ ಜಿಲ್ಲಾಧಿಕಾರಿ ಆರ್.ಗಿರೀಶ್ ಶುಕ್ರವಾರ ಕೋವಿಡ್-19 ಲಸಿಕೆ<br />ಹಾಕಿಸಿಕೊಂಡರು.</p>.<p>ಲಸಿಕೆ ಪಡೆದ ನಂತರ ಮಾತನಾಡಿದ ಅವರು, ‘ದೇಶದ್ಯಾದಂತ ಲಸಿಕೆ ಅಭಿಯಾನ ನಡೆಯುತ್ತಿದ್ದು,<br />ಮೊದಲ ಹಂತದಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿಗಳು, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಆಶಾ<br />ಕಾರ್ಯಕರ್ತೆಯರಿಗೆ ಲಸಿಕೆ ನೀಡಲಾಗುತ್ತಿದೆ. ಲಸಿಕೆ ಹಾಕಿಸಿಕೊಂಡ ನನಗೆ ಯಾವುದೇ ಅಡ್ಡ<br />ಪರಿಣಾಮ ಉಂಟಾಗಿಲ್ಲ. ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ. ಜಿಲ್ಲೆಯಲ್ಲಿ ಸುಮಾರು 7<br />ಸಾವಿರದಷ್ಟು ಆರೋಗ್ಯ ಸಿಬ್ಬಂದಿಗೆ ಲಸಿಕೆ ಹಾಕಲಾಗಿದ್ದು, ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ಲಸಿಕೆ<br />ಹಾಕಿಸಿಕೊಳ್ಳಬೇಕು’ ಎಂದು ಹೇಳಿದರು.</p>.<p>ಎರಡನೇ ಅಲೆ ತಡೆಯಲು ಲಸಿಕೆ ಪಡೆಯಲು ಸಿದ್ದರಿರಬೇಕು. ಕೋವ್ಯಾಕ್ಸಿನ್, ಕೋವಿಶೀಲ್ಡ್ ಲಸಿಕೆ<br />ಪೂರ್ಣ ಸುರಕ್ಷವಾಗಿದ್ದು, ಜನರು ಗಾಬರಿ ಪಡುವ ಅಗತ್ಯವಿಲ್ಲ. ಮುಂದಿನ ದಿನಗಳಲ್ಲಿ ಸಾರ್ವಜನಿಕರಿಗೂ<br />ಲಸಿಕೆ ನೀಡಲಾಗುವುದು ಎಂದು ವಿವರಿಸಿದರು.</p>.<p>ಲಸಿಕೆ ಪಡೆದವರು ಸಹ ಜಾಗೃತರಾಗಿ ಅಂತರ ಕಾಯ್ದುಕೊಂಡು, ಕಡ್ಡಾಯವಾಗಿ ಮಾಸ್ಕ್ ಹಾಗೂ<br />ಸ್ಯಾನಿಟೈಸರ್ ಬಳಸಬೇಕು. 2ನೇ ಹಂತದಲ್ಲಿ ಆರೋಗ್ಯ ಸಿಬ್ಬಂದಿ ನಂತರ ಅರಣ್ಯ ಇಲಾಖೆ ನೌಕರರು,<br />ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಪೊಲೀಸ್ ಇಲಾಖೆ ನೌಕರರು, ಕಂದಾಯ ಇಲಾಖೆ, ಗ್ರಾಮೀಣ<br />ಭಾಗದಲ್ಲಿ ಕೆಲಸ ಮಾಡುವ ನೌಕರರು, ಗ್ರಾಮ ಪಂಚಾಯಿತಿ ನೌಕರರು, ಜಿಲ್ಲಾ ಪಂಚಾಯಿತಿ ನೌಕರರ<br />ಮಾಹಿತಿಯನ್ನು ಈಗಾಗಲೇ ಸರ್ಕಾರಕ್ಕೆ ಕಳುಹಿಸಲಾಗಿದೆ. ಮುಂದಿನ ವಾರದಲ್ಲಿ ಲಸಿಕೆ ನೀಡಲು<br />ಸರ್ಕಾರದಿಂದ ನಿರ್ದೇಶನ ಬರಬಹುದು ಎಂದು ಹೇಳಿದರು.</p>.<p>3ನೇ ಹಂತದಲ್ಲಿ ಸಾರ್ವಜನಿಕರಿಗೆ ಲಸಿಕೆ ನೀಡಲು ಸಿದ್ಧತೆ ನಡೆಯುತ್ತಿದೆ. ಸರ್ಕಾರದ ಮಾರ್ಗದರ್ಶನದಂತೆ ಮುಂದಿನ ದಿನಗಳಲ್ಲಿ ಸಾರ್ವಜನಿಕರಿಗೂ ಲಸಿಕೆ ನೀಡಲಾಗುತ್ತದೆ. ಈವರೆಗೂ ಶೇಕಡಾ 52 ರಷ್ಟು ಲಸಿಕೆ ನೀಡಲಾಗಿದೆ ಎಂದರು.</p>.<p>ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸತೀಶ್, ಹಿಮ್ಸ್ ನಿರ್ದೇಶಕ ಡಾ.ಬಿ.ಸಿ.<br />ರವಿಕುಮಾರ್, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಕೃಷ್ಣಮೂರ್ತಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹಾಸನ: ನಗರದ ಹಿಮ್ಸ್ ಆಸ್ಪತ್ರೆಯಲ್ಲಿ ಜಿಲ್ಲಾಧಿಕಾರಿ ಆರ್.ಗಿರೀಶ್ ಶುಕ್ರವಾರ ಕೋವಿಡ್-19 ಲಸಿಕೆ<br />ಹಾಕಿಸಿಕೊಂಡರು.</p>.<p>ಲಸಿಕೆ ಪಡೆದ ನಂತರ ಮಾತನಾಡಿದ ಅವರು, ‘ದೇಶದ್ಯಾದಂತ ಲಸಿಕೆ ಅಭಿಯಾನ ನಡೆಯುತ್ತಿದ್ದು,<br />ಮೊದಲ ಹಂತದಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿಗಳು, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಆಶಾ<br />ಕಾರ್ಯಕರ್ತೆಯರಿಗೆ ಲಸಿಕೆ ನೀಡಲಾಗುತ್ತಿದೆ. ಲಸಿಕೆ ಹಾಕಿಸಿಕೊಂಡ ನನಗೆ ಯಾವುದೇ ಅಡ್ಡ<br />ಪರಿಣಾಮ ಉಂಟಾಗಿಲ್ಲ. ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ. ಜಿಲ್ಲೆಯಲ್ಲಿ ಸುಮಾರು 7<br />ಸಾವಿರದಷ್ಟು ಆರೋಗ್ಯ ಸಿಬ್ಬಂದಿಗೆ ಲಸಿಕೆ ಹಾಕಲಾಗಿದ್ದು, ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ಲಸಿಕೆ<br />ಹಾಕಿಸಿಕೊಳ್ಳಬೇಕು’ ಎಂದು ಹೇಳಿದರು.</p>.<p>ಎರಡನೇ ಅಲೆ ತಡೆಯಲು ಲಸಿಕೆ ಪಡೆಯಲು ಸಿದ್ದರಿರಬೇಕು. ಕೋವ್ಯಾಕ್ಸಿನ್, ಕೋವಿಶೀಲ್ಡ್ ಲಸಿಕೆ<br />ಪೂರ್ಣ ಸುರಕ್ಷವಾಗಿದ್ದು, ಜನರು ಗಾಬರಿ ಪಡುವ ಅಗತ್ಯವಿಲ್ಲ. ಮುಂದಿನ ದಿನಗಳಲ್ಲಿ ಸಾರ್ವಜನಿಕರಿಗೂ<br />ಲಸಿಕೆ ನೀಡಲಾಗುವುದು ಎಂದು ವಿವರಿಸಿದರು.</p>.<p>ಲಸಿಕೆ ಪಡೆದವರು ಸಹ ಜಾಗೃತರಾಗಿ ಅಂತರ ಕಾಯ್ದುಕೊಂಡು, ಕಡ್ಡಾಯವಾಗಿ ಮಾಸ್ಕ್ ಹಾಗೂ<br />ಸ್ಯಾನಿಟೈಸರ್ ಬಳಸಬೇಕು. 2ನೇ ಹಂತದಲ್ಲಿ ಆರೋಗ್ಯ ಸಿಬ್ಬಂದಿ ನಂತರ ಅರಣ್ಯ ಇಲಾಖೆ ನೌಕರರು,<br />ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಪೊಲೀಸ್ ಇಲಾಖೆ ನೌಕರರು, ಕಂದಾಯ ಇಲಾಖೆ, ಗ್ರಾಮೀಣ<br />ಭಾಗದಲ್ಲಿ ಕೆಲಸ ಮಾಡುವ ನೌಕರರು, ಗ್ರಾಮ ಪಂಚಾಯಿತಿ ನೌಕರರು, ಜಿಲ್ಲಾ ಪಂಚಾಯಿತಿ ನೌಕರರ<br />ಮಾಹಿತಿಯನ್ನು ಈಗಾಗಲೇ ಸರ್ಕಾರಕ್ಕೆ ಕಳುಹಿಸಲಾಗಿದೆ. ಮುಂದಿನ ವಾರದಲ್ಲಿ ಲಸಿಕೆ ನೀಡಲು<br />ಸರ್ಕಾರದಿಂದ ನಿರ್ದೇಶನ ಬರಬಹುದು ಎಂದು ಹೇಳಿದರು.</p>.<p>3ನೇ ಹಂತದಲ್ಲಿ ಸಾರ್ವಜನಿಕರಿಗೆ ಲಸಿಕೆ ನೀಡಲು ಸಿದ್ಧತೆ ನಡೆಯುತ್ತಿದೆ. ಸರ್ಕಾರದ ಮಾರ್ಗದರ್ಶನದಂತೆ ಮುಂದಿನ ದಿನಗಳಲ್ಲಿ ಸಾರ್ವಜನಿಕರಿಗೂ ಲಸಿಕೆ ನೀಡಲಾಗುತ್ತದೆ. ಈವರೆಗೂ ಶೇಕಡಾ 52 ರಷ್ಟು ಲಸಿಕೆ ನೀಡಲಾಗಿದೆ ಎಂದರು.</p>.<p>ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸತೀಶ್, ಹಿಮ್ಸ್ ನಿರ್ದೇಶಕ ಡಾ.ಬಿ.ಸಿ.<br />ರವಿಕುಮಾರ್, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಕೃಷ್ಣಮೂರ್ತಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>