ಅರೇಹಳ್ಳಿ ಹೋಬಳಿ ಕುಶಾವರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾಗೇನಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರ ಆವರಣದಲ್ಲಿನ ವಸತಿಗೃಹ ಸುತ್ತಲೂ ಲಾಂಟನ ಹಾಗೂ ಗಿಡ, ಗಂಟಿಗಳು ಬೆಳೆದು ನಿಂತು, ಪಾಳು ಬಿದ್ದಿದೆ. ಮೊದಲು ವಾರದಲ್ಲಿ ಮೂರು ದಿನ ಬರುತ್ತಿದ್ದ ವೈದ್ಯರು ಈಗ ಇತ್ತ ಸುಳಿಯುತ್ತಿಲ್ಲ. ಇದರಿಂದ ಸುತ್ತ ಮುತ್ತಲ ಗ್ರಾಮಸ್ಥರಿಗೆ ತೊಂದರೆ ಉಂಟಾಗುತ್ತಿದೆ ಎಂದು ಆರೋಪಿಸಿದರು.