<p><strong>ಹಾಸನ:</strong> ವರಮಹಾಲಕ್ಷ್ಮಿ ಹಬ್ಬದ ಮುನ್ನಾ ದಿನವಾದ ಗುರುವಾರ ನಗರದಲ್ಲಿ ಚಿನ್ನಾಭರಣ ಖರೀದಿಸುವ ಭರದಲ್ಲಿ ಉಷಾ ಎಂಬುವವರು ಅಂಗಡಿಯಲ್ಲೇ ಬಿಟ್ಟು ಹೋಗಿದ್ದ ಮಗುವನ್ನು ಸಿದ್ದಯ್ಯ ನಗರದ ಭವಾನಿ ಎಂಬುವವರು ರಕ್ಷಿಸಿ ಪೊಲೀಸ್ ಠಾಣೆಯಲ್ಲಿ ಮತ್ತೆ ಹಸ್ತಾಂತರಿಸಿದರು. </p>.<p>ನಗರದ ಗಾಂಧಿ ಬಜಾರ್ನ ಮಳಿಗೆಗೆ ಬಂದಿದ್ದ ಉಷಾ, ಎರಡೂವರೆ ವರ್ಷದ ಮಗಳು ಸುಪ್ರಿಯಾಳನ್ನು ತಮ್ಮೊಂದಿಗೆ ಕರೆದೊಯ್ಯುವುದನ್ನು ಮರೆತು ನಿರ್ಗಮಿಸಿದ್ದರು.</p>.<p>ಮಗುವು ಅಳುತ್ತಿರುವುದನ್ನು ಕಂಡ ಭವಾನಿ ಸಂತೈಸಿದರು. ಪೋಷಕರು ಪತ್ತೆಯಾಗದ್ದರಿಂದ ತಮ್ಮೊಂದಿಗೆ ಕರೆದೊಯ್ದಿದ್ದರು. ಮಗುವನ್ನು ಮಳಿಗೆಯಲ್ಲಿ ಮರೆತು ಬಂದಿರುವ ಸಂಗತಿಯನ್ನು ಮುಚ್ಚಿಟ್ಟ ತಾಯಿಯು, ಮಗು ಕಳುವಾಗಿದೆ ಎಂದು ನಗರ ಠಾಣೆಯಲ್ಲಿ ದೂರು ದಾಖಲಿಸಿದ್ದರು.</p>.<p>ಪೊಲೀಸರು ಹುಡುಕಾಡಿದಾಗ, ಮಗುವನ್ನು ಭವಾನಿ ಅವರು ಕರೆದೊಯ್ದಿರುವುದು ಸಿಸಿಟಿವಿ ದೃಶ್ಯಾವಳಿಯಿಂದ ಗೊತ್ತಾಗಿತ್ತು. ಆಕೆಯೇ ಮಗುವನ್ನು ಅಪಹರಿಸಿದ್ದಾರೆಂದು ಭಾವಿಸಲಾಗಿತ್ತು.</p>.<p>ಆದರೆ, ಅವರು ಮಗುವಿಗೆ ಊಟ ಮಾಡಿಸಿ, ನಂತರ ಪೊಲೀಸರಿಗೆ ಒಪ್ಪಿಸಲು ಠಾಣೆಗೆ ಬಂದರು. ಆಗ, ‘ಮಗು ಅಪಹರಣವಾಗಿಲ್ಲ. ಬದಲಿಗೆ ತಾಯಿಯೇ ಮರೆತು ಬಂದಿದ್ದಾರೆ’ ಎಂಬುದು ದೃಢವಾಯಿತು. ವಿಷಯ ಮನವರಿಕೆಯಾದ ಪೊಲೀಸರು ಮಗುವನ್ನು ತಾಯಿಯ ಸುಪರ್ದಿಗೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾಸನ:</strong> ವರಮಹಾಲಕ್ಷ್ಮಿ ಹಬ್ಬದ ಮುನ್ನಾ ದಿನವಾದ ಗುರುವಾರ ನಗರದಲ್ಲಿ ಚಿನ್ನಾಭರಣ ಖರೀದಿಸುವ ಭರದಲ್ಲಿ ಉಷಾ ಎಂಬುವವರು ಅಂಗಡಿಯಲ್ಲೇ ಬಿಟ್ಟು ಹೋಗಿದ್ದ ಮಗುವನ್ನು ಸಿದ್ದಯ್ಯ ನಗರದ ಭವಾನಿ ಎಂಬುವವರು ರಕ್ಷಿಸಿ ಪೊಲೀಸ್ ಠಾಣೆಯಲ್ಲಿ ಮತ್ತೆ ಹಸ್ತಾಂತರಿಸಿದರು. </p>.<p>ನಗರದ ಗಾಂಧಿ ಬಜಾರ್ನ ಮಳಿಗೆಗೆ ಬಂದಿದ್ದ ಉಷಾ, ಎರಡೂವರೆ ವರ್ಷದ ಮಗಳು ಸುಪ್ರಿಯಾಳನ್ನು ತಮ್ಮೊಂದಿಗೆ ಕರೆದೊಯ್ಯುವುದನ್ನು ಮರೆತು ನಿರ್ಗಮಿಸಿದ್ದರು.</p>.<p>ಮಗುವು ಅಳುತ್ತಿರುವುದನ್ನು ಕಂಡ ಭವಾನಿ ಸಂತೈಸಿದರು. ಪೋಷಕರು ಪತ್ತೆಯಾಗದ್ದರಿಂದ ತಮ್ಮೊಂದಿಗೆ ಕರೆದೊಯ್ದಿದ್ದರು. ಮಗುವನ್ನು ಮಳಿಗೆಯಲ್ಲಿ ಮರೆತು ಬಂದಿರುವ ಸಂಗತಿಯನ್ನು ಮುಚ್ಚಿಟ್ಟ ತಾಯಿಯು, ಮಗು ಕಳುವಾಗಿದೆ ಎಂದು ನಗರ ಠಾಣೆಯಲ್ಲಿ ದೂರು ದಾಖಲಿಸಿದ್ದರು.</p>.<p>ಪೊಲೀಸರು ಹುಡುಕಾಡಿದಾಗ, ಮಗುವನ್ನು ಭವಾನಿ ಅವರು ಕರೆದೊಯ್ದಿರುವುದು ಸಿಸಿಟಿವಿ ದೃಶ್ಯಾವಳಿಯಿಂದ ಗೊತ್ತಾಗಿತ್ತು. ಆಕೆಯೇ ಮಗುವನ್ನು ಅಪಹರಿಸಿದ್ದಾರೆಂದು ಭಾವಿಸಲಾಗಿತ್ತು.</p>.<p>ಆದರೆ, ಅವರು ಮಗುವಿಗೆ ಊಟ ಮಾಡಿಸಿ, ನಂತರ ಪೊಲೀಸರಿಗೆ ಒಪ್ಪಿಸಲು ಠಾಣೆಗೆ ಬಂದರು. ಆಗ, ‘ಮಗು ಅಪಹರಣವಾಗಿಲ್ಲ. ಬದಲಿಗೆ ತಾಯಿಯೇ ಮರೆತು ಬಂದಿದ್ದಾರೆ’ ಎಂಬುದು ದೃಢವಾಯಿತು. ವಿಷಯ ಮನವರಿಕೆಯಾದ ಪೊಲೀಸರು ಮಗುವನ್ನು ತಾಯಿಯ ಸುಪರ್ದಿಗೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>