ಕುಟುಂಬ ಸಮೇತರಾಗಿ ಶುಕ್ರವಾರ ಹಾಸನಾಂಬ ದೇವಾಲಯಕ್ಕೆ ಭೇಟಿ ನೀಡಿ ಹಾಸನಾಂಬೆ ಹಾಗೂ ಸಿದ್ದೇಶ್ವರ ಸ್ವಾಮಿ ದರ್ಶನ ಪಡೆದ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, ಸಚಿವ ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಕುರಿತು ಮುಖ್ಯಮಂತ್ರಿ ಮತ್ತು ಕೇಂದ್ರ ನಾಯಕರು ಕೈಗೊಳ್ಳುವ ತೀರ್ಮಾನಕ್ಕೆ ಎಲ್ಲ ಶಾಸಕರು ಬದ್ಧರಾಗಿರುತ್ತಾರೆ. ಎರಡೂ ವಿಧಾನಸಭೆ ಉಪ ಚುನಾವಣೆ, ನಾಲ್ಕು ವಿಧಾನ ಪರಿಷತ್ ಚುನಾವಣೆಯಲ್ಲೂ ಬಿಜೆಪಿ ಅಭ್ಯರ್ಥಿಗಳು ಗೆಲವು ಸಾಧಿಸಿದ್ದಾರೆ. ಚುನಾವಣೆ ಎಂದರೆ ವಿರೋಧ ಪಕ್ಷಗಳಿಗೆ ಚಳಿ, ಜ್ವರ ಬಂದಂತಾಗಿದೆ. ಚುನಾವಣಾ ಪೂರ್ವವದಲ್ಲಿ ಕಾಂಗ್ರೆಸ್ ನಾಯಕರು ಈ ಚುನಾವಣೆ ಫಲಿತಾಂಶ ಮುಂದಿನ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ ಎಂದು ಹೇಳಿದ್ದರು. ಮೋದಿ ಮತ್ತು ಯಡಿಯೂರಪ್ಪ ಅವರ ಆಡಳಿತ ಮೆಚ್ಚಿ ಜನತೆ ಬೆಂಬಲಿಸಿದ್ದಾರೆ. ಕ್ಷೇತ್ರದ ಅಭಿವೃದ್ಧಿಗೆ ಆದ್ಯತೆ ನೀಡಲಾಗುವುದು ಎಂದು ತಿಳಿಸಿದರು.