‘ಬೆಳಿಗ್ಗೆ 9 ರಿಂದ 11.05 ರವರೆಗೂ ನಗರಸಭೆ ಕಚೇರಿಯಲ್ಲಿದ್ದೆ. ಯಾರೂ ಬಂದಿಲ್ಲ’ ಎಂದು ಚುನಾವಣಾಧಿಕಾರಿ
ಸ್ಪಷ್ಪಪಡಿಸಿದರು. ಒಂದು ಪಕ್ಷಕ್ಕೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಈ ರೀತಿ ಮಾಡಲಾಗುತ್ತಿದೆ ಎಂದು ಜೆಡಿಎಸ್ ಸದಸ್ಯರು ಆರೋಪಿಸಿ ಚುನಾವಣಾಧಿಕಾರಿ ವಿರುದ್ಧವೇ ಪ್ರತಿಭಟನೆ ನಡೆಸಿದರು. ಜೆಡಿಎಸ್, ಬಿಜೆಪಿ ಸದಸ್ಯರು ಪರಸ್ಪರ ಆರೋಪ, ಪ್ರತ್ಯಾರೋಪದಲ್ಲಿ ತೊಡಗಿದರು.ಸಭೆಯಲ್ಲಿ ಗದ್ದಲ ಉಂಟಾಯಿತು.