ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಳೆಯಿಂದ ಆಗಿರುವ ಅನಾಹುತವನ್ನು ಕಣ್ಣಿಂದ ನೋಡಲು ಆಗುವುದಿಲ್ಲ. ಬೆಳಗಾವಿಯಲ್ಲಿ ಆಗಿರುವ ನಷ್ಟ ಸರಿಪಡಿಸಲು ಎಷ್ಟು ವರ್ಷ ಬೇಕಾಗುತ್ತದೆ ಗೊತ್ತಿಲ್ಲ. ಅನೇಕ ಕಡೆ ಮನೆ ನೆಲಸಮವಾಗಿ ಜನರು ಬೀದಿಗೆ ಬಿದ್ದಿದ್ದಾರೆ. ನೊಂದ ಜನರಿಗೆ ಪಕ್ಷಾತೀತವಾಗಿ ನೆರವಾಗುವುದು ಜನಪ್ರತಿನಿಧಿಗಳ ಕರ್ತವ್ಯ. ಈ ಬಗ್ಗೆ ಚರ್ಚಿಸಲು ಕೂಡಲೇ ವಿಧಾನಸಭೆ ಅಧಿವೇಶನ ಕರೆಯಬೇಕು ಎಂದು ಆಗ್ರಹಿಸಿದರು.