ಸಕಲೇಶಪುರ, ಹೆತ್ತೂರು, ಕಸಬಾ ಹೋಬಳಿ ಸತ್ತಿಗಾಲ್ ಗ್ರಾಮದ ಭತ್ತದ ಗದ್ದೆ ಜಲಾವೃತಗೊಂಡಿದ್ದು, ಜಮೀನಿನಲ್ಲಿ ನೀರು ನಿಂತು ಕೃಷಿ ಚಟುವಟಿಕೆಗೆ ಅಡ್ಡಿ ಉಂಟಾಗಿದೆ. ಕಾಫಿ, ಮೆಣಸು, ಅಡಿಕೆ, ಭತ್ತದ ಬೆಳೆಗಳಿಗೆ ಹಾನಿಯುಂಟಾಗಿದೆ. ಧಾರಾಕಾರ ಮಳೆಯಿಂದಾಗಿ ಕೆಂಪು ಹೊಳೆ ತುಂಬಿ ಹರಿಯುತ್ತಿದ್ದು, ಹಳ್ಳಕೊಳ್ಳಗಳು ಮೈತುಂಬಿವೆ. ಶೀತ ಗಾಳಿ ಜೊತೆಗೆ ಸುರಿಯುವ ಜಡಿ ಮಳೆ ಜನರ ಆರೋಗ್ಯದ ಮೇಲೂ ಪರಿಣಾಮ ಬೀರಿದೆ.