‘ಕೃತಕ ಬುದ್ಧಿಮತ್ತೆ ಕ್ಷೇತ್ರಕ್ಕೆ ಸಹಕಾರ’
‘ರಾಜ್ಯದಲ್ಲಿ ಕೃತಕ ಬುದ್ಧಿಮತ್ತೆ (ಆರ್ಟಿಫಿಷಲ್ ಇಂಟಲಿಜೆನ್ಸ್) ಉದ್ಯಮಕ್ಕೆ ಒತ್ತು ನೀಡುವ ಬಗ್ಗೆ ಕೇಂದ್ರ ಸರ್ಕಾರ ಅಗತ್ಯ ಸಹಕಾರ ನೀಡಲಿದೆ’ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಹೇಳಿದರು. ‘ಸಾಫ್ಟ್ವೇರ್ ಉದ್ಯಮಕ್ಕೆ ಕರ್ನಾಟಕ ಹಬ್ ಆಗಿದೆ. ಹೀಗಾಗಿ ಆರ್ಟಿಫಿಷಲ್ ಇಂಟಲಿಜೆನ್ಸ್ ಕ್ಷೇತ್ರಕ್ಕೆ ಕರ್ನಾಟಕದಲ್ಲೂ ಉತ್ತೇಜನ ಕೊಡಬೇಕು ಎಂದು ಪ್ರಯತ್ನ ಮಾಡುತ್ತಿದ್ದೇನೆ. ಅದಕ್ಕೆ ಎಲ್ಲರ ಸಹಕಾರ ಅಗತ್ಯವಿದೆ. ಈ ಬಗ್ಗೆ ನಾನು ಕೇಂದ್ರದಲ್ಲಿ ಸಂಬಂಧಪಟ್ಟ ಎಲ್ಲ ಸಚಿವರ ಜತೆಯೂ ಚರ್ಚೆ ನಡೆಸುತ್ತೇನೆ’ ಎಂದು ಹೇಳಿದರು.