<p><strong>ಅರಸೀಕೆರೆ</strong>: ನಗರಸಭೆಯ ಚುನಾವಣೆ ಹಿಂದೆಯೇ ಈ ಎಲ್ಲರ ಚಿತ್ರ ಫಲಿತಾಂಶದತ್ತ ತಿರುಗಿದ್ದು, ನಗರಸಭೆಯ ಆಡಳಿತ ಚುಕ್ಕಾಣಿ ಯಾವ ಪಕ್ಷಕ್ಕೆ ಎಂಬ ಕುತೂಹಲ ಕೆರಳಿದೆ.</p>.<p>ಶುಕ್ರವಾರ ನಡೆದ ಚುನಾವಣೆಯಲ್ಲಿ ಶೇ 69.32ರಷ್ಟು ಮತದಾನ ಆಗಿದೆ. 31ವಾರ್ಡ್ಗಳಿಗೆ ಚುನಾವಣೆ ನಡೆಸಿದ್ದು, ಗೆಲುವಿನ ಲೆಕ್ಕಾಚಾರ ಪ್ರಮುಖ ಪಕ್ಷಗಳಲ್ಲಿ ಆರಂಭವಾಗಿದೆ.</p>.<p>ಸ್ಪಷ್ಟಬಹುಮತ ಪಡೆದು ಮರಳಿ ಅಧಿಕಾರ ಹಿಡಿಯುವ ಲೆಕ್ಕಾಚಾರದಲ್ಲಿ ಜೆಡಿಎಸ್ ಇದೆ. ಅಗತ್ಯ ಬಿದ್ದರೆ ಪಕ್ಷೇತರರ ಬೆಂಬಲ ಪಡೆಯುವ ನಿಟ್ಟಿನಲ್ಲಿಯೂ ಚಿಂತನೆ ನಡೆದಿದೆ ಎನ್ನುತ್ತಾರೆ ಮುಖಂಡರೊಬ್ಬರು.</p>.<p>ಕ್ಷೇತ್ರದ ಶಾಸಕ ಕೆ.ಎಂ.ಶಿವಲಿಂಗೇಗೌಡ ಪ್ರತೀ ವಾರ್ಡ್ನಲ್ಲಿಯೂ ಪ್ರಚಾರ ನಡೆಸಿದ್ದು, ಪ್ರಚಾರದ ಮುಂಚೂಣಿಯಲ್ಲಿ ಇದ್ದರು.</p>.<p>ಕಾಂಗ್ರೆಸ್ ಅಭ್ಯರ್ಥಿಗಳ ಪರವಾಗಿ ಪಕ್ಷದ ತಾಲ್ಲೂಕು ಮುಖಂಡರು ಮತ್ತು ಕೆಪಿಸಿಸಿ ಉಪಾಧ್ಯಕ್ಷ ಬಿ. ಶಿವರಾಂ, ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಸೇರಿ ಹಲವು ಪ್ರಚಾರ ನಡೆಸಿದ್ದರು.</p>.<p>ಸಿದ್ದರಾಮಯ್ಯ ಆಡಳಿತಾವಧಿಯಲ್ಲಿ ಕೈಗೊಂಡಿರುವ ಅಭಿವೃದ್ಧಿ ಕಾರ್ಯಗಳನ್ನು ಆಧರಿಸಿ ಇವರು ಪ್ರಚಾರ ನಡೆಸಿದ್ದಾರೆ. ಹಿನ್ನೆಲೆಯಲ್ಲಿ ಗೆಲುವಿನ ಲೆಕ್ಕಾಚಾರದ ಜೊತೆಗೆ ಪಕ್ಷೇತರರ ಒಲವು ಯಾರ ಕಡೆಗೆ ಇರಬಹುದು ಎಂಬ ಅನಿಸಿಕೆಯೂ ಫಲಿತಾಂಶದ ಕುತೂಹಲವನ್ನು ಹೆಚ್ಚಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅರಸೀಕೆರೆ</strong>: ನಗರಸಭೆಯ ಚುನಾವಣೆ ಹಿಂದೆಯೇ ಈ ಎಲ್ಲರ ಚಿತ್ರ ಫಲಿತಾಂಶದತ್ತ ತಿರುಗಿದ್ದು, ನಗರಸಭೆಯ ಆಡಳಿತ ಚುಕ್ಕಾಣಿ ಯಾವ ಪಕ್ಷಕ್ಕೆ ಎಂಬ ಕುತೂಹಲ ಕೆರಳಿದೆ.</p>.<p>ಶುಕ್ರವಾರ ನಡೆದ ಚುನಾವಣೆಯಲ್ಲಿ ಶೇ 69.32ರಷ್ಟು ಮತದಾನ ಆಗಿದೆ. 31ವಾರ್ಡ್ಗಳಿಗೆ ಚುನಾವಣೆ ನಡೆಸಿದ್ದು, ಗೆಲುವಿನ ಲೆಕ್ಕಾಚಾರ ಪ್ರಮುಖ ಪಕ್ಷಗಳಲ್ಲಿ ಆರಂಭವಾಗಿದೆ.</p>.<p>ಸ್ಪಷ್ಟಬಹುಮತ ಪಡೆದು ಮರಳಿ ಅಧಿಕಾರ ಹಿಡಿಯುವ ಲೆಕ್ಕಾಚಾರದಲ್ಲಿ ಜೆಡಿಎಸ್ ಇದೆ. ಅಗತ್ಯ ಬಿದ್ದರೆ ಪಕ್ಷೇತರರ ಬೆಂಬಲ ಪಡೆಯುವ ನಿಟ್ಟಿನಲ್ಲಿಯೂ ಚಿಂತನೆ ನಡೆದಿದೆ ಎನ್ನುತ್ತಾರೆ ಮುಖಂಡರೊಬ್ಬರು.</p>.<p>ಕ್ಷೇತ್ರದ ಶಾಸಕ ಕೆ.ಎಂ.ಶಿವಲಿಂಗೇಗೌಡ ಪ್ರತೀ ವಾರ್ಡ್ನಲ್ಲಿಯೂ ಪ್ರಚಾರ ನಡೆಸಿದ್ದು, ಪ್ರಚಾರದ ಮುಂಚೂಣಿಯಲ್ಲಿ ಇದ್ದರು.</p>.<p>ಕಾಂಗ್ರೆಸ್ ಅಭ್ಯರ್ಥಿಗಳ ಪರವಾಗಿ ಪಕ್ಷದ ತಾಲ್ಲೂಕು ಮುಖಂಡರು ಮತ್ತು ಕೆಪಿಸಿಸಿ ಉಪಾಧ್ಯಕ್ಷ ಬಿ. ಶಿವರಾಂ, ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಸೇರಿ ಹಲವು ಪ್ರಚಾರ ನಡೆಸಿದ್ದರು.</p>.<p>ಸಿದ್ದರಾಮಯ್ಯ ಆಡಳಿತಾವಧಿಯಲ್ಲಿ ಕೈಗೊಂಡಿರುವ ಅಭಿವೃದ್ಧಿ ಕಾರ್ಯಗಳನ್ನು ಆಧರಿಸಿ ಇವರು ಪ್ರಚಾರ ನಡೆಸಿದ್ದಾರೆ. ಹಿನ್ನೆಲೆಯಲ್ಲಿ ಗೆಲುವಿನ ಲೆಕ್ಕಾಚಾರದ ಜೊತೆಗೆ ಪಕ್ಷೇತರರ ಒಲವು ಯಾರ ಕಡೆಗೆ ಇರಬಹುದು ಎಂಬ ಅನಿಸಿಕೆಯೂ ಫಲಿತಾಂಶದ ಕುತೂಹಲವನ್ನು ಹೆಚ್ಚಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>