<p><strong>ಹಾಸನ:</strong> ಸೀಮೆಎಣ್ಣೆ ಸುರಿದು ಪತ್ನಿಯ ಕೊಲೆಗೆ ಯತ್ನಿಸಿ, ತಲೆಮರೆಸಿಕೊಂಡಿರುವ ಆರೋಪಿ ಶ್ರೀಮಂತ್ನನ್ನು ಕೂಡಲೇ ಬಂಧಿಸುವಂತೆ ಮಹಿಳಾ ಧ್ವನಿ ಸಮಾಜ ಸೇವಾ ಸಂಘದ ರಾಜ್ಯ ಘಟಕದ ಅಧ್ಯಕ್ಷೆ ಅನ್ನಪೂರ್ಣಗೌಡ ಒತ್ತಾಯಿಸಿದರು.</p>.<p>ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಶುಕ್ರವಾರ ಸಂತೆ ಸಮೀಪದ ಶೆಟ್ಟಿಹಳ್ಳಿ ಗ್ರಾಮದ ಸುಶ್ಮಿತಾ ಅವರನ್ನು ಆರು ತಿಂಗಳ ಹಿಂದೆ ಸಕಲೇಶಪುರ ತಾಲ್ಲೂಕು ಹೊಸೂರು ಗ್ರಾಮದ ಶ್ರೀಮಂತ್ ಎಂಬಾತನಿಗೆ ಮದುವೆ ಮಾಡಿಕೊಡಲಾಗಿತ್ತು ಎಂದರು.</p>.<p>ಬಳಿಕ ಶ್ರೀಮಂತ್, ವರದಕ್ಷಿಣೆ ತರುವಂತೆ ಸುಶ್ಮಿತಾಳಿಗೆ ಕಿರುಕುಳ ನೀಡುತ್ತಿದ್ದ. ಇದೇ ವಿಚಾರಕ್ಕೆ ಇತ್ತೀಚೆಗೆ ಜಗಳ ತೆಗೆದು, ಸುಶ್ಮಿತಾ ಮೇಲೆ ಹಲ್ಲೆ ನಡೆಸಿ, ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿ ಕೊಲೆಗೆ ಯತ್ನಿಸಿದ್ದಾನೆ ಎಂದು ಆರೋಪಿಸಿದರು.</p>.<p>ಈ ಸಂಬಂಧ ಯಸಳೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿ ವಿರುದ್ಧ ಇದುವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ. ಈ ಬಗ್ಗೆ ಪೊಲೀಸರನ್ನು ಪ್ರಶ್ನಿಸಿದರೆ, ನೀವೇ ಆರೋಪಿಯನ್ನು ಹುಡುಕಿಕೊಡಿ ಎಂದು ಉಡಾಫೆಯಿಂದ ಮಾತನಾಡುತ್ತಾರೆ ಎಂದು ದೂರಿದರು.</p>.<p>ತಲೆಮರೆಸಿಕೊಂಡಿರುವ ಆರೋಪಿ ಶ್ರೀಮಂತನನ್ನು ಬಂಧಿಸಬೇಕು. ನಿರ್ಲಕ್ಷ್ಯ ವಹಿಸಿರುವ ಯಸಳೂರು ಠಾಣೆ ಪಿಎಸ್ ಐ ಹಾಗೂ ಸರ್ಕಲ್ ಇನ್ಸ್ಪೆಕ್ಟರ್ ಅಮಾನತು ಮಾಡಬೇಕು. ಇಲ್ಲದಿದ್ದರೆ ಸಂಘಟನೆ ವತಿಯಿಂದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸುವುದಾಗಿ ಎಚ್ಚರಿಸಿದರು.</p>.<p>ಜ್ಯೋತಿ, ನೇತ್ರಾ, ರೇಣುಕಾ, ಸಂತ್ರಸ್ತೆ ಸುಶ್ಮಿತಾ ಹಾಗೂ ಶಶಿಕಲಾ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾಸನ:</strong> ಸೀಮೆಎಣ್ಣೆ ಸುರಿದು ಪತ್ನಿಯ ಕೊಲೆಗೆ ಯತ್ನಿಸಿ, ತಲೆಮರೆಸಿಕೊಂಡಿರುವ ಆರೋಪಿ ಶ್ರೀಮಂತ್ನನ್ನು ಕೂಡಲೇ ಬಂಧಿಸುವಂತೆ ಮಹಿಳಾ ಧ್ವನಿ ಸಮಾಜ ಸೇವಾ ಸಂಘದ ರಾಜ್ಯ ಘಟಕದ ಅಧ್ಯಕ್ಷೆ ಅನ್ನಪೂರ್ಣಗೌಡ ಒತ್ತಾಯಿಸಿದರು.</p>.<p>ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಶುಕ್ರವಾರ ಸಂತೆ ಸಮೀಪದ ಶೆಟ್ಟಿಹಳ್ಳಿ ಗ್ರಾಮದ ಸುಶ್ಮಿತಾ ಅವರನ್ನು ಆರು ತಿಂಗಳ ಹಿಂದೆ ಸಕಲೇಶಪುರ ತಾಲ್ಲೂಕು ಹೊಸೂರು ಗ್ರಾಮದ ಶ್ರೀಮಂತ್ ಎಂಬಾತನಿಗೆ ಮದುವೆ ಮಾಡಿಕೊಡಲಾಗಿತ್ತು ಎಂದರು.</p>.<p>ಬಳಿಕ ಶ್ರೀಮಂತ್, ವರದಕ್ಷಿಣೆ ತರುವಂತೆ ಸುಶ್ಮಿತಾಳಿಗೆ ಕಿರುಕುಳ ನೀಡುತ್ತಿದ್ದ. ಇದೇ ವಿಚಾರಕ್ಕೆ ಇತ್ತೀಚೆಗೆ ಜಗಳ ತೆಗೆದು, ಸುಶ್ಮಿತಾ ಮೇಲೆ ಹಲ್ಲೆ ನಡೆಸಿ, ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿ ಕೊಲೆಗೆ ಯತ್ನಿಸಿದ್ದಾನೆ ಎಂದು ಆರೋಪಿಸಿದರು.</p>.<p>ಈ ಸಂಬಂಧ ಯಸಳೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿ ವಿರುದ್ಧ ಇದುವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ. ಈ ಬಗ್ಗೆ ಪೊಲೀಸರನ್ನು ಪ್ರಶ್ನಿಸಿದರೆ, ನೀವೇ ಆರೋಪಿಯನ್ನು ಹುಡುಕಿಕೊಡಿ ಎಂದು ಉಡಾಫೆಯಿಂದ ಮಾತನಾಡುತ್ತಾರೆ ಎಂದು ದೂರಿದರು.</p>.<p>ತಲೆಮರೆಸಿಕೊಂಡಿರುವ ಆರೋಪಿ ಶ್ರೀಮಂತನನ್ನು ಬಂಧಿಸಬೇಕು. ನಿರ್ಲಕ್ಷ್ಯ ವಹಿಸಿರುವ ಯಸಳೂರು ಠಾಣೆ ಪಿಎಸ್ ಐ ಹಾಗೂ ಸರ್ಕಲ್ ಇನ್ಸ್ಪೆಕ್ಟರ್ ಅಮಾನತು ಮಾಡಬೇಕು. ಇಲ್ಲದಿದ್ದರೆ ಸಂಘಟನೆ ವತಿಯಿಂದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸುವುದಾಗಿ ಎಚ್ಚರಿಸಿದರು.</p>.<p>ಜ್ಯೋತಿ, ನೇತ್ರಾ, ರೇಣುಕಾ, ಸಂತ್ರಸ್ತೆ ಸುಶ್ಮಿತಾ ಹಾಗೂ ಶಶಿಕಲಾ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>