ನಿಡಿಗೆರೆ ಅರಣ್ಯ ಪ್ರದೇಶದಲ್ಲಿ ‘ಸೀಗೆ’ ಇರುವುದನ್ನು ಖಚಿತಪಡಿಸಿಕೊಂಡ ಅರಣ್ಯ ಇಲಾಖೆ ತಂಡ, ಬಿಕ್ಕೋಡು ಬಳಿಯಿರುವ ತಾತ್ಕಾಲಿಕ ಶಿಬಿರದಿಂದ ಲಾರಿಗಳ ಮೂಲಕ ನಿಡಿಗೆರೆ ಅರಣ್ಯ ಪ್ರದೇಶಕ್ಕೆ ಸಾಕಾನೆಗಳನ್ನು ಸ್ಥಳಾಂತರ ಮಾಡಿ, ಕಾರ್ಯಾಚರಣೆ ಆರಂಭಿಸಿತು. ಮಧ್ಯಾಹ್ನ ವೈದ್ಯರು ‘ಸೀಗೆ’ಗೆ ಅರಿವಳಿಕೆ ಚುಚ್ಚುಮದ್ದು ನೀಡಿದರು. ಡಾಟ್ ಚುಚ್ಚಿಕೊಂಡ ನಂತರವೂ ಕಿ.ಮೀ.ಗಟ್ಟಲೆ ಓಡಿದ ‘ಸೀಗೆ’, ಕೊನೆಗೆ ಪ್ರಜ್ಞೆತಪ್ಪಿ ಬಿತ್ತು. ಅದನ್ನು ಆರೈಕೆ ಮಾಡಿದ ಅರಣ್ಯ ಇಲಾಖೆ ಸಿಬ್ಬಂದಿ, ಹಗ್ಗದಿಂದ ಬಂಧಿಸಿದರು. ಪ್ರಜ್ಞೆ ಮರಳಿದ ನಂತರ ಸ್ಥಳಾಂತರಿಸಿದರು.