‘ಹಲಸುಲಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಿರೆಹಳ್ಳಿ, ಮೈಲಹಳ್ಳಿ, ಮಾಸುವಳ್ಳಿ ಗ್ರಾಮದ ಸುತ್ತಮುತ್ತ ಅಂದಾಜು 14 ಕಾಡಾನೆಗಳ ಗುಂಪು ಬೀಡುಬಿಟ್ಟಿವೆ. ಕಾಫಿ ತೋಟಗಳಲ್ಲಿ ಈಗ ಕಾಫಿ ಗಿಡಗಳ ಕಸಿ ಮಾಡುವುದು, ಚಿಗುರು ತೆಗೆಯುವುದು, ಮೆಣಸು, ಕಾಫಿಗೆ ಔಷಧ ಸಿಂಪಡಣೆ, ಹಳ ಹೊಡೆಯುವ ಕೆಲಸ ನಡೆಯುತ್ತಿದೆ. ಕಾಡಾನೆ ಭಯದಿಂದ ಕೂಲಿ ಕಾರ್ಮಿಕರು ಕೆಲಸಕ್ಕೆ ಬರಲು ಭಯಪಡುತ್ತಿದ್ದಾರೆ’ ಎಂದು ಕರ್ನಾಟಕ ಬೆಳೆಗಾರರ ಒಕ್ಕೂಟದ ಮಾಜಿ ಅಧ್ಯಕ್ಷ ಬಾಳ್ಳುಪೇಟೆ ಜಗನ್ನಾಥ್ ‘ಪ್ರಜಾವಾಣಿ’ಗೆ ತಿಳಿಸಿದರು.