<p>ಆಲೂರು ತಾಲ್ಲೂಕಿನ ಪಾಳ್ಯ ಹೋಬಳಿ ಹೆದ್ದುರ್ಗ ಎಂಬ ಪುಟ್ಟ ಹಳ್ಳಿಯಿಂದ ಬೆಳೆದ ಕೃಷಿಕ ಮಹಿಳೆ ನಂದಿನಿ ಕಾಫಿ ಬೆಳೆಗಾರರ ಪರ ಹೋರಾಟದಲ್ಲಿ ದಾಖಲೆ ನಿರ್ಮಿಸಿದವರು.</p>.<p>2019 ರಲ್ಲಿ ಕಾಫಿ ಬೆಳೆಗಾರರ ಸಂಸ್ಥೆಯ ಕಾರ್ಯದರ್ಶಿಯಾಗಿದ್ದ ಅವರು, ತಮ್ಮ ಅವಧಿಯಲ್ಲಿ ಅಧ್ಯಕ್ಷ, ಪ್ರಧಾನ ಕಾರ್ಯದರ್ಶಿ, ಖಜಾಂಚಿ ಸೇರಿದಂತೆ ಪ್ರಮುಖ ಹುದ್ದೆಗಳಲ್ಲಿ ಮಹಿಳೆಯರೇ ಆಯ್ಕೆಯಾಗುವಂತೆ ಮಾಡಿದ್ದರು.</p>.<p>ಅತಿವೃಷ್ಟಿಯಲ್ಲಿ ಕಾಫಿ ಬೆಳೆಯನ್ನು ಸೇರ್ಪಡೆ ಮಾಡಬೇಕೆಂದು ಹೋರಾಟ ನಡೆಸಿ ಯಶಸ್ವಿಯಾದವರು. ಕಾಫಿ ಬೆಳೆಗೆ ಅತಿವೃಷ್ಟಿ ಪರಿಹಾರ ದೊರೆಯುವಂತೆ ಮಾಡಿದ್ದೇ ಅವರ ಸಾಧನೆ. ಆ ಮೂಲಕ ಕಾಫಿ ಬೆಳೆಗಾರರ ಸಂಘಟನೆಯಲ್ಲಿ ಮಹಿಳೆಯರೂ ಸಕ್ರಿಯವಾಗಿ ಕಾರ್ಯನಿರ್ವಹಿಸಬಲ್ಲರು ಎಂಬುದನ್ನು ನಿರೂಪಿಸಿದರು. ಸಾಹಿತ್ಯ ಕ್ಷೇತ್ರದಲ್ಲೂ ಗುರುತಿಸಿಕೊಂಡಿರುವ ಅವರು, ದ್ವಿತೀಯ ಪಿಯುಸಿವರೆಗೂ ಓದಿದ್ದಾರೆ. ಪತಿಯೊಂದಿಗೆ ಕಾಫಿ ತೋಟ ನಿರ್ವಹಿಸುತ್ತಿದ್ದಾರೆ.</p>.<p>ಸ್ಥಳೀಯ ದಿನಪತ್ರಿಕೆಗಳಿಗೆ ಮಣ್ಣು, ಕೃಷಿಗೆ ಸಂಬಂಧಿಸಿದ ಅಂಕಣ ಬರಹಗಳನ್ನು ಬರೆಯುವುದರೊಂದಿಗೆ ಬರಹಗಾರರಾಗಿ ಹೊರ ಹೊಮ್ಮಿದರು. ಹಲವು ಕವನ ಸಂಕಲನಗಳ ಜೊತೆಗೆ ಲಲಿತ ಪ್ರಬಂಧಗಳ ಸಂಕಲನ ‘ಬ್ರೂನೋ ದಿ ಡಾರ್ಲಿಂಗ್’ ಮೂಲಕವೂ ಗಮನ ಸೆಳೆದಿದ್ದಾರೆ.</p>.<p>2020 ರಲ್ಲಿ ಜಿಲ್ಲಾ ಕಾಫಿ ಬೆಳೆಗಾರರ ಸಂಘ, 2021 ರಲ್ಲಿ ರಾಜ್ಯ ಕಾಫಿ ಬೆಳೆಗಾರರ ಸಂಘದ ನಿರ್ದೇಶಕರಾಗಿದ್ದ ಅವರು, 2025-26 ಸಾಲಿಗೆ ಕರ್ನಾಟಕ ಬೆಳೆಗಾರರ ಸಂಘಕ್ಕೆ ನಿರ್ದೇಶಕಿಯಾಗಿ ಮರು ಆಯ್ಕೆಯಾಗಿದ್ದಾರೆ. ಜಿಲ್ಲೆಯ ಸಂಸ್ಕೃತಿ ಮತ್ತು ಇತಿಹಾಸ ಅಧ್ಯಯನ, ಮಲೆನಾಡಿನ ವಿವಿಧ ವಿವಾಹ ಪದ್ಧತಿಗಳ ವಿವರವಾದ ಪುಸ್ತಕಗಳನ್ನು ಹೊರತರುವ ತಯಾರಿಯಲ್ಲಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಆಲೂರು ತಾಲ್ಲೂಕಿನ ಪಾಳ್ಯ ಹೋಬಳಿ ಹೆದ್ದುರ್ಗ ಎಂಬ ಪುಟ್ಟ ಹಳ್ಳಿಯಿಂದ ಬೆಳೆದ ಕೃಷಿಕ ಮಹಿಳೆ ನಂದಿನಿ ಕಾಫಿ ಬೆಳೆಗಾರರ ಪರ ಹೋರಾಟದಲ್ಲಿ ದಾಖಲೆ ನಿರ್ಮಿಸಿದವರು.</p>.<p>2019 ರಲ್ಲಿ ಕಾಫಿ ಬೆಳೆಗಾರರ ಸಂಸ್ಥೆಯ ಕಾರ್ಯದರ್ಶಿಯಾಗಿದ್ದ ಅವರು, ತಮ್ಮ ಅವಧಿಯಲ್ಲಿ ಅಧ್ಯಕ್ಷ, ಪ್ರಧಾನ ಕಾರ್ಯದರ್ಶಿ, ಖಜಾಂಚಿ ಸೇರಿದಂತೆ ಪ್ರಮುಖ ಹುದ್ದೆಗಳಲ್ಲಿ ಮಹಿಳೆಯರೇ ಆಯ್ಕೆಯಾಗುವಂತೆ ಮಾಡಿದ್ದರು.</p>.<p>ಅತಿವೃಷ್ಟಿಯಲ್ಲಿ ಕಾಫಿ ಬೆಳೆಯನ್ನು ಸೇರ್ಪಡೆ ಮಾಡಬೇಕೆಂದು ಹೋರಾಟ ನಡೆಸಿ ಯಶಸ್ವಿಯಾದವರು. ಕಾಫಿ ಬೆಳೆಗೆ ಅತಿವೃಷ್ಟಿ ಪರಿಹಾರ ದೊರೆಯುವಂತೆ ಮಾಡಿದ್ದೇ ಅವರ ಸಾಧನೆ. ಆ ಮೂಲಕ ಕಾಫಿ ಬೆಳೆಗಾರರ ಸಂಘಟನೆಯಲ್ಲಿ ಮಹಿಳೆಯರೂ ಸಕ್ರಿಯವಾಗಿ ಕಾರ್ಯನಿರ್ವಹಿಸಬಲ್ಲರು ಎಂಬುದನ್ನು ನಿರೂಪಿಸಿದರು. ಸಾಹಿತ್ಯ ಕ್ಷೇತ್ರದಲ್ಲೂ ಗುರುತಿಸಿಕೊಂಡಿರುವ ಅವರು, ದ್ವಿತೀಯ ಪಿಯುಸಿವರೆಗೂ ಓದಿದ್ದಾರೆ. ಪತಿಯೊಂದಿಗೆ ಕಾಫಿ ತೋಟ ನಿರ್ವಹಿಸುತ್ತಿದ್ದಾರೆ.</p>.<p>ಸ್ಥಳೀಯ ದಿನಪತ್ರಿಕೆಗಳಿಗೆ ಮಣ್ಣು, ಕೃಷಿಗೆ ಸಂಬಂಧಿಸಿದ ಅಂಕಣ ಬರಹಗಳನ್ನು ಬರೆಯುವುದರೊಂದಿಗೆ ಬರಹಗಾರರಾಗಿ ಹೊರ ಹೊಮ್ಮಿದರು. ಹಲವು ಕವನ ಸಂಕಲನಗಳ ಜೊತೆಗೆ ಲಲಿತ ಪ್ರಬಂಧಗಳ ಸಂಕಲನ ‘ಬ್ರೂನೋ ದಿ ಡಾರ್ಲಿಂಗ್’ ಮೂಲಕವೂ ಗಮನ ಸೆಳೆದಿದ್ದಾರೆ.</p>.<p>2020 ರಲ್ಲಿ ಜಿಲ್ಲಾ ಕಾಫಿ ಬೆಳೆಗಾರರ ಸಂಘ, 2021 ರಲ್ಲಿ ರಾಜ್ಯ ಕಾಫಿ ಬೆಳೆಗಾರರ ಸಂಘದ ನಿರ್ದೇಶಕರಾಗಿದ್ದ ಅವರು, 2025-26 ಸಾಲಿಗೆ ಕರ್ನಾಟಕ ಬೆಳೆಗಾರರ ಸಂಘಕ್ಕೆ ನಿರ್ದೇಶಕಿಯಾಗಿ ಮರು ಆಯ್ಕೆಯಾಗಿದ್ದಾರೆ. ಜಿಲ್ಲೆಯ ಸಂಸ್ಕೃತಿ ಮತ್ತು ಇತಿಹಾಸ ಅಧ್ಯಯನ, ಮಲೆನಾಡಿನ ವಿವಿಧ ವಿವಾಹ ಪದ್ಧತಿಗಳ ವಿವರವಾದ ಪುಸ್ತಕಗಳನ್ನು ಹೊರತರುವ ತಯಾರಿಯಲ್ಲಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>