<p><strong>ಹಾಸನ:</strong> ‘ಬಿಜೆಪಿ ಸರ್ಕಾರ ಪಠ್ಯ ಪುಸ್ತಕಗಳಲ್ಲಿ ಕೇಸರೀಕರಣ ಮಾಡುವ ಹುನ್ನಾರಕ್ಕೆಕೈ ಹಾಕಿದೆ’ ಎಂದು ಕೆಪಿಸಿಸಿ ಸದಸ್ಯ ಎಚ್.ಕೆ ಮಹೇಶ್ ಆರೋಪಿಸಿದರು.</p>.<p>‘ಪಠ್ಯಪುಸ್ತಕ ಪರಿಷ್ಕರಣೆ ಹೆಸರಿನಲ್ಲಿ ಸಮಾಜಕ್ಕೆ ಬೇಡವಾದ ಕೆಲಸ ಮಾಡಲಾಗುತ್ತಿದೆ.ರೋಹಿತ್ ಚಕ್ರತೀರ್ಥ ಅಧ್ಯಕ್ಷತೆಯಲ್ಲಿ ನಡೆಯುತ್ತಿರುವ ಸಮಿತಿಯಲ್ಲಿ ಇತರೆ ಜಾತಿಯಅಥವಾ ಧರ್ಮದ ಒಬ್ಬರೇ ಸದಸ್ಯರು ಇಲ್ಲದೆ ಇರುವುದು ಹಿಡನ್ ಅಜೆಂಡಾಕ್ಕೆ ಹಿಡಿದಕೈಗನ್ನಡಿ’ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ಆಕ್ರೋಶ ವ್ಯಕ್ತಪಡಿಸಿದರು.</p>.<p>‘ಚಕ್ರವರ್ತಿ ಸೂಲಿಬೆಲೆ ವಿಷಯವನ್ನು ಪಠ್ಯಪುಸ್ತಕದಲ್ಲಿ ಸೇರಿಸಿದರೆ ಮುಂದೆ ಉನ್ನತಹುದ್ದೆಗೆ ಹೋಗಬೇಕಿರುವ ಮಕ್ಕಳ ಮನಸ್ಸಿನ ಮೇಲೆ ದುಷ್ಪರಿಣಾಮ ಬೀರುತ್ತದೆ. ಬಿಜೆಪಿ ಪರ ಪ್ರಚಾರ ಮಾಡಿದ ವ್ಯಕ್ತಿಯ ವಿಷಯವನ್ನು ಪಠ್ಯಕ್ಕೆ ಸೇರಿಸುವುದು ಎಷ್ಟು ಸರಿ’ ಎಂದು ಪ್ರಶ್ನಿಸಿದರು.</p>.<p>‘ಬಿಜೆಪಿಯವರು ನೈತಿಕ ಶಿಕ್ಷಣ ನೀಡುವ ಬದಲಾಗಿ ಕೇಸರೀಕರಣ ಗೊಳಿಸುವಹುನ್ನಾರ ಮಾಡಿದ್ದಾರೆ. ಪಠ್ಯದ ವಿಚಾರದಲ್ಲಿಯೂ ರಾಜಕೀಯ ಮಾಡಲು ಮುಂದಾಗಿರುವುದು ವಿದ್ಯಾರ್ಥಿಗಳ ಭವಿಷ್ಯಕ್ಕೆ ಮಾರಕವಾಗಿದೆ’ ಎಂದು ಕಳವಳವ್ಯಕ್ತಪಡಿಸಿದರು.</p>.<p>‘ಡಾ.ರಾಜ್ಕುಮಾರ್ ಸೇರಿದಂತೆ ಕರ್ನಾಟಕದಲ್ಲಿ ಹುಟ್ಟಿ ಸಾಧನೆ ಮಾಡಿದ ಅನೇಕಮಹನೀಯರು ಇದ್ದು, ಅವರ ಬಗ್ಗೆ ಪಠ್ಯದಲ್ಲಿ ಸೇರಿಸುವ ಕೆಲಸವನ್ನು ಸರ್ಕಾರ ಮಾಡಬೇಕು. ಅದರ ಬದಲಾಗಿ ಸುಳ್ಳುಕೋರರ ಬಗ್ಗೆ ಅಥವಾ ಒಂದು ಸಿದ್ಧಾಂತದಪರವಾಗಿರುವವರ ಬರವಣಿಗೆಯನ್ನು ಪಠ್ಯದಲ್ಲಿ ಸೇರಿಸುವುದು ಸೂಕ್ತವಲ್ಲ’ ಎಂದರು.</p>.<p>ವಕೀಲ ಪ್ರಸನ್ನ ಮಾತನಾಡಿ, ‘ಪಠ್ಯದ ಮರುಮುದ್ರಣದಿಂದ ಸುಮಾರು ಎರಡೂವರೆಸಾವಿರ ಕೋಟಿ ರೂಪಾಯಿ ಸರ್ಕಾರಕ್ಕೆ ಹೊರೆ ಬೀಳಲಿದೆ. ಈಗಾಗಲೇ ಕೋವಿಡ್ ಸಂಕಷ್ಟದ ನಡುವೆಯೂ ಸರ್ಕಾರ ಸಾರ್ವಜನಿಕರ ಹಣವನ್ನು ಇನ್ನೊಂದು ರೀತಿಯಲ್ಲಿ ಲೂಟಿ ಮಾಡಲು ಮುಂದಾಗಿರುವುದು ಖಂಡನೀಯ’ ಎಂದರು.</p>.<p>ವಕೀಲರಾದ ಮಂಜುನಾಥ್, ಗಂಗಾಧರ್, ನಾಗರಾಜ್, ರಂಗಸ್ವಾಮಿ, ಸತೀಶ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾಸನ:</strong> ‘ಬಿಜೆಪಿ ಸರ್ಕಾರ ಪಠ್ಯ ಪುಸ್ತಕಗಳಲ್ಲಿ ಕೇಸರೀಕರಣ ಮಾಡುವ ಹುನ್ನಾರಕ್ಕೆಕೈ ಹಾಕಿದೆ’ ಎಂದು ಕೆಪಿಸಿಸಿ ಸದಸ್ಯ ಎಚ್.ಕೆ ಮಹೇಶ್ ಆರೋಪಿಸಿದರು.</p>.<p>‘ಪಠ್ಯಪುಸ್ತಕ ಪರಿಷ್ಕರಣೆ ಹೆಸರಿನಲ್ಲಿ ಸಮಾಜಕ್ಕೆ ಬೇಡವಾದ ಕೆಲಸ ಮಾಡಲಾಗುತ್ತಿದೆ.ರೋಹಿತ್ ಚಕ್ರತೀರ್ಥ ಅಧ್ಯಕ್ಷತೆಯಲ್ಲಿ ನಡೆಯುತ್ತಿರುವ ಸಮಿತಿಯಲ್ಲಿ ಇತರೆ ಜಾತಿಯಅಥವಾ ಧರ್ಮದ ಒಬ್ಬರೇ ಸದಸ್ಯರು ಇಲ್ಲದೆ ಇರುವುದು ಹಿಡನ್ ಅಜೆಂಡಾಕ್ಕೆ ಹಿಡಿದಕೈಗನ್ನಡಿ’ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ಆಕ್ರೋಶ ವ್ಯಕ್ತಪಡಿಸಿದರು.</p>.<p>‘ಚಕ್ರವರ್ತಿ ಸೂಲಿಬೆಲೆ ವಿಷಯವನ್ನು ಪಠ್ಯಪುಸ್ತಕದಲ್ಲಿ ಸೇರಿಸಿದರೆ ಮುಂದೆ ಉನ್ನತಹುದ್ದೆಗೆ ಹೋಗಬೇಕಿರುವ ಮಕ್ಕಳ ಮನಸ್ಸಿನ ಮೇಲೆ ದುಷ್ಪರಿಣಾಮ ಬೀರುತ್ತದೆ. ಬಿಜೆಪಿ ಪರ ಪ್ರಚಾರ ಮಾಡಿದ ವ್ಯಕ್ತಿಯ ವಿಷಯವನ್ನು ಪಠ್ಯಕ್ಕೆ ಸೇರಿಸುವುದು ಎಷ್ಟು ಸರಿ’ ಎಂದು ಪ್ರಶ್ನಿಸಿದರು.</p>.<p>‘ಬಿಜೆಪಿಯವರು ನೈತಿಕ ಶಿಕ್ಷಣ ನೀಡುವ ಬದಲಾಗಿ ಕೇಸರೀಕರಣ ಗೊಳಿಸುವಹುನ್ನಾರ ಮಾಡಿದ್ದಾರೆ. ಪಠ್ಯದ ವಿಚಾರದಲ್ಲಿಯೂ ರಾಜಕೀಯ ಮಾಡಲು ಮುಂದಾಗಿರುವುದು ವಿದ್ಯಾರ್ಥಿಗಳ ಭವಿಷ್ಯಕ್ಕೆ ಮಾರಕವಾಗಿದೆ’ ಎಂದು ಕಳವಳವ್ಯಕ್ತಪಡಿಸಿದರು.</p>.<p>‘ಡಾ.ರಾಜ್ಕುಮಾರ್ ಸೇರಿದಂತೆ ಕರ್ನಾಟಕದಲ್ಲಿ ಹುಟ್ಟಿ ಸಾಧನೆ ಮಾಡಿದ ಅನೇಕಮಹನೀಯರು ಇದ್ದು, ಅವರ ಬಗ್ಗೆ ಪಠ್ಯದಲ್ಲಿ ಸೇರಿಸುವ ಕೆಲಸವನ್ನು ಸರ್ಕಾರ ಮಾಡಬೇಕು. ಅದರ ಬದಲಾಗಿ ಸುಳ್ಳುಕೋರರ ಬಗ್ಗೆ ಅಥವಾ ಒಂದು ಸಿದ್ಧಾಂತದಪರವಾಗಿರುವವರ ಬರವಣಿಗೆಯನ್ನು ಪಠ್ಯದಲ್ಲಿ ಸೇರಿಸುವುದು ಸೂಕ್ತವಲ್ಲ’ ಎಂದರು.</p>.<p>ವಕೀಲ ಪ್ರಸನ್ನ ಮಾತನಾಡಿ, ‘ಪಠ್ಯದ ಮರುಮುದ್ರಣದಿಂದ ಸುಮಾರು ಎರಡೂವರೆಸಾವಿರ ಕೋಟಿ ರೂಪಾಯಿ ಸರ್ಕಾರಕ್ಕೆ ಹೊರೆ ಬೀಳಲಿದೆ. ಈಗಾಗಲೇ ಕೋವಿಡ್ ಸಂಕಷ್ಟದ ನಡುವೆಯೂ ಸರ್ಕಾರ ಸಾರ್ವಜನಿಕರ ಹಣವನ್ನು ಇನ್ನೊಂದು ರೀತಿಯಲ್ಲಿ ಲೂಟಿ ಮಾಡಲು ಮುಂದಾಗಿರುವುದು ಖಂಡನೀಯ’ ಎಂದರು.</p>.<p>ವಕೀಲರಾದ ಮಂಜುನಾಥ್, ಗಂಗಾಧರ್, ನಾಗರಾಜ್, ರಂಗಸ್ವಾಮಿ, ಸತೀಶ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>