ಆಟೋ, ಟ್ಯಾಕ್ಸಿ ಮುಂತಾದ ಅಸಂಘಟಿತ ಸಾರಿಗೆ ಕಾರ್ಮಿಕರಿಗೆ ಕಲ್ಯಾಣ ಮಂಡಳಿ ರಚನೆ ಮಾಡಬೇಕು. ಹಮಾಲಿ ಕಾರ್ಮಿಕರು, ಬೀದಿಬದಿ ವ್ಯಾಪಾರಿಗಳು, ಮೆಕ್ಯಾನಿಕ್ಗಳು, ಮನೆಗೆಲಸದ ಮಹಿಳೆಯರು ಸೇರಿ ವಿವಿಧ ವಿಭಾಗಗಳಿಗೆ ಈಗಾಗಲೇ ಕಾರ್ಮಿಕ ಇಲಾಖೆ ರೂಪಿಸಿರುವ ಅಸಂಘಟಿತ ಕಾರ್ಮಿಕರ ಭವಿಷ್ಯ ನಿಧಿ ಕರಡನ್ನು ಶಾಸನವನ್ನಾಗಿ ವಿಧಾನಸಭೆಯಲ್ಲಿ ಅಂಗೀಕರಿಸಬೇಕು. ಅದಕ್ಕೆ ಅಗತ್ಯವಿರುವ ಸೆಸ್ ಸಂಗ್ರಹಕ್ಕೆ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.