ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ 14 ತಿಂಗಳಿಂದ ತಮ್ಮನ್ನು ನಡೆಸಿಕೊಂಡ ರೀತಿ, ಅಭಿವೃದ್ಧಿಯ ನಡೆಯ ಬಗ್ಗೆ ಟೀಕಾ ಪ್ರಹಾರ ನಡೆಸಿದರು.
‘ಈವರೆಗೂ ಜಿಲ್ಲೆಯಲ್ಲಿ ಆಧುನಿಕ ಬ್ರಿಟಿಷರ ಆಡಳಿತ ಜಾರಿಯಲ್ಲಿತ್ತು. ನಾನು ಒಬ್ಬ ಶಾಸಕ ಎಂಬ ಕನಿಷ್ಠ ಸೌಜನ್ಯ ತೋರದೆ ಉಡಾಫೆ ಹಾಗೂ ನಿಕೃಷ್ಟವಾಗಿ ನಡೆಸಿಕೊಂಡರು. ಕ್ಷೇತ್ರದಲ್ಲಿ ಏನು ನಡೆಯುತ್ತಿದೆ ಎಂಬುದು ತಿಳಿಯುತ್ತಿರಲಿಲ್ಲ’ ಎಂದು ಬೇಸರ ವ್ಯಕ್ತಪಡಿಸಿದರು.