ನಗರದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಸರ್ಕಾರ ಯಾವುದೇ ಕಾರಣಕ್ಕೂ ಬೀಳುವುದಿಲ್ಲ, ಬಿಜೆಪಿ ನಾಯಕರು ಡೆಡ್ಲೈನ್ ಕೊಡತ್ತಲೇ ಇದ್ದಾರೆ. ಇದು ಐದನೇ ಡೆಡ್ ಲೈನ್ ಆಗಿದೆ. ಯಾವ ಶಾಸಕರೂ ಬಿಜೆಪಿಗೆ ಹೋಗುವುದಿಲ್ಲ. ಬಿಜೆಪಿ ನಾಯಕರು ರಾಜಕೀಯ ವ್ಯವಸ್ಥೆ ಹಾಳು ಮಾಡಲು ಹೊರಟಿರುವುದು ಸರಿಯಲ್ಲ. ಒಳ್ಳೆಯ ಕೆಲಸ ಮಾಡಲು ಬೆಂಬಲ ಕೊಡಬೇಕು. ಮುಕ್ತವಾಗಿ ಸರ್ಕಾರ ನಡೆಸಲು ಅವಕಾಶ ನೀಡಬೇಕು’ ಎಂದು ತಿಳಿಸಿದರು.