ಕಾಮಗಾರಿ ನಡೆಯುತ್ತಿರುವ ಪ್ರದೇಶದ ಸರ್ಕಾರಿ ಭೂಮಿಯಾಗಿದ್ದು, ಹತ್ತಾರು ವರ್ಷಗಳಿಂದ ಕೂಲಿ ಕಾರ್ಮಿಕರು, ಬಡವರು ಮನೆಗಳನ್ನು ಕಟ್ಟಿಕೊಂಡು ಬದುಕು ಸಾಗಿಸುತ್ತಿದ್ದಾರೆ. ಅಕ್ರಮ ಸಕ್ರಮಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಎತ್ತಿನಹೊಳೆ ಯೋಜನೆ ಕಾಮಗಾರಿ ನಡೆಸುವ ಬಗ್ಗೆ ನಿವಾಸಿಗಳಿಗೆ ಇಲಾಖೆಯಿಂದ ಯಾವುದೇ ನೋಟೀಸ್ ನೀಡದೆ. ಪುನರ್ವಸತಿ ಕಲ್ಪಿಸದೆ ಏಕಾಏಕಿ ಬಂದು ಕಾಮಗಾರಿ ನಡೆಸಿ ಗ್ರಾಮಸ್ಥರಿಗೆ ಸಮಸ್ಯೆ ಉಂಟು ಮಾಡಿದ್ದಾರೆ. ಈ ಸಂಬಂಧ ಯೋಜನೆಯ ಎಂಜಿನಿರ್ಗಳನ್ನು ಪ್ರಶ್ನಿಸಿದರೆ ಬೇಜವಾಬ್ದಾರಿ ಉತ್ತರ ನೀಡುತ್ತಾರೆ ಎಂದು ಅರೋಪಿಸಿದ್ದಾರೆ.