<p><strong>ಚನ್ನರಾಯಪಟ್ಟಣ</strong>: ಪಟ್ಟಣದ ಶಾಲಿನಿ ವಿದ್ಯಾಶಾಲೆಯಲ್ಲಿ ಶನಿವಾರ ಶಾಲಾ ಆವರಣದಲ್ಲಿ ಗಿಡನೆಡುವ ಮೂಲಕ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.</p>.<p>ಹಿರಿಯ ಸಿವಿಲ್ ನ್ಯಾಯಾಧೀಶರಾದ ಎ. ಅರುಣಕುಮಾರಿ ಮಾತನಾಡಿ, 'ವಿದ್ಯಾರ್ಥಿಗಳು ಶಿಕ್ಷಣದ ಜತೆಯಲ್ಲಿ ಯೋಗಾಸನ, ಪ್ರಾಣಾಯಾಮ ಮಾಡಬೇಕು. ದೇಹ ಮತ್ತು ಮನಸನ್ನು ಸಮಸ್ಥಿತಿಗೆ ತರುವ ಶಕ್ತಿ ಯೋಗಕ್ಕೆ ಇದ್ದು, ವಿದ್ಯಾರ್ಥಿಗಳು ನಿತ್ಯ ಯೋಗಾಸನ ಮಾಡಬೇಕು’ ಎಂದು ಸಲಹೆ ನೀಡಿದರು.</p>.<p>ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಕುಸುಮಾ ಮಾತನಾಡಿ, ‘ಪ್ರಪಂಚಕ್ಕೆ ಯೋಗಾಸನವನ್ನು ಪರಿಚಯಿಸಿದ್ದು ಭಾರತ. ಸದೃಢ ಆರೋಗ್ಯ ಮತ್ತು ಮನ ಶಾಂತಿಗೆ ಯೋಗಾಸನದ ಅವಶ್ಯಕತೆ ಇದೆ’ ಎಂದು ಹೇಳಿದರು.</p>.<p>ರಾಜ್ಯಮಕ್ಕಳ ಸಾಹಿತ್ಯ ಪರಿಷತ್ತು ಅದ್ಯಕ್ಷ ಸಿ.ಎನ್. ಅಶೋಕ್ ಮಾತನಾಡಿ, ‘ಯೋಗಾಸನ ಮಾಡುವುದರಿಂದ ರೋಗಗಳಿಂದ ದೂರ ಇರಬಹುದು’ ಎಂದು ತಿಳಿಸಿದರು.</p>.<p>ಪುರಸಭೆಯ ಮುಖ್ಯಾಧಿಕಾರಿ ಆರ್. ಯತೀಶ್ಕುಮಾರ್, ಶಿಕ್ಷಣ ಸಂಸ್ಥೆಯ ಅಧ್ಯಕ್ಷ ನಂಜುಂಡೇಗೌಡ, ಪ್ರಾಂಶುಪಾಲರಾದ ಮಮತಾ, ಮುಖ್ಯ ಶಿಕ್ಷಕಿ ದೀಪ್ತಿ, ಶಿಕ್ಷಕ ಸಮಾಜಸೇವಕ ಸಿ.ಎಸ್. ಮನೋಹರ್, ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿ ಸಿ.ಎ. ವಿವೇಕ್, ಶಿಕ್ಷಕರಾದ ಲತಾ, ಪದ್ಮಶ್ರೀ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚನ್ನರಾಯಪಟ್ಟಣ</strong>: ಪಟ್ಟಣದ ಶಾಲಿನಿ ವಿದ್ಯಾಶಾಲೆಯಲ್ಲಿ ಶನಿವಾರ ಶಾಲಾ ಆವರಣದಲ್ಲಿ ಗಿಡನೆಡುವ ಮೂಲಕ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.</p>.<p>ಹಿರಿಯ ಸಿವಿಲ್ ನ್ಯಾಯಾಧೀಶರಾದ ಎ. ಅರುಣಕುಮಾರಿ ಮಾತನಾಡಿ, 'ವಿದ್ಯಾರ್ಥಿಗಳು ಶಿಕ್ಷಣದ ಜತೆಯಲ್ಲಿ ಯೋಗಾಸನ, ಪ್ರಾಣಾಯಾಮ ಮಾಡಬೇಕು. ದೇಹ ಮತ್ತು ಮನಸನ್ನು ಸಮಸ್ಥಿತಿಗೆ ತರುವ ಶಕ್ತಿ ಯೋಗಕ್ಕೆ ಇದ್ದು, ವಿದ್ಯಾರ್ಥಿಗಳು ನಿತ್ಯ ಯೋಗಾಸನ ಮಾಡಬೇಕು’ ಎಂದು ಸಲಹೆ ನೀಡಿದರು.</p>.<p>ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಕುಸುಮಾ ಮಾತನಾಡಿ, ‘ಪ್ರಪಂಚಕ್ಕೆ ಯೋಗಾಸನವನ್ನು ಪರಿಚಯಿಸಿದ್ದು ಭಾರತ. ಸದೃಢ ಆರೋಗ್ಯ ಮತ್ತು ಮನ ಶಾಂತಿಗೆ ಯೋಗಾಸನದ ಅವಶ್ಯಕತೆ ಇದೆ’ ಎಂದು ಹೇಳಿದರು.</p>.<p>ರಾಜ್ಯಮಕ್ಕಳ ಸಾಹಿತ್ಯ ಪರಿಷತ್ತು ಅದ್ಯಕ್ಷ ಸಿ.ಎನ್. ಅಶೋಕ್ ಮಾತನಾಡಿ, ‘ಯೋಗಾಸನ ಮಾಡುವುದರಿಂದ ರೋಗಗಳಿಂದ ದೂರ ಇರಬಹುದು’ ಎಂದು ತಿಳಿಸಿದರು.</p>.<p>ಪುರಸಭೆಯ ಮುಖ್ಯಾಧಿಕಾರಿ ಆರ್. ಯತೀಶ್ಕುಮಾರ್, ಶಿಕ್ಷಣ ಸಂಸ್ಥೆಯ ಅಧ್ಯಕ್ಷ ನಂಜುಂಡೇಗೌಡ, ಪ್ರಾಂಶುಪಾಲರಾದ ಮಮತಾ, ಮುಖ್ಯ ಶಿಕ್ಷಕಿ ದೀಪ್ತಿ, ಶಿಕ್ಷಕ ಸಮಾಜಸೇವಕ ಸಿ.ಎಸ್. ಮನೋಹರ್, ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿ ಸಿ.ಎ. ವಿವೇಕ್, ಶಿಕ್ಷಕರಾದ ಲತಾ, ಪದ್ಮಶ್ರೀ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>