ಚನ್ನರಾಯಪಟ್ಟಣ: ಸಿಡಿಲು ಬಡಿದು ಯುವಕ ಸ್ಥಳದಲ್ಲೇ ಮೃತಪಟ್ಟ ಘಟನೆ ಶುಕ್ರವಾರ ಸಂಜೆ ಪಟ್ಟಣದಲ್ಲಿ ನಡೆದಿದೆ.
ಪಟ್ಟಣದ ಹೊರವಲಯಲ್ಲಿರುವ ಹೌಸಿಂಗ್ ಬೋರ್ಡ್ ಬಡಾವಣೆಯ ಉದಯ್ (18) ಮೃತ ಯುವಕ. ಮನೆಯ ಸಮೀಪ ಇದ್ದ ಮೈದಾನದಲ್ಲಿ ಸ್ನೇಹಿತರೊಂದಿಗೆ ಶುಕ್ರವಾರ ಸಂಜೆ ಕ್ರಿಕೆಟ್ ಆಡುತ್ತಿದ್ದಾಗ ತುಂತುರು ಮಳೆ ಬರುತ್ತಿತ್ತು. ಆ ಸಮಯದಲ್ಲಿ ಈತನಿಗೆ ಸಿಡಿಲು ಬಡಿದಿದೆ.