<p>ಹಾಸನ: ಪ್ರೀತಿಸಲು ನಿರಾಕರಿಸಿದ ಯುವತಿಗೆ ಯುವಕನೊಬ್ಬ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ. ತಾಲ್ಲೂಕಿನ ಅಗಿಲೆ ಬಳಿಯ ಕುಂತಿಬೆಟ್ಟದಲ್ಲಿ ಗುರುವಾರ ಮಧ್ಯಾಹ್ನ ಈ ಘಟನೆ ನಡೆದಿದೆ.</p>.<p>ಆಲೂರು ತಾಲ್ಲೂಕು ಕವಳಗೆರೆ ಗ್ರಾಮದ ಸುಚಿತ್ರಾ (21) ಕೊಲೆಯಾಗಿರುವ ಎಂಜಿನಿಯರಿಂಗ್ ವಿದ್ಯಾರ್ಥಿನಿ. ಸುಚಿತ್ರಾಳ ಸಹಪಾಠಿ ತೇಜಸ್ ಈ ಕೊಲೆ ಮಾಡಿದ್ದು, ಪೊಲೀಸರು ಬಂಧಿಸಿದ್ದಾರೆ.</p>.<p>ಸುಚಿತ್ರಾ, ಮೊಸಳೆಹೊಸಳ್ಳಿ ಎಂಜಿನಿಯರ್ ಕಾಲೇಜಿನಲ್ಲಿ ಬಿಇ ಓದುತ್ತಿದ್ದಳು. ಅದೇ ಕಾಲೇಜಿನಲ್ಲಿ ತೇಜಸ್ ಸಹ ವ್ಯಾಸಂಗ ಮಾಡುತ್ತಿದ್ದ. ಇಬ್ಬರ ನಡುವಿನ ಸ್ನೇಹ, ಪ್ರೇಮಕ್ಕೆ ತಿರುಗಿತ್ತು. ಆದರೆ ನಂತರದಲ್ಲಿ ತೇಜಸ್ನನ್ನು ಪ್ರೀತಿಸಲು ಸುಚಿತ್ರಾ ನಿರಾಕರಿಸಿದ್ದಳು.</p>.<p>ಗುರುವಾರ ಬೆಳಿಗ್ಗೆ ಸುಚಿತ್ರಾಳನ್ನು ಬೈಕ್ನಲ್ಲಿ ಕರೆದೊಯ್ದಿದ್ದ ತೇಜಸ್, ನಿರ್ಜನ ಕುಂತಿಬೆಟ್ಟದಲ್ಲಿ ಪ್ರದೇಶದಲ್ಲಿ ತನ್ನನ್ನು ಪ್ರೀತಿಸುವಂತೆ ಬಲವಂತ ಮಾಡಿದ್ದಾನೆ. ಈ ಮನವಿಗೆ ಸುಚಿತ್ರಾ ಒಪ್ಪದೇ ಇದ್ದಾಗ, ಬೆಟ್ಟಗುಡ್ಡಗಳ ಮಧ್ಯೆ ಕುತ್ತಿಗೆ ಸೀಳಿ ಕೊಲೆ ಮಾಡಿದ್ದಾನೆ. ನಂತರ ಘಟನಾ ಸ್ಥಳದಿಂದ ಪರಾರಿಯಾಗಿದ್ದ.</p>.<p>ಸುದ್ದಿ ತಿಳಿದ ಗ್ರಾಮಾಂತರ ಠಾಣೆ ಪೊಲೀಸರು, ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹಾಸನ: ಪ್ರೀತಿಸಲು ನಿರಾಕರಿಸಿದ ಯುವತಿಗೆ ಯುವಕನೊಬ್ಬ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ. ತಾಲ್ಲೂಕಿನ ಅಗಿಲೆ ಬಳಿಯ ಕುಂತಿಬೆಟ್ಟದಲ್ಲಿ ಗುರುವಾರ ಮಧ್ಯಾಹ್ನ ಈ ಘಟನೆ ನಡೆದಿದೆ.</p>.<p>ಆಲೂರು ತಾಲ್ಲೂಕು ಕವಳಗೆರೆ ಗ್ರಾಮದ ಸುಚಿತ್ರಾ (21) ಕೊಲೆಯಾಗಿರುವ ಎಂಜಿನಿಯರಿಂಗ್ ವಿದ್ಯಾರ್ಥಿನಿ. ಸುಚಿತ್ರಾಳ ಸಹಪಾಠಿ ತೇಜಸ್ ಈ ಕೊಲೆ ಮಾಡಿದ್ದು, ಪೊಲೀಸರು ಬಂಧಿಸಿದ್ದಾರೆ.</p>.<p>ಸುಚಿತ್ರಾ, ಮೊಸಳೆಹೊಸಳ್ಳಿ ಎಂಜಿನಿಯರ್ ಕಾಲೇಜಿನಲ್ಲಿ ಬಿಇ ಓದುತ್ತಿದ್ದಳು. ಅದೇ ಕಾಲೇಜಿನಲ್ಲಿ ತೇಜಸ್ ಸಹ ವ್ಯಾಸಂಗ ಮಾಡುತ್ತಿದ್ದ. ಇಬ್ಬರ ನಡುವಿನ ಸ್ನೇಹ, ಪ್ರೇಮಕ್ಕೆ ತಿರುಗಿತ್ತು. ಆದರೆ ನಂತರದಲ್ಲಿ ತೇಜಸ್ನನ್ನು ಪ್ರೀತಿಸಲು ಸುಚಿತ್ರಾ ನಿರಾಕರಿಸಿದ್ದಳು.</p>.<p>ಗುರುವಾರ ಬೆಳಿಗ್ಗೆ ಸುಚಿತ್ರಾಳನ್ನು ಬೈಕ್ನಲ್ಲಿ ಕರೆದೊಯ್ದಿದ್ದ ತೇಜಸ್, ನಿರ್ಜನ ಕುಂತಿಬೆಟ್ಟದಲ್ಲಿ ಪ್ರದೇಶದಲ್ಲಿ ತನ್ನನ್ನು ಪ್ರೀತಿಸುವಂತೆ ಬಲವಂತ ಮಾಡಿದ್ದಾನೆ. ಈ ಮನವಿಗೆ ಸುಚಿತ್ರಾ ಒಪ್ಪದೇ ಇದ್ದಾಗ, ಬೆಟ್ಟಗುಡ್ಡಗಳ ಮಧ್ಯೆ ಕುತ್ತಿಗೆ ಸೀಳಿ ಕೊಲೆ ಮಾಡಿದ್ದಾನೆ. ನಂತರ ಘಟನಾ ಸ್ಥಳದಿಂದ ಪರಾರಿಯಾಗಿದ್ದ.</p>.<p>ಸುದ್ದಿ ತಿಳಿದ ಗ್ರಾಮಾಂತರ ಠಾಣೆ ಪೊಲೀಸರು, ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>