<p><strong>ಹಾಸನ</strong>: ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಜಿಲ್ಲಾ ಶಾಖೆ ಹಾಗೂ ಎನ್.ಡಿ.ಆರ್.ಕೆ. ಪ್ರಥಮ ದರ್ಜೆ ಕಾಲೇಜುಗಳ ಸಂಯುಕ್ತ ಆಶ್ರಯದಲ್ಲಿ ರಕ್ತದಾನ ಶಿಬಿರ ಹಾಗೂ ನೇತ್ರದಾನ ಶಿಬಿರ ಹಮ್ಮಿಕೊಳ್ಳಲಾಗಿತ್ತು.</p>.<p>ಉದ್ಘಾಟಿಸಿ ಮಾತನಾಡಿದ ರೆಡ್ ಕ್ರಾಸ್ ಸಂಸ್ಥೆ ನಿರ್ದೇಶಕ ಎಸ್.ಎಸ್ ಪಾಷಾ, ಇತ್ತೀಚಿನ ದಿನಗಳಲ್ಲಿ ರಸ್ತೆ ಅಪಘಾತಗಳು ಹೆಚ್ಚಾಗುತ್ತಿದ್ದು, ಸಾಕಷ್ಟು ರಕ್ತದ ಕೊರತೆ ಇದೆ. ಈ ಬೇಡಿಕೆಯನ್ನು ಹೋಗಲಾಡಿಸಲು ಯುವಶಕ್ತಿಯು ರಕ್ತದಾನಕ್ಕೆ ಮುಂದಾಗಬೇಕು ಎಂದು ತಿಳಿಸಿದರು.</p>.<p>ರಕ್ತದಾನ ಮಾಡುವುದರಿಂದ ಹೃದಯ ಸಂಬಂಧಿ ಕಾಯಿಲೆ, ಕ್ಯಾನ್ಸರ್ ಕಾಯಿಲೆ ಹಾಗೂ ಇನ್ನಿತರ ಕಾಯಿಲೆಗಳನ್ನು ತಡೆಗಟ್ಟಬಹುದು. ರೋಗನಿರೋಧಕ ಶಕ್ತಿ ಹೆಚ್ಚುತ್ತದೆ ಎಂದು ತಿಳಿಸಿದರು.</p>.<p>ರೆಡ್ ಕ್ರಾಸ್ ಸಂಸ್ಥೆಯ ಕಾರ್ಯದರ್ಶಿ ಶಬ್ಬೀರ್ ಅಹ್ಮದ್, ರೆಡ್ ಕ್ರಾಸ್ ಸಂಸ್ಥೆಯ ಇತಿಹಾಸ, ಮುಖ್ಯ ಉದ್ದೇಶಗಳ ಬಗ್ಗೆ ಮಾಹಿತಿ ನೀಡಿದರು.</p>.<p>ನಿರ್ದೇಶಕ ಎಚ್.ಡಿ ಕುಮಾರ್, ರೆಡ್ ಕ್ರಾಸ್ ಸಂಸ್ಥೆ ಜಿಲ್ಲೆಯಲ್ಲಿ ಅನೇಕ ಮಾನವೀಯ ಮೌಲ್ಯಗಳ ಆಧಾರಿತ ಚಟುವಟಿಕೆ ಮಾಡುತ್ತಿದೆ. ಈ ಶಿಬಿರದಲ್ಲಿ ರಕ್ತದಾನ ಮಾಡಿದ ರಕ್ತದಾನಿಗಳಿಗೆ ಕೀ ಚೈನ್ ಉಡುಗೊರೆಯಾಗಿ ನೀಡಲಾಗುವುದು ಎಂದು ತಿಳಿಸಿದರು.</p>.<p>ಡಾ.ರವಿಕಾಂತ್ ಅಧ್ಯಕ್ಷತೆ ವಹಿಸಿದ್ದರು. ಈ ಶಿಬಿರದಲ್ಲಿ ಒಟ್ಟು 30 ವಿದ್ಯಾರ್ಥಿ-ವಿದ್ಯಾರ್ಥಿನಿಯರು ರಕ್ತದಾನ ಮಾಡಿದರು. ಡಾಕ್ಟರ್ ಅಗರವಾಲ್ ಕಣ್ಣಿನ ಆಸ್ಪತ್ರೆಯ ವತಿಯಿಂದ 100ಕ್ಕೂ ಹೆಚ್ಚಿನ ಜನ ವಿದ್ಯಾರ್ಥಿಗಳ ನೇತ್ರ ತಪಾಸಣೆ ಮಾಡಲಾಯಿತು.</p>.<p>ರೆಡ್ ಕ್ರಾಸ್ ಸಂಸ್ಥೆಯ ನಿರ್ದೇಶಕರಾದ ಜಯೇಂದ್ರ ಕುಮಾರ್, ಗಿರೀಶ್, ಭೀಮರಾಜ್, ಸಂಯೋಜಕ ಅವಿನಾಶ್, ಶಿವೇಗೌಡ, ತಿಲಕ್ ಹಾಗೂ ಕಾರ್ಯಕ್ರಮ ಸಂಯೋಜಕ ಮಧು ಕೆ.ಆರ್. ಇತರರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾಸನ</strong>: ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಜಿಲ್ಲಾ ಶಾಖೆ ಹಾಗೂ ಎನ್.ಡಿ.ಆರ್.ಕೆ. ಪ್ರಥಮ ದರ್ಜೆ ಕಾಲೇಜುಗಳ ಸಂಯುಕ್ತ ಆಶ್ರಯದಲ್ಲಿ ರಕ್ತದಾನ ಶಿಬಿರ ಹಾಗೂ ನೇತ್ರದಾನ ಶಿಬಿರ ಹಮ್ಮಿಕೊಳ್ಳಲಾಗಿತ್ತು.</p>.<p>ಉದ್ಘಾಟಿಸಿ ಮಾತನಾಡಿದ ರೆಡ್ ಕ್ರಾಸ್ ಸಂಸ್ಥೆ ನಿರ್ದೇಶಕ ಎಸ್.ಎಸ್ ಪಾಷಾ, ಇತ್ತೀಚಿನ ದಿನಗಳಲ್ಲಿ ರಸ್ತೆ ಅಪಘಾತಗಳು ಹೆಚ್ಚಾಗುತ್ತಿದ್ದು, ಸಾಕಷ್ಟು ರಕ್ತದ ಕೊರತೆ ಇದೆ. ಈ ಬೇಡಿಕೆಯನ್ನು ಹೋಗಲಾಡಿಸಲು ಯುವಶಕ್ತಿಯು ರಕ್ತದಾನಕ್ಕೆ ಮುಂದಾಗಬೇಕು ಎಂದು ತಿಳಿಸಿದರು.</p>.<p>ರಕ್ತದಾನ ಮಾಡುವುದರಿಂದ ಹೃದಯ ಸಂಬಂಧಿ ಕಾಯಿಲೆ, ಕ್ಯಾನ್ಸರ್ ಕಾಯಿಲೆ ಹಾಗೂ ಇನ್ನಿತರ ಕಾಯಿಲೆಗಳನ್ನು ತಡೆಗಟ್ಟಬಹುದು. ರೋಗನಿರೋಧಕ ಶಕ್ತಿ ಹೆಚ್ಚುತ್ತದೆ ಎಂದು ತಿಳಿಸಿದರು.</p>.<p>ರೆಡ್ ಕ್ರಾಸ್ ಸಂಸ್ಥೆಯ ಕಾರ್ಯದರ್ಶಿ ಶಬ್ಬೀರ್ ಅಹ್ಮದ್, ರೆಡ್ ಕ್ರಾಸ್ ಸಂಸ್ಥೆಯ ಇತಿಹಾಸ, ಮುಖ್ಯ ಉದ್ದೇಶಗಳ ಬಗ್ಗೆ ಮಾಹಿತಿ ನೀಡಿದರು.</p>.<p>ನಿರ್ದೇಶಕ ಎಚ್.ಡಿ ಕುಮಾರ್, ರೆಡ್ ಕ್ರಾಸ್ ಸಂಸ್ಥೆ ಜಿಲ್ಲೆಯಲ್ಲಿ ಅನೇಕ ಮಾನವೀಯ ಮೌಲ್ಯಗಳ ಆಧಾರಿತ ಚಟುವಟಿಕೆ ಮಾಡುತ್ತಿದೆ. ಈ ಶಿಬಿರದಲ್ಲಿ ರಕ್ತದಾನ ಮಾಡಿದ ರಕ್ತದಾನಿಗಳಿಗೆ ಕೀ ಚೈನ್ ಉಡುಗೊರೆಯಾಗಿ ನೀಡಲಾಗುವುದು ಎಂದು ತಿಳಿಸಿದರು.</p>.<p>ಡಾ.ರವಿಕಾಂತ್ ಅಧ್ಯಕ್ಷತೆ ವಹಿಸಿದ್ದರು. ಈ ಶಿಬಿರದಲ್ಲಿ ಒಟ್ಟು 30 ವಿದ್ಯಾರ್ಥಿ-ವಿದ್ಯಾರ್ಥಿನಿಯರು ರಕ್ತದಾನ ಮಾಡಿದರು. ಡಾಕ್ಟರ್ ಅಗರವಾಲ್ ಕಣ್ಣಿನ ಆಸ್ಪತ್ರೆಯ ವತಿಯಿಂದ 100ಕ್ಕೂ ಹೆಚ್ಚಿನ ಜನ ವಿದ್ಯಾರ್ಥಿಗಳ ನೇತ್ರ ತಪಾಸಣೆ ಮಾಡಲಾಯಿತು.</p>.<p>ರೆಡ್ ಕ್ರಾಸ್ ಸಂಸ್ಥೆಯ ನಿರ್ದೇಶಕರಾದ ಜಯೇಂದ್ರ ಕುಮಾರ್, ಗಿರೀಶ್, ಭೀಮರಾಜ್, ಸಂಯೋಜಕ ಅವಿನಾಶ್, ಶಿವೇಗೌಡ, ತಿಲಕ್ ಹಾಗೂ ಕಾರ್ಯಕ್ರಮ ಸಂಯೋಜಕ ಮಧು ಕೆ.ಆರ್. ಇತರರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>