ತಾಲ್ಲೂಕಿನ ಮಾರನಹಳ್ಳಿ ಗ್ರಾಮದ ನಾಗೇಶ್ ಎಂಬುವವರ ಪುತ್ರ ರತನ್ (26) ಮೃತಪಟ್ಟ ವ್ಯಕ್ತಿ. ಬೆಂಗಳೂರಿನಲ್ಲಿ ಉದ್ಯೋಗದಲ್ಲಿ ಇದ್ದ ಯುವಕ ಮಹಾಲಯ ಅಮಾವಾಸ್ಯೆ ಪೂಜೆಗೆಂದು ಮನೆಗೆ ಬಂದಿದ್ದ. ಸ್ನೇಹಿತರೊಂದಿಗೆ ಅಬ್ಬಿಗುಂಡಿ ಜಲಪಾತಕ್ಕೆ ಹೋಗಿದ್ದಾಗ ಈ ಘಟನೆ ನಡೆದಿದೆ. ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.