ನಂತರ ಕೋಗಿಲಮನೆಯಲ್ಲಿ ಬೈಕ್ ನಿಲ್ಲಿಸಿ ಸ್ನೇಹಿತರಾದ ಬಿಕ್ಕೋಡು ಗ್ರಾಮದ ಸಾಂಗ್ಲಿಯಾನ, ಮಲ್ಲಿಕಾರ್ಜುನ ಸೇರಿ ಸುಮಾರು 10 ಮಂದಿ ಗೆಳೆಯರ ಜೊತೆ ಬಂದೂಕು ಹಿಡಿದು ಮಧ್ಯಾಹ್ನ 3.30ರ ಸುಮಾರಿಗೆ ಕಲ್ಲಹಳ್ಳಿಅರಣ್ಯಕ್ಕೆಶಿಕಾರಿಗೆ ಹೋಗಿದ್ದರು. ಈ ಸಂದರ್ಭದಲ್ಲಿ ಬಂದೂಕುನಿಂದ ಹಾರಿದ ಗುಂಡು ಮಧುಗೆ ತಗುಲಿದೆ. ಇದನ್ನು ಕಂಡು ಜೊತೆಯಲ್ಲಿದ್ದ ಕೆಲವರು ಪರಾರಿಯಾಗಿದ್ದರೆ, ಸಾಂಗ್ಲಿಯಾನ ಮತ್ತು ಮಲ್ಲಿಕಾರ್ಜುನ ಅವರು ರಕ್ತದ ಮಡುವಿನಲ್ಲಿ ಬಿದ್ದಿದ್ದ ಮಧುನನ್ನು ಹಾಸನದ ಆಸ್ಪತ್ರೆಗೆ ದಾಖಲಿಸಿ ಹೊರಟು ಹೋಗಿದ್ದಾರೆ. ಚಿಕಿತ್ಸೆಗೆ ಸ್ಪಂದಿಸದೆ ಮಧು ಮೃತಪಟ್ಟಿದ್ದಾನೆ.
‘ ಸ್ನೇಹಿತರೊಂದಿಗೆ ಹೋದಮಗ ಹೆಣವಾಗಿದ್ದಾನೆ. ಶಿಕಾರಿಗೆ ತೆರಳಿದ್ದ ವೇಳೆ ಆಕಸ್ಮಿಕವಾಗಿ ಗುಂಡು ತಗುಲಿತೋ, ಅಥವಾ ಸ್ನೇಹಿತರೇ ಜೀವ ತೆಗೆದರೋ ಗೊತ್ತಿಲ್ಲ. ಈ ಬಗ್ಗೆ ತನಿಖೆ ನಡೆಸಿ ನಮಗೆ ನ್ಯಾಯಕೊಡಿಸಬೇಕು’ ಎಂದು ಮೃತ ಮಧು ತಂದೆ ಮಹೇಶ್ ಆಗ್ರಹಿಸಿದರು.