<p><strong>ಬೇಲೂರು: </strong>ತಾಲ್ಲೂಕಿನ ಕಲ್ಲಹಳ್ಳಿ ಮೀಸಲು ಅರಣ್ಯ ಪ್ರದೇಶದಲ್ಲಿ ಶಿಕಾರಿಗೆ ಹೋಗಿದ್ದ ಸಂದರ್ಭದಲ್ಲಿ ಆಕಸ್ಮಿಕವಾಗಿ ತಗುಲಿದ ಗುಂಡಿಗೆ ಕುಶಾವರ ಗ್ರಾಮದ ಮಧು (24) ಮೃತಪಟ್ಟಿದ್ದಾನೆ.</p>.<p>ಘಟನೆ ಬಳಿಕ ಈತನೊಂದಿಗಿದ್ದ ಸ್ನೇಹಿತರು ತಲೆ ಮರೆಸಿಕೊಂಡಿದ್ದು, ಮಗನ ಸಾವಿನ ಬಗ್ಗೆ ಪೋಷಕರು ಅನುಮಾನ ವ್ಯಕ್ತಪಡಿಸಿದ್ದಾರೆ.</p>.<p>ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದ ಮಧು, ಲಾಕ್ಡೌನ್ನಿಂದಾಗಿ ಸ್ವಗ್ರಾಮಕ್ಕೆ ಬಂದು ಜಮೀನಿನಲ್ಲಿ ಕೆಲಸ ಮಾಡಿಕೊಂಡಿದ್ದ. ಭಾನುವಾರ ಶುಂಠಿ ಹೊಲದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಸ್ನೇಹಿತರು ಕರೆ ಮಾಡಿದ್ದಾರೆ. ಬೇಲೂರಿಗೆ ಹೋಗಿ ಬರುತ್ತೇನೆಂದು ತಾಯಿಗೆ ಹೇಳಿ ಟಿವಿಎಸ್ ಮೊಪೆಡ್ನಲ್ಲಿ ತೆರಳಿದ್ದ.</p>.<p>ನಂತರ ಕೋಗಿಲಮನೆಯಲ್ಲಿ ಬೈಕ್ ನಿಲ್ಲಿಸಿ ಸ್ನೇಹಿತರಾದ ಬಿಕ್ಕೋಡು ಗ್ರಾಮದ ಸಾಂಗ್ಲಿಯಾನ, ಮಲ್ಲಿಕಾರ್ಜುನ ಸೇರಿ ಸುಮಾರು 10 ಮಂದಿ ಗೆಳೆಯರ ಜೊತೆ ಬಂದೂಕು ಹಿಡಿದು ಮಧ್ಯಾಹ್ನ 3.30ರ ಸುಮಾರಿಗೆ ಕಲ್ಲಹಳ್ಳಿಅರಣ್ಯಕ್ಕೆಶಿಕಾರಿಗೆ ಹೋಗಿದ್ದರು. ಈ ಸಂದರ್ಭದಲ್ಲಿ ಬಂದೂಕುನಿಂದ ಹಾರಿದ ಗುಂಡು ಮಧುಗೆ ತಗುಲಿದೆ. ಇದನ್ನು ಕಂಡು ಜೊತೆಯಲ್ಲಿದ್ದ ಕೆಲವರು ಪರಾರಿಯಾಗಿದ್ದರೆ, ಸಾಂಗ್ಲಿಯಾನ ಮತ್ತು ಮಲ್ಲಿಕಾರ್ಜುನ ಅವರು ರಕ್ತದ ಮಡುವಿನಲ್ಲಿ ಬಿದ್ದಿದ್ದ ಮಧುನನ್ನು ಹಾಸನದ ಆಸ್ಪತ್ರೆಗೆ ದಾಖಲಿಸಿ ಹೊರಟು ಹೋಗಿದ್ದಾರೆ. ಚಿಕಿತ್ಸೆಗೆ ಸ್ಪಂದಿಸದೆ ಮಧು ಮೃತಪಟ್ಟಿದ್ದಾನೆ.<br /><br />‘ ಸ್ನೇಹಿತರೊಂದಿಗೆ ಹೋದಮಗ ಹೆಣವಾಗಿದ್ದಾನೆ. ಶಿಕಾರಿಗೆ ತೆರಳಿದ್ದ ವೇಳೆ ಆಕಸ್ಮಿಕವಾಗಿ ಗುಂಡು ತಗುಲಿತೋ, ಅಥವಾ ಸ್ನೇಹಿತರೇ ಜೀವ ತೆಗೆದರೋ ಗೊತ್ತಿಲ್ಲ. ಈ ಬಗ್ಗೆ ತನಿಖೆ ನಡೆಸಿ ನಮಗೆ ನ್ಯಾಯಕೊಡಿಸಬೇಕು’ ಎಂದು ಮೃತ ಮಧು ತಂದೆ ಮಹೇಶ್ ಆಗ್ರಹಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೇಲೂರು: </strong>ತಾಲ್ಲೂಕಿನ ಕಲ್ಲಹಳ್ಳಿ ಮೀಸಲು ಅರಣ್ಯ ಪ್ರದೇಶದಲ್ಲಿ ಶಿಕಾರಿಗೆ ಹೋಗಿದ್ದ ಸಂದರ್ಭದಲ್ಲಿ ಆಕಸ್ಮಿಕವಾಗಿ ತಗುಲಿದ ಗುಂಡಿಗೆ ಕುಶಾವರ ಗ್ರಾಮದ ಮಧು (24) ಮೃತಪಟ್ಟಿದ್ದಾನೆ.</p>.<p>ಘಟನೆ ಬಳಿಕ ಈತನೊಂದಿಗಿದ್ದ ಸ್ನೇಹಿತರು ತಲೆ ಮರೆಸಿಕೊಂಡಿದ್ದು, ಮಗನ ಸಾವಿನ ಬಗ್ಗೆ ಪೋಷಕರು ಅನುಮಾನ ವ್ಯಕ್ತಪಡಿಸಿದ್ದಾರೆ.</p>.<p>ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದ ಮಧು, ಲಾಕ್ಡೌನ್ನಿಂದಾಗಿ ಸ್ವಗ್ರಾಮಕ್ಕೆ ಬಂದು ಜಮೀನಿನಲ್ಲಿ ಕೆಲಸ ಮಾಡಿಕೊಂಡಿದ್ದ. ಭಾನುವಾರ ಶುಂಠಿ ಹೊಲದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಸ್ನೇಹಿತರು ಕರೆ ಮಾಡಿದ್ದಾರೆ. ಬೇಲೂರಿಗೆ ಹೋಗಿ ಬರುತ್ತೇನೆಂದು ತಾಯಿಗೆ ಹೇಳಿ ಟಿವಿಎಸ್ ಮೊಪೆಡ್ನಲ್ಲಿ ತೆರಳಿದ್ದ.</p>.<p>ನಂತರ ಕೋಗಿಲಮನೆಯಲ್ಲಿ ಬೈಕ್ ನಿಲ್ಲಿಸಿ ಸ್ನೇಹಿತರಾದ ಬಿಕ್ಕೋಡು ಗ್ರಾಮದ ಸಾಂಗ್ಲಿಯಾನ, ಮಲ್ಲಿಕಾರ್ಜುನ ಸೇರಿ ಸುಮಾರು 10 ಮಂದಿ ಗೆಳೆಯರ ಜೊತೆ ಬಂದೂಕು ಹಿಡಿದು ಮಧ್ಯಾಹ್ನ 3.30ರ ಸುಮಾರಿಗೆ ಕಲ್ಲಹಳ್ಳಿಅರಣ್ಯಕ್ಕೆಶಿಕಾರಿಗೆ ಹೋಗಿದ್ದರು. ಈ ಸಂದರ್ಭದಲ್ಲಿ ಬಂದೂಕುನಿಂದ ಹಾರಿದ ಗುಂಡು ಮಧುಗೆ ತಗುಲಿದೆ. ಇದನ್ನು ಕಂಡು ಜೊತೆಯಲ್ಲಿದ್ದ ಕೆಲವರು ಪರಾರಿಯಾಗಿದ್ದರೆ, ಸಾಂಗ್ಲಿಯಾನ ಮತ್ತು ಮಲ್ಲಿಕಾರ್ಜುನ ಅವರು ರಕ್ತದ ಮಡುವಿನಲ್ಲಿ ಬಿದ್ದಿದ್ದ ಮಧುನನ್ನು ಹಾಸನದ ಆಸ್ಪತ್ರೆಗೆ ದಾಖಲಿಸಿ ಹೊರಟು ಹೋಗಿದ್ದಾರೆ. ಚಿಕಿತ್ಸೆಗೆ ಸ್ಪಂದಿಸದೆ ಮಧು ಮೃತಪಟ್ಟಿದ್ದಾನೆ.<br /><br />‘ ಸ್ನೇಹಿತರೊಂದಿಗೆ ಹೋದಮಗ ಹೆಣವಾಗಿದ್ದಾನೆ. ಶಿಕಾರಿಗೆ ತೆರಳಿದ್ದ ವೇಳೆ ಆಕಸ್ಮಿಕವಾಗಿ ಗುಂಡು ತಗುಲಿತೋ, ಅಥವಾ ಸ್ನೇಹಿತರೇ ಜೀವ ತೆಗೆದರೋ ಗೊತ್ತಿಲ್ಲ. ಈ ಬಗ್ಗೆ ತನಿಖೆ ನಡೆಸಿ ನಮಗೆ ನ್ಯಾಯಕೊಡಿಸಬೇಕು’ ಎಂದು ಮೃತ ಮಧು ತಂದೆ ಮಹೇಶ್ ಆಗ್ರಹಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>