‘ಮರಳು ಸಂಗ್ರಹಕ್ಕೆ ನಾನು ಶಿಫಾರಸು ಮಾಡಿರುವ ಬಗ್ಗೆ ದಾಖಲೆ ಇದ್ದರೆ ನೀಡಲಿ. ದಾಳಿ ವೇಳೆ ಓಷಿಯನ್ ಕಂಪನಿಯವರು ನನ್ನ ಹೆಸರು ಹೇಳಿದ್ದಾರೋ, ಇಲ್ಲವೋ ಎಂಬುದು ಗೊತ್ತಿಲ್ಲ. ಒಂದು ವೇಳೆ ಹೇಳಿದ್ದರೆ ಯಾವ ಕಾರಣಕ್ಕೆ ಎಂಬುದುನ್ನು ತಿಳಿದುಕೊಳ್ಳಬೇಕು. ಮಂಗಳೂರಿನಲ್ಲಿರುವ ಗುತ್ತಿಗೆದಾರನನ್ನು ಸಂಪರ್ಕಿಸಲು ಪ್ರಯತ್ನಿಸಿದಾಗ ಮೊಬೈಲ್ ಸ್ವಿಚ್ ಆಗಿತ್ತು. ಗುರುವಾರ ನೋಟಿಸ್ಗೆ ಉತ್ತರ ನೀಡಲಾಗುವುದು’ ಎಂದು ಸುಪ್ರದೀಪ್ ಯಜಮಾನ್ ‘ಪ್ರಜಾವಾಣಿ’ಗೆ ತಿಳಿಸಿದರು.