ಅಂಗಡಿಯ ಉಗ್ರಾಣದಲ್ಲಿ ಪ್ಲಾಸ್ಟಿಕ್ ಸಂಗ್ರಹಿಸಲಾಗಿದೆ ಎಂಬ ಮಾಹಿತಿ ಮೇರೆಗೆ ಪುರಸಭೆ ಅಧ್ಯಕ್ಷೆ ಕೆ.ಎಸ್.ಉಮಾ (ಮುದ್ದಮ್ಮ) ಮತ್ತು ಮುಖ್ಯಾಧಿಕಾರಿ ಬಿ.ಸಿ.ಬಸವರಾಜು ನೇತೃತ್ವದಲ್ಲಿ ವೆಂಕಟೇಶ್ವರ್ ಪ್ರಿಂಟಿಂಗ್ ಪ್ರೆಸ್ ಮೇಲೆ ದಾಳಿ ನಡೆಸಲಾಯಿತು. ಪ್ಲಾಸ್ಟಿಕ್ ಲೋಟ, ತಟ್ಟೆ, ಥರ್ಮಾಕೋಲ್ ತಟ್ಟೆ, ಪ್ಲಾಸ್ಟಿಕ್ ದೊನ್ನೆ ಇನ್ನಿತರ ಪ್ಲಾಸ್ಟಿಕ್ ಸಾಮಗ್ರಿಗಳನ್ನು ವಶಪಡಿಸಿಕೊಂಡರು.