<p><strong>ಸಕಲೇಶಪುರ:</strong> ಪುರಸಭೆಗಳ ಉಸ್ತುವಾರಿಗೆ ನಗರಾಭಿವೃದ್ಧಿ ಕೋಶ ಯೋಜನಾ ನಿರ್ದೇಶಕರ ಹುದ್ದೆ ಹಾಗೂ ಸಹಾಯಕ ಕಾರ್ಯಪಾಲ ಎಂಜಿನಿಯರ್ ಹುದ್ದೆಗಳು `ವೇಸ್ಟ್ ಬಾಡಿಗಳಿದ್ದಂತೆ~ ಎಂದು ಶಾಸಕ ಎಚ್.ಕೆ.ಕುಮಾರಸ್ವಾಮಿ ಟೀಕಿಸಿದರು.<br /> <br /> ಭಾನುವಾರ ಹೇಮಾವತಿ ನದಿಗೆ ಬಾಗಿನ ಅರ್ಪಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭ್ರಷ್ಟಾಚಾರ, ಕಳಪೆ ಕಾಮಗಾರಿಗಳು, ಸಾರ್ವಜನಿಕ ಹಣ ದುರುಪಯೋಗ ಇವುಗಳನ್ನು ತಡೆಯುವಲ್ಲಿ ನಗರಸಭೆ ಅಧಿಕಾರಿಗಳು ವಿಫಲರಾಗಿದ್ದಾರೆ ಎಂದರು.<br /> <br /> <strong>ತನಿಖೆಗೆ ಆಗ್ರಹ: </strong>ಪುರಸಭೆಯಲ್ಲಿ ಮೂರು ವರ್ಷಗಳ ಅವಧಿಯಲ್ಲಿ ಸುಮಾರು 12 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣ ಮಾಡಿರುವ ಎಲ್ಲಾ ರಸ್ತೆಗಳು ಕಳಪೆ ಕಾಮಗಾರಿಗಳಿಂದ ಸಂಪೂರ್ಣವಾಗಿ ಗುಂಡಿ ಬಿದ್ದು ವಾಹನಗಳ ಸಂಚಾರಕ್ಕೆ ಅಡ್ಡಿಯಾಗಿದೆ. ಈ ಬಗ್ಗೆ ಸಮಗ್ರ ತನಿಖೆ ಕೈಗೊಂಡು ತಪ್ಪಿತಸ್ಥ ಅಧಿಕಾರಿಗಳು ಹಾಗೂ ಕಾಮಗಾರಿ ನಿರ್ವಹಣೆ ಮಾಡಿರುವ ಗುತ್ತಿಗೆದಾರರ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹಿಸಲಾಗುವುದು ಎಂದರು.<br /> <br /> ನೆಲಮಂಗಲ- ಬಿ.ಸಿ.ರೋಡ್ ನಡುವೆ ಚಥುಸ್ಪತ ರಸ್ತೆ ಕಾಮಗಾರಿ ಪ್ರಗತಿಯಲ್ಲಿ ಇರುವುದರಿಂದ ಶಿರಾಡಿ ಘಾಟ್ನಲ್ಲಿ ರಸ್ತೆ ವಿಸ್ತರಣೆಗೆ ರಕ್ಷಿತ ಅರಣ್ಯ ಕಾಯಿದೆ ಅಡ್ಡಿಯಾಗಿದೆ. ಈ ಬಗ್ಗೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಕೇಂದ್ರ ಸರ್ಕಾರದ ಗಮನಕ್ಕೆ ತಂದಿದ್ದಾರೆ ಎಂದರು.<br /> <br /> ತಹಸಿಲ್ದಾರ್ ಚಂದ್ರಮ್ಮ, ಪುರಸಭಾ ಅಧ್ಯಕ್ಷ ಎಸ್.ಡಿ.ಆದರ್ಶ, ಉಪಾಧ್ಯಕ್ಷ ಉಮೇಶ್ ಆಚಾರ್, ಜಿ.ಪಂ. ಸದಸ್ಯರಾದ ಬೈರಮುಡಿ ಚಂದ್ರು, ಸುಲೋಚನಾ ರಾಮಕೃಷ್ಣ, ಪುರಸಭಾ ಮಾಜಿ ಅಧ್ಯಕ್ಷ ಮಲ್ನಾಡ್ ಜಾಕೀರ್, ಬೆಕ್ಕನಹಳ್ಳಿ ನಾಗರಾಜ್, ಎಪಿಎಂಸಿ ಸದಸ್ಯ ಸುಪ್ರದೀಪ್ತ ಯಜಮಾನ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಕಲೇಶಪುರ:</strong> ಪುರಸಭೆಗಳ ಉಸ್ತುವಾರಿಗೆ ನಗರಾಭಿವೃದ್ಧಿ ಕೋಶ ಯೋಜನಾ ನಿರ್ದೇಶಕರ ಹುದ್ದೆ ಹಾಗೂ ಸಹಾಯಕ ಕಾರ್ಯಪಾಲ ಎಂಜಿನಿಯರ್ ಹುದ್ದೆಗಳು `ವೇಸ್ಟ್ ಬಾಡಿಗಳಿದ್ದಂತೆ~ ಎಂದು ಶಾಸಕ ಎಚ್.ಕೆ.ಕುಮಾರಸ್ವಾಮಿ ಟೀಕಿಸಿದರು.<br /> <br /> ಭಾನುವಾರ ಹೇಮಾವತಿ ನದಿಗೆ ಬಾಗಿನ ಅರ್ಪಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭ್ರಷ್ಟಾಚಾರ, ಕಳಪೆ ಕಾಮಗಾರಿಗಳು, ಸಾರ್ವಜನಿಕ ಹಣ ದುರುಪಯೋಗ ಇವುಗಳನ್ನು ತಡೆಯುವಲ್ಲಿ ನಗರಸಭೆ ಅಧಿಕಾರಿಗಳು ವಿಫಲರಾಗಿದ್ದಾರೆ ಎಂದರು.<br /> <br /> <strong>ತನಿಖೆಗೆ ಆಗ್ರಹ: </strong>ಪುರಸಭೆಯಲ್ಲಿ ಮೂರು ವರ್ಷಗಳ ಅವಧಿಯಲ್ಲಿ ಸುಮಾರು 12 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣ ಮಾಡಿರುವ ಎಲ್ಲಾ ರಸ್ತೆಗಳು ಕಳಪೆ ಕಾಮಗಾರಿಗಳಿಂದ ಸಂಪೂರ್ಣವಾಗಿ ಗುಂಡಿ ಬಿದ್ದು ವಾಹನಗಳ ಸಂಚಾರಕ್ಕೆ ಅಡ್ಡಿಯಾಗಿದೆ. ಈ ಬಗ್ಗೆ ಸಮಗ್ರ ತನಿಖೆ ಕೈಗೊಂಡು ತಪ್ಪಿತಸ್ಥ ಅಧಿಕಾರಿಗಳು ಹಾಗೂ ಕಾಮಗಾರಿ ನಿರ್ವಹಣೆ ಮಾಡಿರುವ ಗುತ್ತಿಗೆದಾರರ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹಿಸಲಾಗುವುದು ಎಂದರು.<br /> <br /> ನೆಲಮಂಗಲ- ಬಿ.ಸಿ.ರೋಡ್ ನಡುವೆ ಚಥುಸ್ಪತ ರಸ್ತೆ ಕಾಮಗಾರಿ ಪ್ರಗತಿಯಲ್ಲಿ ಇರುವುದರಿಂದ ಶಿರಾಡಿ ಘಾಟ್ನಲ್ಲಿ ರಸ್ತೆ ವಿಸ್ತರಣೆಗೆ ರಕ್ಷಿತ ಅರಣ್ಯ ಕಾಯಿದೆ ಅಡ್ಡಿಯಾಗಿದೆ. ಈ ಬಗ್ಗೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಕೇಂದ್ರ ಸರ್ಕಾರದ ಗಮನಕ್ಕೆ ತಂದಿದ್ದಾರೆ ಎಂದರು.<br /> <br /> ತಹಸಿಲ್ದಾರ್ ಚಂದ್ರಮ್ಮ, ಪುರಸಭಾ ಅಧ್ಯಕ್ಷ ಎಸ್.ಡಿ.ಆದರ್ಶ, ಉಪಾಧ್ಯಕ್ಷ ಉಮೇಶ್ ಆಚಾರ್, ಜಿ.ಪಂ. ಸದಸ್ಯರಾದ ಬೈರಮುಡಿ ಚಂದ್ರು, ಸುಲೋಚನಾ ರಾಮಕೃಷ್ಣ, ಪುರಸಭಾ ಮಾಜಿ ಅಧ್ಯಕ್ಷ ಮಲ್ನಾಡ್ ಜಾಕೀರ್, ಬೆಕ್ಕನಹಳ್ಳಿ ನಾಗರಾಜ್, ಎಪಿಎಂಸಿ ಸದಸ್ಯ ಸುಪ್ರದೀಪ್ತ ಯಜಮಾನ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>