ನಂತರ ಆರೋಪಿ ನಟರಾಜ್ ಅದೇ ಗ್ರಾಮದ ಧನಪಾಲ್, ಮಂಜುನಾಥ್ ನಾಯ್ಕ್, ಧನಂಜಯ್ ನಾಯ್ಕ್, ಸರೋಜಾ ಬಾಯಿ, ಜ್ಯೋತಿ ಅವರೊಂದಿಗೆ ಸೇರಿ ಶರತ್ ಮತ್ತು ಯೋಗೀಶ್ ಎಂಬುವವರ ಮೇಲೆ ಹಲ್ಲೆ ನಡೆಸಿದ್ದರು. ತಲೆಗೆ ತೀವ್ರ ಪೆಟ್ಟು ಬಿದ್ದ ಪರಿಣಾಮ ಶರತ್ ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ, ನಂತರ ಬೆಂಗಳೂರಿನ ನಿಮ್ಹಾನ್ಸ್ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ‘ಬದುಕುಳಿಯುವ ಸಾಧ್ಯತೆ ಇಲ್ಲ’ ಎಂಬ ವೈದ್ಯರ ಅಭಿಪ್ರಾಯದ ಮೇರೆಗೆ ಅವರನ್ನು ಗ್ರಾಮಕ್ಕೆ ವಾಪಸ್ ಕರೆತರುವಾಗ ಮಾರ್ಗಮಧ್ಯೆ ಅವರು ಮೃತಪಟ್ಟರು. ಬಾಣಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.