<p><strong>ಬಾಣಾವರ:</strong> ವಿದ್ಯಾರ್ಥಿಗಳ ಸರ್ವಾಂಗೀಣ ಬೆಳವಣಿಗೆಯ ದೃಷ್ಟಿಯಿಂದ ದೈಹಿಕ ಶಿಕ್ಷಣವನ್ನು ಕಡ್ಡಾಯ ವಿಷಯವನ್ನಾಗಿ ಸೇರ್ಪಡೆ ಗೊಳಿಸಲಾಗಿದೆ. ಆದರೆ, ಕೆಲ ವಸತಿ ಶಾಲೆಗಳಲ್ಲಿ ಮೈದಾನವೇ ಇಲ್ಲ, ಕ್ರೀಡೋಪಕರಣಗಳ ಲಭ್ಯತೆ ಮರೀಚಿಕೆ. ಇದು ದೈಹಿಕ ಮತ್ತು ಮಾನಸಿಕ ವಿಕಾಸ ಹಂತದಲ್ಲಿರುವ ಮಕ್ಕಳ ಬೆಳವಣಿಗೆಯ ದೃಷ್ಟಿಯಿಂದ ಅಡಚಣೆ ಎನ್ನಬಹುದು.<br /> <br /> ಇದಕ್ಕೆ ತಾಜಾ ಉದಾಹರಣೆ ಎಂಬಂತೆ ಬಾಣಾವರ ಹೋಬಳಿ ವ್ಯಾಪ್ತಿಯಲ್ಲಿ ಬರುವ ಚಿಕ್ಕಾರಹಳ್ಳಿ ಸಮೀಪ ನೂತನವಾಗಿ ಆಸ್ತಿತ್ವಕ್ಕೆ ಬಂದಿರುವ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ ಮೈದಾನ ಇಲ್ಲದೇ ಕ್ರೀಡಾ ಚಟುವಟಿಕೆಗೆ ಅಡ್ಡಿಯಾಗಿದೆ.<br /> <br /> ಈ ಶಾಲೆಯಲ್ಲಿ ಪ್ರಸ್ತುತ 203 ವಿದ್ಯಾರ್ಥಿನಿಯರು 6ನೇ ತರಗತಿಯಿಂದ 10ನೇ ತರಗತಿಯವರೆಗೆ ಅಭ್ಯಾಸ ಮಾಡುತ್ತಿದ್ದಾರೆ. ಈ ವಿದ್ಯಾರ್ಥಿನಿಯರ ದೈಹಿಕ ಚಟುವಟಿಕೆಗೆ ಪೂರಕವಾದ ಮೈದಾನವಾಗಲಿ ಕ್ರೀಡಾ ಉಪಕರಣ ವಾಗಲಿ ದೊರೆಯದೆ ಮಕ್ಕಳು ಕ್ರೀಡೆ ಯಿಂದ ವಂಚಿತ ರಾಗುತ್ತಿದ್ದಾರೆ. ಶಾಲೆ ಯಲ್ಲಿ ದೈಹಿಕ ಶಿಕ್ಷಣ ಶಿಕ್ಷಕಿ ಇದ್ದರೂ, ಪೂರಕ ವ್ಯವಸ್ಥೆ ಇಲ್ಲದಿರುವುದು ವ್ಯವಸ್ಥೆಗೆ ಹಿಡಿದ ಕನ್ನಡಿಯಾಗಿದೆ.<br /> <br /> ಸುಮಾರು 10 ಎಕರೆ ಪ್ರದೇಶದಲ್ಲಿ ತಲೆ ಎತ್ತಿರುವ ಈ ಸುಸಜ್ಜಿತ ಶಾಲೆ ಉದ್ಘಾಟನೆಗೊಂಡು 7–8 ತಿಂಗಳಾಗಿವೆ. ಆದರೆ, ಶಾಲೆಯ ಕ್ರೀಡಾ ವಿಭಾಗ ನಿರ್ಲಕ್ಷ್ಯಕ್ಕೆ ಒಳಗಾಗಿದೆ.<br /> <br /> ಇರುವ ಮೈದಾನವೂ ಸ್ವಚ್ಛವಾಗಿಲ್ಲದಿರುವುದರಿಂದ ಮಕ್ಕಳು ಕ್ರೀಡೆಯಲ್ಲಿ ಪಾಲ್ಗೊಂಡರೆ ಬಿದ್ದು ಗಾಯಗೊಳ್ಳುವುದು ನಿಶ್ಚಿತ. ಸಂಬಂಧಪಟ್ಟವರು ಇತ್ತ ಗಮನ ಹರಿಸಿ ವಸತಿ ಶಾಲೆಯ ವಿದ್ಯಾರ್ಥಿನಿಯರಿಗೆ ಆಟೋಟಗಳಿಗೆ ಅನುಕೂಲ ವಾಗುವಂತಹ ಕ್ರೀಡಾಂಗಣ ನಿರ್ಮಿಸ ಬೇಕು ಎಂಬುದು ಪೋಷಕರ ಒತ್ತಾಯ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾಣಾವರ:</strong> ವಿದ್ಯಾರ್ಥಿಗಳ ಸರ್ವಾಂಗೀಣ ಬೆಳವಣಿಗೆಯ ದೃಷ್ಟಿಯಿಂದ ದೈಹಿಕ ಶಿಕ್ಷಣವನ್ನು ಕಡ್ಡಾಯ ವಿಷಯವನ್ನಾಗಿ ಸೇರ್ಪಡೆ ಗೊಳಿಸಲಾಗಿದೆ. ಆದರೆ, ಕೆಲ ವಸತಿ ಶಾಲೆಗಳಲ್ಲಿ ಮೈದಾನವೇ ಇಲ್ಲ, ಕ್ರೀಡೋಪಕರಣಗಳ ಲಭ್ಯತೆ ಮರೀಚಿಕೆ. ಇದು ದೈಹಿಕ ಮತ್ತು ಮಾನಸಿಕ ವಿಕಾಸ ಹಂತದಲ್ಲಿರುವ ಮಕ್ಕಳ ಬೆಳವಣಿಗೆಯ ದೃಷ್ಟಿಯಿಂದ ಅಡಚಣೆ ಎನ್ನಬಹುದು.<br /> <br /> ಇದಕ್ಕೆ ತಾಜಾ ಉದಾಹರಣೆ ಎಂಬಂತೆ ಬಾಣಾವರ ಹೋಬಳಿ ವ್ಯಾಪ್ತಿಯಲ್ಲಿ ಬರುವ ಚಿಕ್ಕಾರಹಳ್ಳಿ ಸಮೀಪ ನೂತನವಾಗಿ ಆಸ್ತಿತ್ವಕ್ಕೆ ಬಂದಿರುವ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ ಮೈದಾನ ಇಲ್ಲದೇ ಕ್ರೀಡಾ ಚಟುವಟಿಕೆಗೆ ಅಡ್ಡಿಯಾಗಿದೆ.<br /> <br /> ಈ ಶಾಲೆಯಲ್ಲಿ ಪ್ರಸ್ತುತ 203 ವಿದ್ಯಾರ್ಥಿನಿಯರು 6ನೇ ತರಗತಿಯಿಂದ 10ನೇ ತರಗತಿಯವರೆಗೆ ಅಭ್ಯಾಸ ಮಾಡುತ್ತಿದ್ದಾರೆ. ಈ ವಿದ್ಯಾರ್ಥಿನಿಯರ ದೈಹಿಕ ಚಟುವಟಿಕೆಗೆ ಪೂರಕವಾದ ಮೈದಾನವಾಗಲಿ ಕ್ರೀಡಾ ಉಪಕರಣ ವಾಗಲಿ ದೊರೆಯದೆ ಮಕ್ಕಳು ಕ್ರೀಡೆ ಯಿಂದ ವಂಚಿತ ರಾಗುತ್ತಿದ್ದಾರೆ. ಶಾಲೆ ಯಲ್ಲಿ ದೈಹಿಕ ಶಿಕ್ಷಣ ಶಿಕ್ಷಕಿ ಇದ್ದರೂ, ಪೂರಕ ವ್ಯವಸ್ಥೆ ಇಲ್ಲದಿರುವುದು ವ್ಯವಸ್ಥೆಗೆ ಹಿಡಿದ ಕನ್ನಡಿಯಾಗಿದೆ.<br /> <br /> ಸುಮಾರು 10 ಎಕರೆ ಪ್ರದೇಶದಲ್ಲಿ ತಲೆ ಎತ್ತಿರುವ ಈ ಸುಸಜ್ಜಿತ ಶಾಲೆ ಉದ್ಘಾಟನೆಗೊಂಡು 7–8 ತಿಂಗಳಾಗಿವೆ. ಆದರೆ, ಶಾಲೆಯ ಕ್ರೀಡಾ ವಿಭಾಗ ನಿರ್ಲಕ್ಷ್ಯಕ್ಕೆ ಒಳಗಾಗಿದೆ.<br /> <br /> ಇರುವ ಮೈದಾನವೂ ಸ್ವಚ್ಛವಾಗಿಲ್ಲದಿರುವುದರಿಂದ ಮಕ್ಕಳು ಕ್ರೀಡೆಯಲ್ಲಿ ಪಾಲ್ಗೊಂಡರೆ ಬಿದ್ದು ಗಾಯಗೊಳ್ಳುವುದು ನಿಶ್ಚಿತ. ಸಂಬಂಧಪಟ್ಟವರು ಇತ್ತ ಗಮನ ಹರಿಸಿ ವಸತಿ ಶಾಲೆಯ ವಿದ್ಯಾರ್ಥಿನಿಯರಿಗೆ ಆಟೋಟಗಳಿಗೆ ಅನುಕೂಲ ವಾಗುವಂತಹ ಕ್ರೀಡಾಂಗಣ ನಿರ್ಮಿಸ ಬೇಕು ಎಂಬುದು ಪೋಷಕರ ಒತ್ತಾಯ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>