<p>ಹೊಳೆನರಸೀಪುರ: `ದೇಶ ಆಧುನಿಕತೆಗೆ ತೆರೆದುಕೊಂಡಿದ್ದರೂ ಮಾನವೀಯ ಮೌಲ್ಯಗಳು ಕುಸಿಯುತ್ತಿವೆ. ಮಹಿಳೆ ಅಬಲೆ ಎನ್ನುವ ರೀತಿಯಲ್ಲಿ ಇಂದಿಗೂ ಸಹ ನೋಡಲಾಗುತ್ತಿದೆ~ ಎಂದು ಹಾಸನ ಸರ್ಕಾರಿ ಕಲಾ ಕಾಲೇಜಿನ ಸ್ನಾತಕೋತರ ಸಮಾಜ ಶಾಸ್ತ್ರ ಅಧ್ಯಯನ ವಿಭಾಗದ ಡಾ. ಲೆಷ್ಟಿನೆಂಟ್ ಜಿ.ಡಿ. ನಾರಾಯಣ ನುಡಿದರು. <br /> <br /> ಗುರುವಾರ ಇಲ್ಲಿನ ಮಹಿಳಾ ಪ್ರಥಮ ದರ್ಜೆ ಸರ್ಕಾರಿ ಕಾಲೇಜಿನಲ್ಲಿ ನಡೆದ ಆಧುನಿಕ ಮಹಿಳೆಯ ಸಂದಿಗ್ಧತೆಗಳು ಎಂಬ ವಿಚಾರ ಸಂಕಿರಣ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.<br /> <br /> ಪುರುಷ ಪ್ರಧಾನವಾದ ಈ ಸಮಾಜದಲ್ಲಿ ಮಹಿಳೆ ಯರು ಉತ್ತಮ ಹಾಗೂ ಗೌರವದ ಜೀವನ ನಡೆಸ ಬೇಕೆಂದರೆ ಎಂತಹ ಸಮಸ್ಯೆಗಳನ್ನಾದರೂ ಧೈರ್ಯ ವಾಗಿ ಎದುರಿಸಬೇಕೆ ವಿನಃ ಹೆದರಿ ಆತ್ಮಹತ್ಯೆಯಂತಹ ಪ್ರಯತ್ನಕ್ಕೆ ಕೈ ಹಾಕಬಾರದು ಎಂದು ಹೇಳಿದರು. <br /> <br /> ಪ್ರೊ.ಚಂದ್ರಕುಮಾರ್ ಮಾತನಾಡಿ, ವಿದ್ಯಾರ್ಥಿನಿ ಯರು ತಮ್ಮ ವಿದ್ಯಾಭ್ಯಾಸದ ಅವಧಿಯಲ್ಲಿ ಚೆನ್ನಾಗಿ ಅಧ್ಯಯನ ಮಾಡಬೇಕು. ಬೇರೆ ಆಕರ್ಷಣೆಗಳಿಗೆ ಒಳಗಾಗಿ ತಮ್ಮ ಜೀವನವನ್ನು ಹಾಳು ಮಾಡಿಕೊಳ್ಳಬೇಡಿ ಎಂದು ನುಡಿದರು. <br /> <br /> ಜಿ.ಪಂ. ಸದಸ್ಯೆ ಮಂಜುಳಾ ಬೈರಾಜು ಮಾತನಾಡಿ, ಎಲ್ಲಾ ಕ್ಷೇತ್ರದಲ್ಲೂ ಮಹಿಳೆಯರು ಉತ್ತಮವಾದ ಸಾಧನೆ ಮಾಡಿ ಎಂದು ಹಾರೈಸಿದರು. <br /> <br /> ಉಪನ್ಯಾಸಕ ಶಿವರಾಮೇಗೌಡ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಕುಮಾರಿ ಸರಸ್ವತಿ ಕಾರ್ಯಕ್ರಮ ನಿರೂಪಿಸಿದಳು. ಶ್ರುತಿ ಸ್ವಾಗತಿಸಿ ವಿನುತಾ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹೊಳೆನರಸೀಪುರ: `ದೇಶ ಆಧುನಿಕತೆಗೆ ತೆರೆದುಕೊಂಡಿದ್ದರೂ ಮಾನವೀಯ ಮೌಲ್ಯಗಳು ಕುಸಿಯುತ್ತಿವೆ. ಮಹಿಳೆ ಅಬಲೆ ಎನ್ನುವ ರೀತಿಯಲ್ಲಿ ಇಂದಿಗೂ ಸಹ ನೋಡಲಾಗುತ್ತಿದೆ~ ಎಂದು ಹಾಸನ ಸರ್ಕಾರಿ ಕಲಾ ಕಾಲೇಜಿನ ಸ್ನಾತಕೋತರ ಸಮಾಜ ಶಾಸ್ತ್ರ ಅಧ್ಯಯನ ವಿಭಾಗದ ಡಾ. ಲೆಷ್ಟಿನೆಂಟ್ ಜಿ.ಡಿ. ನಾರಾಯಣ ನುಡಿದರು. <br /> <br /> ಗುರುವಾರ ಇಲ್ಲಿನ ಮಹಿಳಾ ಪ್ರಥಮ ದರ್ಜೆ ಸರ್ಕಾರಿ ಕಾಲೇಜಿನಲ್ಲಿ ನಡೆದ ಆಧುನಿಕ ಮಹಿಳೆಯ ಸಂದಿಗ್ಧತೆಗಳು ಎಂಬ ವಿಚಾರ ಸಂಕಿರಣ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.<br /> <br /> ಪುರುಷ ಪ್ರಧಾನವಾದ ಈ ಸಮಾಜದಲ್ಲಿ ಮಹಿಳೆ ಯರು ಉತ್ತಮ ಹಾಗೂ ಗೌರವದ ಜೀವನ ನಡೆಸ ಬೇಕೆಂದರೆ ಎಂತಹ ಸಮಸ್ಯೆಗಳನ್ನಾದರೂ ಧೈರ್ಯ ವಾಗಿ ಎದುರಿಸಬೇಕೆ ವಿನಃ ಹೆದರಿ ಆತ್ಮಹತ್ಯೆಯಂತಹ ಪ್ರಯತ್ನಕ್ಕೆ ಕೈ ಹಾಕಬಾರದು ಎಂದು ಹೇಳಿದರು. <br /> <br /> ಪ್ರೊ.ಚಂದ್ರಕುಮಾರ್ ಮಾತನಾಡಿ, ವಿದ್ಯಾರ್ಥಿನಿ ಯರು ತಮ್ಮ ವಿದ್ಯಾಭ್ಯಾಸದ ಅವಧಿಯಲ್ಲಿ ಚೆನ್ನಾಗಿ ಅಧ್ಯಯನ ಮಾಡಬೇಕು. ಬೇರೆ ಆಕರ್ಷಣೆಗಳಿಗೆ ಒಳಗಾಗಿ ತಮ್ಮ ಜೀವನವನ್ನು ಹಾಳು ಮಾಡಿಕೊಳ್ಳಬೇಡಿ ಎಂದು ನುಡಿದರು. <br /> <br /> ಜಿ.ಪಂ. ಸದಸ್ಯೆ ಮಂಜುಳಾ ಬೈರಾಜು ಮಾತನಾಡಿ, ಎಲ್ಲಾ ಕ್ಷೇತ್ರದಲ್ಲೂ ಮಹಿಳೆಯರು ಉತ್ತಮವಾದ ಸಾಧನೆ ಮಾಡಿ ಎಂದು ಹಾರೈಸಿದರು. <br /> <br /> ಉಪನ್ಯಾಸಕ ಶಿವರಾಮೇಗೌಡ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಕುಮಾರಿ ಸರಸ್ವತಿ ಕಾರ್ಯಕ್ರಮ ನಿರೂಪಿಸಿದಳು. ಶ್ರುತಿ ಸ್ವಾಗತಿಸಿ ವಿನುತಾ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>