<p><strong>ಅರಸೀಕೆರೆ:</strong> ಗ್ರಾಮೀಣ ಪ್ರದೇಶದಲ್ಲಿ ಚುನಾವಣಾ ಸಮಯದಲ್ಲಿ ಮಾತ್ರ ರಾಜಕೀಯ ಮಾಡಬೇಕು. ಉಳಿದ ಸಂದರ್ಭದಲ್ಲಿ ಅಭಿವೃದ್ಧಿಗೆ ಸಹಕರಿಸಬೇಕು ಎಂದು ಶಾಸಕ ಕೆ.ಎಂ. ಶಿವಲಿಂಗೇಗೌಡ ಗ್ರಾಮಸ್ಥರಿಗೆ ಈಚೆಗೆ ಸಲಹೆ ನೀಡಿದರು. <br /> <br /> ತಾಲ್ಲೂಕಿನ ಎಂ.ಜಿ ಹಟ್ಟಿ, ಹೊಳಲ್ಕೆರೆ ಗ್ರಾಮಗಳ ಪರಿಶಿಷ್ಟರ ಕಾಲೊನಿಯಲ್ಲಿ ಕಾಂಕ್ರಿಟ್ ರಸ್ತೆ ನಿರ್ಮಾಣ, ಡಾಂಬರೀಕರಣ ಮತ್ತು ಹರಳಕಟ್ಟ ಗ್ರಾಮದ ಉಪ್ಪಾರರ ಸಮುದಾಯ ಭವನ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು. <br /> <br /> ಈಚೆಗೆ ಗ್ರಾಮಗಳಲ್ಲಿ ಅಭಿವೃದ್ಧಿಗಿಂತ ರಾಜಕೀಯಕ್ಕೆ ಒತ್ತು ನೀಡಲಾಗುತ್ತಿದೆ. ಜನಪ್ರತಿನಿಧಿಗಳು ರಾಜಕೀಯ ಬದಿಗಿಡಬೇಕು. ಜನಪರ ಕೆಲಸಗಳ ಕಡೆ ಗಮನ ಹರಿಸಿದರೆ ಹಳ್ಳಿಗಳು ಪ್ರಗತಿಯಾಲಿವೆ ಎಂದರು. <br /> <br /> ಗ್ರಾಮದ ಮುಖಂಡ ಎಚ್.ಜಿ. ಶಿವಮೂರ್ತಪ್ಪ ಮಾತನಾಡಿ, ತಾಲ್ಲೂಕಿನ ಅನಾವೃಷ್ಟಿ ಗಮನಿಸಿ ಶಾಸಕರು ಸರ್ಕಾರದ ಮೇಲೆ ಒತ್ತಡ ಹೇರಿ ಅರಸೀಕೆರೆ ತಾಲ್ಲೂಕನ್ನು ಬರಪೀಡಿತ ಪ್ರದೇಶ ಎಂಬ ಘೋಷಣೆಗೆ ಮಾಡಲು ಒತ್ತಡ ಹಾಕಿದ್ದಾರೆ. ಇದಕ್ಕೆ ಶಾಸಕರನ್ನು ಗ್ರಾಮಸ್ಥರ ಪರವಾಗಿ ಅಭಿನಂದಿಸುತ್ತೇನೆ ಎಂದರು. <br /> <br /> ತಾ.ಪಂ. ಮಾಜಿ ಅಧ್ಯಕ್ಷ ಕೆ.ಎಂ. ನಂಜುಂಡಪ್ಪ, ಉಪಾಧ್ಯಕ್ಷ ಹಾರನಹಳ್ಳಿ ಶಿವಮೂರ್ತಿ, ಡಿ.ಎಂ. ಕುರ್ಕೆ ಗ್ರಾ.ಪಂ. ಅಧ್ಯಕ್ಷ ಡಿ.ಕೆ ದಯಾನಂದ, ಗ್ರಾ.ಪಂ. ಸದಸ್ಯರಾದ ಶಶಿಧರ್, ಯಲ್ಲಮ್ಮ, ಗ್ರಾಮದ ಮುಖಂಡ ಎಚ್.ಎಸ್ ಷಡಕ್ಷರಿ, ಕೆ. ಶಂಕರನಹಳ್ಳಿ ಗ್ರಾ.ಪಂ. ಸದಸ್ಯರಾದ ಪಿ.ಕೆ. ಮೈಲಾರಪ್ಪ, ಮಹೇಶ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅರಸೀಕೆರೆ:</strong> ಗ್ರಾಮೀಣ ಪ್ರದೇಶದಲ್ಲಿ ಚುನಾವಣಾ ಸಮಯದಲ್ಲಿ ಮಾತ್ರ ರಾಜಕೀಯ ಮಾಡಬೇಕು. ಉಳಿದ ಸಂದರ್ಭದಲ್ಲಿ ಅಭಿವೃದ್ಧಿಗೆ ಸಹಕರಿಸಬೇಕು ಎಂದು ಶಾಸಕ ಕೆ.ಎಂ. ಶಿವಲಿಂಗೇಗೌಡ ಗ್ರಾಮಸ್ಥರಿಗೆ ಈಚೆಗೆ ಸಲಹೆ ನೀಡಿದರು. <br /> <br /> ತಾಲ್ಲೂಕಿನ ಎಂ.ಜಿ ಹಟ್ಟಿ, ಹೊಳಲ್ಕೆರೆ ಗ್ರಾಮಗಳ ಪರಿಶಿಷ್ಟರ ಕಾಲೊನಿಯಲ್ಲಿ ಕಾಂಕ್ರಿಟ್ ರಸ್ತೆ ನಿರ್ಮಾಣ, ಡಾಂಬರೀಕರಣ ಮತ್ತು ಹರಳಕಟ್ಟ ಗ್ರಾಮದ ಉಪ್ಪಾರರ ಸಮುದಾಯ ಭವನ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು. <br /> <br /> ಈಚೆಗೆ ಗ್ರಾಮಗಳಲ್ಲಿ ಅಭಿವೃದ್ಧಿಗಿಂತ ರಾಜಕೀಯಕ್ಕೆ ಒತ್ತು ನೀಡಲಾಗುತ್ತಿದೆ. ಜನಪ್ರತಿನಿಧಿಗಳು ರಾಜಕೀಯ ಬದಿಗಿಡಬೇಕು. ಜನಪರ ಕೆಲಸಗಳ ಕಡೆ ಗಮನ ಹರಿಸಿದರೆ ಹಳ್ಳಿಗಳು ಪ್ರಗತಿಯಾಲಿವೆ ಎಂದರು. <br /> <br /> ಗ್ರಾಮದ ಮುಖಂಡ ಎಚ್.ಜಿ. ಶಿವಮೂರ್ತಪ್ಪ ಮಾತನಾಡಿ, ತಾಲ್ಲೂಕಿನ ಅನಾವೃಷ್ಟಿ ಗಮನಿಸಿ ಶಾಸಕರು ಸರ್ಕಾರದ ಮೇಲೆ ಒತ್ತಡ ಹೇರಿ ಅರಸೀಕೆರೆ ತಾಲ್ಲೂಕನ್ನು ಬರಪೀಡಿತ ಪ್ರದೇಶ ಎಂಬ ಘೋಷಣೆಗೆ ಮಾಡಲು ಒತ್ತಡ ಹಾಕಿದ್ದಾರೆ. ಇದಕ್ಕೆ ಶಾಸಕರನ್ನು ಗ್ರಾಮಸ್ಥರ ಪರವಾಗಿ ಅಭಿನಂದಿಸುತ್ತೇನೆ ಎಂದರು. <br /> <br /> ತಾ.ಪಂ. ಮಾಜಿ ಅಧ್ಯಕ್ಷ ಕೆ.ಎಂ. ನಂಜುಂಡಪ್ಪ, ಉಪಾಧ್ಯಕ್ಷ ಹಾರನಹಳ್ಳಿ ಶಿವಮೂರ್ತಿ, ಡಿ.ಎಂ. ಕುರ್ಕೆ ಗ್ರಾ.ಪಂ. ಅಧ್ಯಕ್ಷ ಡಿ.ಕೆ ದಯಾನಂದ, ಗ್ರಾ.ಪಂ. ಸದಸ್ಯರಾದ ಶಶಿಧರ್, ಯಲ್ಲಮ್ಮ, ಗ್ರಾಮದ ಮುಖಂಡ ಎಚ್.ಎಸ್ ಷಡಕ್ಷರಿ, ಕೆ. ಶಂಕರನಹಳ್ಳಿ ಗ್ರಾ.ಪಂ. ಸದಸ್ಯರಾದ ಪಿ.ಕೆ. ಮೈಲಾರಪ್ಪ, ಮಹೇಶ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>