<p><strong>ಹಾಸನ :</strong> ‘ಜಾತ್ಯತೀತ ತತ್ವದ ಮೇಲೆ ಸ್ಥಾಪಿತವಾಗಿರುವ ಜೆಡಿಎಸ್ ಪಕ್ಷಕ್ಕೆ ರಾಜ್ಯದ ಮತದಾರರು ಮತ ನೀಡುವ ಮೊದಲು, ಆ ಪಕ್ಷದ ವರಿಷ್ಠರು ಫ್ಯಾಸಿಸ್ಟ್ ಶಕ್ತಿ ಬಿಜೆಪಿ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂಬುದನ್ನು ಖಚಿತಪಡಿಸಿಕೊಳ್ಳಬೇಕು’ ಎಂದು ಗುಜರಾತ್ನ ವಡ್ಗಾಂ ಕ್ಷೇತ್ರದ ಶಾಸಕ ಜಿಗ್ನೇಶ್ ಮೇವಾನಿ ಕರೆ ನೀಡಿದರು.</p>.<p>ನಗರದ ಹಾಸನಾಂಬ ಕಲಾಕ್ಷೇತ್ರದಲ್ಲಿ ಏರ್ಪಡಿಸಿದ್ದ ಸಂವಿಧಾನ ಉಳಿವಿಗಾಗಿ ಕರ್ನಾಟಕ ಸಂಕಲ್ಪ ಸಮಾವೇಶ ಉದ್ಘಾಟಿಸಿ ಮಾತನಾಡಿದರು.</p>.<p>ಜೆಡಿಎಸ್ ಯಾವ ಕಾರಣಕ್ಕೂ ಫ್ಯಾಸಿಸ್ಟ್ ಶಕ್ತಿಯೊಂದಿಗೆ ಜತೆಗೂಡುವುದಿಲ್ಲ ಎಂಬ ಭರವಸೆ ನೀಡಿದರಷ್ಟೇ ಅವರಿಗೆ ಮತ ಹಾಕಬೇಕು. ಕರ್ನಾಟಕದಲ್ಲಿ ಸೆಮಿಫೈನಲ್ ಪಂದ್ಯ ನಡೆಯುತ್ತಿದೆ. 2019ರಲ್ಲಿ ಫೈನಲ್ ಪಂದ್ಯ ಇದ್ದು, ಅದನ್ನು ಗೆಲ್ಲಬೇಕೆಂದರೆ ಸೆಮಿಫೈನಲ್ನಲ್ಲಿ ಎದುರಾಳಿಯನ್ನು ಹೊರಗಟ್ಟಬೇಕು. ಇಲ್ಲವಾದರೆ ಭಾರಿ ಕಷ್ಟವಾಗುತ್ತದೆ ಎಂದರು.</p>.<p>‘ಪ್ರಧಾನಿ ನರೇಂದ್ರ ಮೋದಿ ದೇಶದ ಪ್ರಧಾನಿಯಾಗಲು ಅರ್ಹರಲ್ಲ, ನಾಲ್ಕು ವರ್ಷದ ಆಡಳಿತಾವಧಿಯಲ್ಲಿ ಮೋದಿ ತಾವು ಮಾಡಿರುವ ಸಾಧನೆಯನ್ನು ನಾಲ್ಕು ನಿಮಿಷದಲ್ಲಿ ಹೇಳಿದರೆ ಸಾಕು. ಆದರೆ, ಅವರು ಹೇಳುವುದಿಲ್ಲ ಎಂದು ಮೋದಿ ವಿರುದ್ಧ ವಾಗ್ದಾಳಿ ನಡೆಸಿದರು.</p>.<p>ರಾಜ್ಯ ಚುನಾವಣೆಗೆ ಕಾಲಾವಕಾಶ ಕಡಿಮೆಯಿದ್ದು, ಮತದಾರರು ಆಲೋಚಿಸಬೇಕು. ಬಿಜೆಪಿ ಪರ ಪ್ರಚಾರ ಮಾಡುತ್ತಿರುವವರ ಮುಂದೆ ನಿಂತು ಅವರಿಗೆ ಸಂವಿಧಾನದ ಪಾಠ ಹೇಳಿಕೊಡಬೇಕು ಎಂದು ಸಲಹೆ ನೀಡಿದರು.</p>.<p>ನಟ ಪ್ರಕಾಶ್ ರೈ ಮಾತನಾಡಿ, ಮಾಜಿ ಪ್ರಧಾನಿ ದೇವೇಗೌಡರನ್ನು ಹಾಲಿ ಪಿಎಂ ನರೇಂದ್ರ ಮೋದಿ ವ್ಯವಸ್ಥಿತವಾಗಿ ಬಳಸಿಕೊಳ್ಳುತ್ತಿದ್ದಾರೆ. ಚುನಾವಣಾ ಮೈತ್ರಿ ಸಂಬಂಧ ಜೆಡಿಎಸ್ ತನ್ನ ನಿಲುವನ್ನು ಸ್ಪಷ್ಟಪಡಿಸಬೇಕು. ಒಂದು ವೇಳೆ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡರೆ ದೊಡ್ಡಮಟ್ಟದ ಚಳವಳಿ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.</p>.<p>‘ಪ್ರಪಂಚದ ಇತಿಹಾಸದಲ್ಲಿ ದೊಡ್ಡ ಜಾತೀವಾದಿ ಶಕ್ತಿಗಳು, ಸರ್ವಾಧಿಕಾರಿಗಳು ಮಣ್ಣು ಮುಕ್ಕಿರುವುದನ್ನು ನೋಡಬಹುದು. ದೇಶದ ಎಲ್ಲ ರಾಜಕೀಯ ಪಕ್ಷಗಳಿಗೆ ಏನಾದರೂ ಒಂದು ಸಿದ್ಧಾಂತ ಇದೆ. ಆದರೆ, ಬಿಜೆಪಿಗೆ ಯಾವುದೇ ಸಿದ್ಧಾಂತ ಇಲ್ಲ’ ಎಂದು ಟೀಕಿಸಿದರು.</p>.<p>‘ಗ್ರಾಮೀಣ ಜನರ ಮೇಲೂ ತೆರಿಗೆ ಹಾಕಿ ಅವರ ಬದುಕು ದುಸ್ತರ ಮಾಡಲಾಯಿತು. ನೋಟು ಅಮಾನ್ಯೀಕರಣದಿಂದ ಏನೂ ಪರಿಣಾಮ ಆಗಲಿಲ್ಲ. ಇದೇನಾ ಮೇಕ್ ಇನ್ ಇಂಡಿಯಾ ಎಂದರೆ?’ ಎಂದು ಪ್ರಶ್ನಿಸಿದರು.</p>.<p><strong>ಎ.ಕೆ.ಸುಬ್ಬಯ್ಯ ಅವರ ‘ರೆಡ್ ಅಲರ್ಟ್:</strong> ದೇಶ ಆಪತ್ತಿನಲ್ಲಿದೆ’ ಪುಸ್ತಕ ಬಿಡುಗಡೆ ಮಾಡಲಾಯಿತು. ಸಂವಿಧಾನ ಉಳಿವಿಗಾಗಿ ಕರ್ನಾಟಕ ಸಂಘಟನೆ ಸಮನ್ವಯಕಾರ ಕೆ.ಎಲ್.ಅಶೋಕ್, ಸಿರಿಮನೆ ನಾಗರಾಜ್, ಇರ್ಷಾದ್ ದೇಸಾಯಿ. ಸಾಹಿತಿ ರೂಪ ಹಾಸನ, ಆರ್.ಪಿ.ವೆಂಕಟೇಶಮೂರ್ತಿ, ಫಾರುಕ್ ಪಾಷ, ನಾರಾಯಣದಾಸ್, ಹೆತ್ತೂರು ನಾಗರಾಜ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾಸನ :</strong> ‘ಜಾತ್ಯತೀತ ತತ್ವದ ಮೇಲೆ ಸ್ಥಾಪಿತವಾಗಿರುವ ಜೆಡಿಎಸ್ ಪಕ್ಷಕ್ಕೆ ರಾಜ್ಯದ ಮತದಾರರು ಮತ ನೀಡುವ ಮೊದಲು, ಆ ಪಕ್ಷದ ವರಿಷ್ಠರು ಫ್ಯಾಸಿಸ್ಟ್ ಶಕ್ತಿ ಬಿಜೆಪಿ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂಬುದನ್ನು ಖಚಿತಪಡಿಸಿಕೊಳ್ಳಬೇಕು’ ಎಂದು ಗುಜರಾತ್ನ ವಡ್ಗಾಂ ಕ್ಷೇತ್ರದ ಶಾಸಕ ಜಿಗ್ನೇಶ್ ಮೇವಾನಿ ಕರೆ ನೀಡಿದರು.</p>.<p>ನಗರದ ಹಾಸನಾಂಬ ಕಲಾಕ್ಷೇತ್ರದಲ್ಲಿ ಏರ್ಪಡಿಸಿದ್ದ ಸಂವಿಧಾನ ಉಳಿವಿಗಾಗಿ ಕರ್ನಾಟಕ ಸಂಕಲ್ಪ ಸಮಾವೇಶ ಉದ್ಘಾಟಿಸಿ ಮಾತನಾಡಿದರು.</p>.<p>ಜೆಡಿಎಸ್ ಯಾವ ಕಾರಣಕ್ಕೂ ಫ್ಯಾಸಿಸ್ಟ್ ಶಕ್ತಿಯೊಂದಿಗೆ ಜತೆಗೂಡುವುದಿಲ್ಲ ಎಂಬ ಭರವಸೆ ನೀಡಿದರಷ್ಟೇ ಅವರಿಗೆ ಮತ ಹಾಕಬೇಕು. ಕರ್ನಾಟಕದಲ್ಲಿ ಸೆಮಿಫೈನಲ್ ಪಂದ್ಯ ನಡೆಯುತ್ತಿದೆ. 2019ರಲ್ಲಿ ಫೈನಲ್ ಪಂದ್ಯ ಇದ್ದು, ಅದನ್ನು ಗೆಲ್ಲಬೇಕೆಂದರೆ ಸೆಮಿಫೈನಲ್ನಲ್ಲಿ ಎದುರಾಳಿಯನ್ನು ಹೊರಗಟ್ಟಬೇಕು. ಇಲ್ಲವಾದರೆ ಭಾರಿ ಕಷ್ಟವಾಗುತ್ತದೆ ಎಂದರು.</p>.<p>‘ಪ್ರಧಾನಿ ನರೇಂದ್ರ ಮೋದಿ ದೇಶದ ಪ್ರಧಾನಿಯಾಗಲು ಅರ್ಹರಲ್ಲ, ನಾಲ್ಕು ವರ್ಷದ ಆಡಳಿತಾವಧಿಯಲ್ಲಿ ಮೋದಿ ತಾವು ಮಾಡಿರುವ ಸಾಧನೆಯನ್ನು ನಾಲ್ಕು ನಿಮಿಷದಲ್ಲಿ ಹೇಳಿದರೆ ಸಾಕು. ಆದರೆ, ಅವರು ಹೇಳುವುದಿಲ್ಲ ಎಂದು ಮೋದಿ ವಿರುದ್ಧ ವಾಗ್ದಾಳಿ ನಡೆಸಿದರು.</p>.<p>ರಾಜ್ಯ ಚುನಾವಣೆಗೆ ಕಾಲಾವಕಾಶ ಕಡಿಮೆಯಿದ್ದು, ಮತದಾರರು ಆಲೋಚಿಸಬೇಕು. ಬಿಜೆಪಿ ಪರ ಪ್ರಚಾರ ಮಾಡುತ್ತಿರುವವರ ಮುಂದೆ ನಿಂತು ಅವರಿಗೆ ಸಂವಿಧಾನದ ಪಾಠ ಹೇಳಿಕೊಡಬೇಕು ಎಂದು ಸಲಹೆ ನೀಡಿದರು.</p>.<p>ನಟ ಪ್ರಕಾಶ್ ರೈ ಮಾತನಾಡಿ, ಮಾಜಿ ಪ್ರಧಾನಿ ದೇವೇಗೌಡರನ್ನು ಹಾಲಿ ಪಿಎಂ ನರೇಂದ್ರ ಮೋದಿ ವ್ಯವಸ್ಥಿತವಾಗಿ ಬಳಸಿಕೊಳ್ಳುತ್ತಿದ್ದಾರೆ. ಚುನಾವಣಾ ಮೈತ್ರಿ ಸಂಬಂಧ ಜೆಡಿಎಸ್ ತನ್ನ ನಿಲುವನ್ನು ಸ್ಪಷ್ಟಪಡಿಸಬೇಕು. ಒಂದು ವೇಳೆ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡರೆ ದೊಡ್ಡಮಟ್ಟದ ಚಳವಳಿ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.</p>.<p>‘ಪ್ರಪಂಚದ ಇತಿಹಾಸದಲ್ಲಿ ದೊಡ್ಡ ಜಾತೀವಾದಿ ಶಕ್ತಿಗಳು, ಸರ್ವಾಧಿಕಾರಿಗಳು ಮಣ್ಣು ಮುಕ್ಕಿರುವುದನ್ನು ನೋಡಬಹುದು. ದೇಶದ ಎಲ್ಲ ರಾಜಕೀಯ ಪಕ್ಷಗಳಿಗೆ ಏನಾದರೂ ಒಂದು ಸಿದ್ಧಾಂತ ಇದೆ. ಆದರೆ, ಬಿಜೆಪಿಗೆ ಯಾವುದೇ ಸಿದ್ಧಾಂತ ಇಲ್ಲ’ ಎಂದು ಟೀಕಿಸಿದರು.</p>.<p>‘ಗ್ರಾಮೀಣ ಜನರ ಮೇಲೂ ತೆರಿಗೆ ಹಾಕಿ ಅವರ ಬದುಕು ದುಸ್ತರ ಮಾಡಲಾಯಿತು. ನೋಟು ಅಮಾನ್ಯೀಕರಣದಿಂದ ಏನೂ ಪರಿಣಾಮ ಆಗಲಿಲ್ಲ. ಇದೇನಾ ಮೇಕ್ ಇನ್ ಇಂಡಿಯಾ ಎಂದರೆ?’ ಎಂದು ಪ್ರಶ್ನಿಸಿದರು.</p>.<p><strong>ಎ.ಕೆ.ಸುಬ್ಬಯ್ಯ ಅವರ ‘ರೆಡ್ ಅಲರ್ಟ್:</strong> ದೇಶ ಆಪತ್ತಿನಲ್ಲಿದೆ’ ಪುಸ್ತಕ ಬಿಡುಗಡೆ ಮಾಡಲಾಯಿತು. ಸಂವಿಧಾನ ಉಳಿವಿಗಾಗಿ ಕರ್ನಾಟಕ ಸಂಘಟನೆ ಸಮನ್ವಯಕಾರ ಕೆ.ಎಲ್.ಅಶೋಕ್, ಸಿರಿಮನೆ ನಾಗರಾಜ್, ಇರ್ಷಾದ್ ದೇಸಾಯಿ. ಸಾಹಿತಿ ರೂಪ ಹಾಸನ, ಆರ್.ಪಿ.ವೆಂಕಟೇಶಮೂರ್ತಿ, ಫಾರುಕ್ ಪಾಷ, ನಾರಾಯಣದಾಸ್, ಹೆತ್ತೂರು ನಾಗರಾಜ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>